AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಬಿಸ್ ರೋಗ ತಡೆಗಟ್ಟಲು ಬಿಬಿಎಂಪಿ ವ್ಯಾಪ್ತಿಯ ಬೀದಿ ನಾಯಿಗಳ ಸಮೀಕ್ಷೆ

ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಹೀಗಾಗಿ ಬೀದಿ ನಾಯಿಗಳ ಸಂಖ್ಯೆ ನಿಯಂತ್ರಣ ಹಾಗೂ ರೇಬೀಸ್ ರೋಗ ತಡೆಗಟ್ಟಲು ಬಿಬಿಎಂಪಿ ವ್ಯಾಪ್ತಿಯ ಎಂಟು ವಲಯಗಳಲ್ಲಿ‌ನ ಬೀದಿ‌ ನಾಯಿಗಳ ಸಮೀಕ್ಷೆಗೆ ಪಶುಪಾಲನಾ ವಿಭಾಗ ಮುಂದಾಗಿದೆ.

ರೇಬಿಸ್ ರೋಗ ತಡೆಗಟ್ಟಲು ಬಿಬಿಎಂಪಿ ವ್ಯಾಪ್ತಿಯ ಬೀದಿ ನಾಯಿಗಳ ಸಮೀಕ್ಷೆ
ಬೀದಿ ನಾಯಿಗಳು
TV9 Web
| Edited By: ವಿವೇಕ ಬಿರಾದಾರ|

Updated on: Jul 11, 2023 | 9:21 AM

Share

ಬೆಂಗಳೂರು: ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಹೀಗಾಗಿ ಬೀದಿ ನಾಯಿಗಳ (Dogs) ಸಂಖ್ಯೆ ನಿಯಂತ್ರಣ ಹಾಗೂ ರೇಬಿಸ್ ರೋಗ ತಡೆಗಟ್ಟಲು ಬಿಬಿಎಂಪಿ (BBMP) ವ್ಯಾಪ್ತಿಯ ಎಂಟು ವಲಯಗಳಲ್ಲಿ‌ನ ಬೀದಿ‌ ನಾಯಿಗಳ ಸಮೀಕ್ಷೆಗೆ (Survey) ಪಶುಪಾಲನಾ ವಿಭಾಗ ಮುಂದಾಗಿದೆ. ಬಿಬಿಎಂಪಿ WVS ಸರ್ವೆ 2023 ಮೊಬೈಲ್ ಆ್ಯಪ್ ಮೂಲಕ ಬೀದಿ ನಾಯಿ ಸಮೀಕ್ಷೆ ನಡೆಸಲಾಗುತ್ತದೆ. ಮೊಬೈಲ್ ಆ್ಯಪ್‌ನಲ್ಲಿ ಬೀದಿ ನಾಯಿ ಫೋಟೋ‌ ತಗೆದು ಫೋಟೋ ಅಪ್ಲೋಡ್ ಮಾಡಲಾಗುತ್ತದೆ. ಸಮೀಕ್ಷೆ ನಂತರ ನಾಯಿಗಳಿಗೆ ಸಂತಾನಹರಣ ಶಸ್ತ್ರ ಚಿಕಿತ್ಸೆ ಮತ್ತು ಆಂಟಿರೇಬೀಸ್ ಲಸಿಕೆ ನೀಡಲಾಗಿದೆಯೇ ಅಥವಾ ಇಲ್ಲವೇ ಎಂಬುವುದನ್ನು ಮಾಹಿತಿ ಅಪ್ಲೋಡ್ ಮಾಡಲಾಗುತ್ತದೆ.

ಸಂತಾನ ಹರಣ ಚಿಕಿತ್ಸೆ ಆಗದೇ ಇದ್ದರೇ, ಸಮೀಕ್ಷೆ ಮೂಲಕ ಮುಂದಿನ ದಿನಗಳಲ್ಲಿ ಬೀದಿ ನಾಯಿಗಳಿಗೆ ಚಿಕಿತ್ಸೆ ನೀಡಲಾಗುತ್ತದೆ. 2019 ನೇ ಸಾಲಿನಲ್ಲಿ ಬಿಬಿಎಂಪಿಯಿಂದ ನಡೆದ ಸಮೀಕ್ಷೆಯಲ್ಲಿ ಸುಮಾರು 3.10 ಲಕ್ಷ ಬೀದಿ ನಾಯಿಗಳಿವೆ.

ಇದನ್ನೂ ಓದಿ: ಬೆಂಗಳೂರು ನಗರದಲ್ಲಿ 16 ಸಾವಿರ, ರಾಜ್ಯದಲ್ಲಿ 2 ಲಕ್ಷ ಎಕರೆ ಕಂದಾಯ ಭೂಮಿ ಒತ್ತುವರಿ

ಒಟ್ಟು 50 ಟೀಮ್​​ಗಳನ್ನು ಮಾಡಲಾಗಿದ್ದು ಒಂದು ಟೀಮ್‌ನಲ್ಲಿ ಇಬ್ಬರು ಸಮೀಕ್ಷಾದಾರರು ಇದ್ದು, ಮೇಲ್ವಿಚಾರಣೆಗಾಗಿ 15 ಮೇಲ್ವಿಚಾರಕರನ್ನು ನಿಯೋಜನೆ ಮಾಡಲಾಗಿದೆ. ಈ ಹಿಂದೆ 2019 ರಲ್ಲಿ ಸಮೀಕ್ಷೆ ಮಾಡಿ ಸಂತಾನಹರಣ ಚಿಕಿತ್ಸೆ ನೀಡಿದ್ದು, ಈ  ಕಾರ್ಯಕ್ರಮ ಯಶಸ್ವಿ ಅನುಷ್ಟಾನದ ಬಗ್ಗೆ ತಿಳಿಯುವ ಸಲುವಾಗಿ ಬೀದಿನಾಯಿಗಳ ಸಮೀಕ್ಷೆಯ ಕಾರ್ಯ ಪ್ರಾರಂಭವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು