Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಬಿಸ್ ರೋಗ ತಡೆಗಟ್ಟಲು ಬಿಬಿಎಂಪಿ ವ್ಯಾಪ್ತಿಯ ಬೀದಿ ನಾಯಿಗಳ ಸಮೀಕ್ಷೆ

ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಹೀಗಾಗಿ ಬೀದಿ ನಾಯಿಗಳ ಸಂಖ್ಯೆ ನಿಯಂತ್ರಣ ಹಾಗೂ ರೇಬೀಸ್ ರೋಗ ತಡೆಗಟ್ಟಲು ಬಿಬಿಎಂಪಿ ವ್ಯಾಪ್ತಿಯ ಎಂಟು ವಲಯಗಳಲ್ಲಿ‌ನ ಬೀದಿ‌ ನಾಯಿಗಳ ಸಮೀಕ್ಷೆಗೆ ಪಶುಪಾಲನಾ ವಿಭಾಗ ಮುಂದಾಗಿದೆ.

ರೇಬಿಸ್ ರೋಗ ತಡೆಗಟ್ಟಲು ಬಿಬಿಎಂಪಿ ವ್ಯಾಪ್ತಿಯ ಬೀದಿ ನಾಯಿಗಳ ಸಮೀಕ್ಷೆ
ಬೀದಿ ನಾಯಿಗಳು
Follow us
TV9 Web
| Updated By: ವಿವೇಕ ಬಿರಾದಾರ

Updated on: Jul 11, 2023 | 9:21 AM

ಬೆಂಗಳೂರು: ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಹೀಗಾಗಿ ಬೀದಿ ನಾಯಿಗಳ (Dogs) ಸಂಖ್ಯೆ ನಿಯಂತ್ರಣ ಹಾಗೂ ರೇಬಿಸ್ ರೋಗ ತಡೆಗಟ್ಟಲು ಬಿಬಿಎಂಪಿ (BBMP) ವ್ಯಾಪ್ತಿಯ ಎಂಟು ವಲಯಗಳಲ್ಲಿ‌ನ ಬೀದಿ‌ ನಾಯಿಗಳ ಸಮೀಕ್ಷೆಗೆ (Survey) ಪಶುಪಾಲನಾ ವಿಭಾಗ ಮುಂದಾಗಿದೆ. ಬಿಬಿಎಂಪಿ WVS ಸರ್ವೆ 2023 ಮೊಬೈಲ್ ಆ್ಯಪ್ ಮೂಲಕ ಬೀದಿ ನಾಯಿ ಸಮೀಕ್ಷೆ ನಡೆಸಲಾಗುತ್ತದೆ. ಮೊಬೈಲ್ ಆ್ಯಪ್‌ನಲ್ಲಿ ಬೀದಿ ನಾಯಿ ಫೋಟೋ‌ ತಗೆದು ಫೋಟೋ ಅಪ್ಲೋಡ್ ಮಾಡಲಾಗುತ್ತದೆ. ಸಮೀಕ್ಷೆ ನಂತರ ನಾಯಿಗಳಿಗೆ ಸಂತಾನಹರಣ ಶಸ್ತ್ರ ಚಿಕಿತ್ಸೆ ಮತ್ತು ಆಂಟಿರೇಬೀಸ್ ಲಸಿಕೆ ನೀಡಲಾಗಿದೆಯೇ ಅಥವಾ ಇಲ್ಲವೇ ಎಂಬುವುದನ್ನು ಮಾಹಿತಿ ಅಪ್ಲೋಡ್ ಮಾಡಲಾಗುತ್ತದೆ.

ಸಂತಾನ ಹರಣ ಚಿಕಿತ್ಸೆ ಆಗದೇ ಇದ್ದರೇ, ಸಮೀಕ್ಷೆ ಮೂಲಕ ಮುಂದಿನ ದಿನಗಳಲ್ಲಿ ಬೀದಿ ನಾಯಿಗಳಿಗೆ ಚಿಕಿತ್ಸೆ ನೀಡಲಾಗುತ್ತದೆ. 2019 ನೇ ಸಾಲಿನಲ್ಲಿ ಬಿಬಿಎಂಪಿಯಿಂದ ನಡೆದ ಸಮೀಕ್ಷೆಯಲ್ಲಿ ಸುಮಾರು 3.10 ಲಕ್ಷ ಬೀದಿ ನಾಯಿಗಳಿವೆ.

ಇದನ್ನೂ ಓದಿ: ಬೆಂಗಳೂರು ನಗರದಲ್ಲಿ 16 ಸಾವಿರ, ರಾಜ್ಯದಲ್ಲಿ 2 ಲಕ್ಷ ಎಕರೆ ಕಂದಾಯ ಭೂಮಿ ಒತ್ತುವರಿ

ಒಟ್ಟು 50 ಟೀಮ್​​ಗಳನ್ನು ಮಾಡಲಾಗಿದ್ದು ಒಂದು ಟೀಮ್‌ನಲ್ಲಿ ಇಬ್ಬರು ಸಮೀಕ್ಷಾದಾರರು ಇದ್ದು, ಮೇಲ್ವಿಚಾರಣೆಗಾಗಿ 15 ಮೇಲ್ವಿಚಾರಕರನ್ನು ನಿಯೋಜನೆ ಮಾಡಲಾಗಿದೆ. ಈ ಹಿಂದೆ 2019 ರಲ್ಲಿ ಸಮೀಕ್ಷೆ ಮಾಡಿ ಸಂತಾನಹರಣ ಚಿಕಿತ್ಸೆ ನೀಡಿದ್ದು, ಈ  ಕಾರ್ಯಕ್ರಮ ಯಶಸ್ವಿ ಅನುಷ್ಟಾನದ ಬಗ್ಗೆ ತಿಳಿಯುವ ಸಲುವಾಗಿ ಬೀದಿನಾಯಿಗಳ ಸಮೀಕ್ಷೆಯ ಕಾರ್ಯ ಪ್ರಾರಂಭವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು