AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಶಾಲೆಗಳ ಶುಲ್ಕದಲ್ಲಿ ಬರೋಬ್ಬರಿ ಹೆಚ್ಚಳ, ಪೋಷಕರು ಕಂಗಾಲು: ಇಲ್ಲಿದೆ ವಿವರ

ಬೆಂಗಳೂರಿನ ಶಾಲೆಗಳ ಶುಲ್ಕದಲ್ಲಿ ಕಳೆದ ಎರಡು ಮೂರು ವರ್ಷಗಳಲ್ಲಿ ಶೇಕಡ 30ರಷ್ಟು ಹೆಚ್ಚಳವಾಗಿರುವುದು ಸಮೀಕ್ಷೆ ಒಂದರಿಂದ ತಿಳಿದುಬಂದಿದೆ. ದೇಶದಾದ್ಯಂತ ಪ್ರಮುಖ ನಗರಗಳಲ್ಲಿ ಈ ಸಮೀಕ್ಷೆ ನಡೆಸಲಾಗಿದ್ದು, ಬೆಂಗಳೂರಿನ ಪೋಷಕರು ಶಾಲೆಯ ಫೀಸ್ ಬರೋಬ್ಬರಿ ಹೆಚ್ಚಾಗಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಶುಲ್ಕ ಹೆಚ್ಚಳ ಕುರಿತ ಸಮೀಕ್ಷಾ ವರದಿಯ ವಿವರ ಇಲ್ಲಿದೆ.

ಬೆಂಗಳೂರಿನ ಶಾಲೆಗಳ ಶುಲ್ಕದಲ್ಲಿ ಬರೋಬ್ಬರಿ ಹೆಚ್ಚಳ, ಪೋಷಕರು ಕಂಗಾಲು: ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Mar 23, 2024 | 1:25 PM

ಬೆಂಗಳೂರು, ಮಾರ್ಚ್ 23: ಕಳೆದ ಎರಡು ವರ್ಷಗಳಲ್ಲಿ ಬೆಂಗಳೂರಿನಲ್ಲಿ (Bengaluru) ಶಾಲೆಗಳ ಶುಲ್ಕ (School Fee) ಶೇ 30ಕ್ಕಿಂತಲೂ ಹೆಚ್ಚಾಗಿದೆ ಎಂಬುದು ಸಮೀಕ್ಷಾ ವರದಿಯೊಂದರಿಂದ ತಿಳಿದುಬಂದಿದೆ. ಬೆಂಗಳೂರಿನಲ್ಲಿ ಸಮೀಕ್ಷೆಗೆ ಒಳಪಟ್ಟವರ ಪೈಕಿ ಶೇ 58ರಷ್ಟು ಪೋಷಕರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ದೇಶದ ಮೊದಲ ಹಾಗೂ ಎರಡನೇ ಹಂತದ ನಗರಗಳ ಒಟ್ಟು 312 ಜಿಲ್ಲೆಗಳಲ್ಲಿ 27,000 ಕ್ಕೂ ಹೆಚ್ಚು ಪೋಷಕರ ಪ್ರತಿಕ್ರಿಯೆಗಳನ್ನು ಪಡೆದು ‘ಲೋಕಲ್ ಸರ್ಕಲ್ಸ್’ ರಾಷ್ಟ್ರವ್ಯಾಪಿ ನಡೆಸಿದ ಸಮೀಕ್ಷೆ ಇದಾಗಿದೆ. ದೇಶದ ಪ್ರಮುಖ ನಗರಗಳಲ್ಲಿ ಶಾಲೆಗಳ ವಾರ್ಷಿಕ ಶುಲ್ಕವು 1 ಲಕ್ಷ ರೂಪಾಯಿಯಿಂದ 4 ಲಕ್ಷ ರೂಪಾಯಿವರೆಗೆ ಇರುತ್ತದೆ ಎಂಬುದನ್ನು ಈ ಸಮೀಕ್ಷೆ ಬಹಿರಂಗಪಡಿಸಿದೆ.

ಬೆಂಗಳೂರಿನಲ್ಲಿ ಸಮೀಕ್ಷೆ ನಡೆಸಿದ 1,619 ಪೋಷಕರಲ್ಲಿ ಶೇಕಡಾ 10 ರಷ್ಟು ಮಂದಿ ಶಾಲಾ ಶುಲ್ಕಗಳು ಕಳೆದ ಎರಡು ವರ್ಷಗಳಲ್ಲಿ ಶೇ 50 ರಷ್ಟು ಏರಿಕೆಯಾಗಿದೆ ಎಂದು ಹೇಳಿದ್ದಾರೆ. ಆದರೆ ಶೇ 48 ರಷ್ಟು ಮಂದಿ ಪೋಷಕರು ಶುಲ್ಕಗಳು ಶೇ 30 ರಿಂದ 50 ರಷ್ಟು ಏರಿಕೆಯಾಗಿದೆ ಎಂದು ಹೇಳಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ. ಶೇ 72 ರಷ್ಟು ಮಂದಿ ಅತಿಯಾದ ಶುಲ್ಕ ಹೆಚ್ಚಳವನ್ನು ತಡೆಯುವಲ್ಲಿ ರಾಜ್ಯ ಸರ್ಕಾರವು ವಿಫಲವಾಗಿದೆ ಎಂದು ಅಸಮಾಧಾನ ತೋಡಿಕೊಂಡಿದ್ದಾರೆ.

ನಾವು ಸಾಮಾನ್ಯವಾಗಿ ಮಗನ ಶಾಲಾ ಶುಲ್ಕದಲ್ಲಿ ಶೇ 15 ರಷ್ಟು ಹೆಚ್ಚಳ ಗಮನಿಸಿದ್ದೇವೆ. ಅದು ಸುಮಾರು 3 ಲಕ್ಷ ರೂ. ಆಗಿದೆ ಎಂದು ಬೆಂಗಳೂರಿನ ಸುಬ್ರಹ್ಮಣ್ಯಪುರದ ನಿವಾಸಿಯೊಬ್ಬರು ಹೇಳಿರುವುದನ್ನು ವರದಿ ಉಲ್ಲೇಖಿಸಿದೆ.

ಈ ಮಧ್ಯೆ, ಅನಿಯಂತ್ರಿತ ಶುಲ್ಕ ಹೆಚ್ಚಳವನ್ನು ಕಾನೂನುಬಾಹಿರ ಎಂದು ಕರ್ನಾಟಕ ಖಾಸಗಿ ಶಾಲೆಗಳು ಮತ್ತು ಕಾಲೇಜುಗಳ ಪೋಷಕರ ಸಂಘದ ಸಮನ್ವಯ ಸಮಿತಿ ಅಧ್ಯಕ್ಷ ಬಿಎನ್ ಯೋಗಾನಂದ ಹೇಳಿದ್ದಾರೆ. ಖಾಸಗಿ ಶಾಲೆಗಳು ಶುಲ್ಕವನ್ನು ಸಾರ್ವಜನಿಕ ಪೋರ್ಟಲ್‌ನಲ್ಲಿ ಅಥವಾ ಅವರ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಬೇಕು. ಆದರೆ, ಹೆಚ್ಚಿನ ಶಾಲೆಗಳು ಅದನ್ನು ಮಾಡುವುದಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: 5, 8, 9ನೇ ತರಗತಿಯ ಮೌಲ್ಯಾಂಕನ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಮತ್ತೊಂದೆಡೆ, ಖಾಸಗಿ ಶಾಲೆಗಳು ತಮ್ಮ ಶುಲ್ಕವನ್ನು ಹೆಚ್ಚಿಸಲು ಸ್ವಾತಂತ್ರ್ಯವನ್ನು ಹೊಂದಿವೆ ಮತ್ತು ಸರ್ಕಾರವು ಮಧ್ಯಪ್ರವೇಶಿಸಿ ಅಸಮಂಜಸ ಶುಲ್ಕ ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಕರ್ನಾಟಕದ ಖಾಸಗಿ ಶಾಲೆಗಳ ಅಸೋಸಿಯೇಟೆಡ್ ಮ್ಯಾನೇಜ್‌ಮೆಂಟ್‌ನ ಡಿ ಶಶಿ ಕುಮಾರ್ ಪ್ರತಿಪಾದಿಸಿದ್ದಾರೆ.

ರಾಜ್ಯದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿ ಲೈವ್
ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿ ಲೈವ್
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
ಒಂದೇ ವಿಮಾನದಲ್ಲಿ ದೆಹಲಿಗೆ ಹೊರಟ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಒಂದೇ ವಿಮಾನದಲ್ಲಿ ದೆಹಲಿಗೆ ಹೊರಟ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು
ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು