AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸಿಸ್ ಉಗ್ರರೊಂದಿಗೆ ಸಂಬಂಧ ಹೊಂದಿದ್ದ ಆರೋಪ: ಶಂಕಿತನ ಬಂಧಿಸಿದ ಎನ್​ಐಎ

2020ರ ಏಪ್ರಿಲ್​ನಲ್ಲಿ ಈತನ ಇಬ್ಬರು ಸಹಚರರಾದ ಅಹ್ಮದ್​​ ಅಬ್ದುಲ್ ಖಾದರ್ ಮತ್ತು ಇರ್ಫಾನ್ ನಾಸಿರ್​ನನ್ನು ಬಂಧಿಸಲಾಗಿತ್ತು

ಐಸಿಸ್ ಉಗ್ರರೊಂದಿಗೆ ಸಂಬಂಧ ಹೊಂದಿದ್ದ ಆರೋಪ: ಶಂಕಿತನ ಬಂಧಿಸಿದ ಎನ್​ಐಎ
ರಾಷ್ಟ್ರೀಯ ತನಿಖಾ ದಳ (ಎನ್​ಐಎ)
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Oct 24, 2021 | 9:26 PM

Share

ಬೆಂಗಳೂರು: ಐಸಿಸ್ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ (National Investigation Agency – NIA) ಬಂಧಿಸಿದೆ. ಬೆಂಗಳೂರು ಮೂಲದ ಮೊಹಮದ್ ತಾಕಿರ್ ಬಂಧಿತ. ನಿಷೇಧಿತ ಉಗ್ರಗಾಮಿ ಸಂಘಟನೆಗಳಾದ ಐಸಿಸ್, ಐಎಸ್​ಐಎಲ್, ಡಾಯಿಶ್​ ಜತೆ‌ ಸಂಪರ್ಕ ಹೊಂದಿದ್ದ ಆರೋಪ ಇವರ ಮೇಲಿದೆ.

2020ರ ಏಪ್ರಿಲ್​ನಲ್ಲಿ ಈತನ ಇಬ್ಬರು ಸಹಚರರಾದ ಅಹ್ಮದ್​​ ಅಬ್ದುಲ್ ಖಾದರ್ ಮತ್ತು ಇರ್ಫಾನ್ ನಾಸಿರ್​ನನ್ನು ಬಂಧಿಸಲಾಗಿತ್ತು. ಇಬ್ಬರ ವಿರುದ್ಧವೂ ಎನ್​ಐಎ ಆರೋಪಪಟ್ಟಿ ಸಲ್ಲಿಸಿತ್ತು. ತನಿಖೆ ವೇಳೆ ಮೊಹಮದ್ ತಾಕಿರ್​ಗೆ ಉಗ್ರರೊಂದಿಗೆ ಸಂಪರ್ಕ ಇರುವ ವಿಚಾರ ಒತ್ತೆಯಾಗಿತ್ತು. ನಿಷೇಧಿತ ಸಂಘಟನೆಗಳಿಗೆ ಫಂಡಿಂಗ್ ಮಾಡಿಸುತ್ತಿದ್ದ ತಾಕಿರ್, ಯುವಕರನ್ನು ಪ್ರೇರೇಪಿಸಿ ಸಿರಿಯಾಗೆ ಕಳುಹಿಸುತ್ತಿದ್ದ ಎನ್ನಲಾಗಿದೆ. 2013ರಲ್ಲಿ ತನ್ನ ಸಹಚರರೊಂದಿಗೆ ಸಿರಿಯಾಗೆ ಭೇಟಿ ನೀಡಿದ್ದ ಎಂದು ಎನ್​ಐಎ ಹೇಳಿದೆ.

ರಾಯಚೂರು: ಮಹಿಳೆ ಸಾವು, ಸಂಬಂಧಿಕರ ಪ್ರತಿಭಟನೆ ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಮೃತಪಟ್ಟಿದ್ದಾರೆಂದು ಆರೋಪಿಸಿ ರಾಯಚೂರಿನ ಸುರಕ್ಷಾ ಆಸ್ಪತ್ರೆಯ ಆ್ಯಂಬುಲೆನ್ಸ್ ಗಾಜು ಪುಡಿಪುಡಿ ಮಾಡಿ ಮೃತಳ ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ. ಹೊಸೂರು ನಿವಾಸಿ ದೀಪಾ ಭಾನುವಾರ ಸುರಕ್ಷಾ ಆಸ್ಪತ್ರೆಗೆ ಬಂದಿದ್ದರು. ಆಕೆಯ ಪರಿಸ್ಥಿತಿ ಪರಿಶೀಲಿಸಿದ್ದ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಹೈದರಾಬಾದ್​ ಆಸ್ಪತ್ರೆಗೆ ಕರೆದೊಯ್ಯುವಂತೆ ಶಿಫಾರಸು ಮಾಡಿದ್ದರು.

ಮಾರ್ಗಮಧ್ಯೆಯೇ ಆ್ಯಂಬುಲೆನ್ಸ್​​ನಲ್ಲಿ ದೀಪಾ ಮೃತಪಟ್ಟಿದ್ದರು. ಆ್ಯಂಬುಲೆನ್ಸ್​ನಲ್ಲಿ ಆಮ್ಲಜನಕ ವ್ಯವಸ್ಥೆ ಇಲ್ಲದಿದ್ದುದೇ ರೋಗಿ ಸಾವನ್ನಪ್ಪಲು ಕಾರಣ ಎಂದು ಮೃತರ ಸಂಬಂಧಿಕರು ದೂರಿದ್ದಾರೆ. ಸ್ಥಳಕ್ಕೆ ರಾಯಚೂರು ನಗರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

ಭೀಮಾತೀರದಲ್ಲಿ ಮರ್ಯಾದೆ ಹತ್ಯೆ ಆರೋಪ ವಿಜಯಪುರ: ಅನ್ಯಕೋಮಿನ ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನೊಬ್ಬನನ್ನು ಕೊಲೆ ಮಾಡಿರುವ ಘಟನೆ ಅಲಮೇಲ ತಾಲ್ಲೂಕಿನ ಬಳಗಾನೂರ ಗ್ರಾಮದಲ್ಲಿ ನಡೆದಿದೆ. ರವಿ ನಿಂಬರಗಿ (32) ಕೊಲೆಯಾದ ಯುವಕ. ಯುವತಿಯ ಇಬ್ಬರು ಪೋಷಕರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಆಲಮೇಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ; ತಲೆಮರೆಸಿಕೊಂಡಿರುವ ಆರೋಪಿಗಳ ಮನೆ ಮೇಲೆ ಎನ್​ಐಎ ದಾಳಿ ಇದನ್ನೂ ಓದಿ: ಮನ್​ಸುಖ್ ಹಿರೇನ್ ಪ್ರಕರಣವನ್ನು ರಾಷ್ಟ್ರಿಯ ತನಿಖಾ ದಳಕ್ಕೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ

Published On - 9:22 pm, Sun, 24 October 21

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು