AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಷಗಳಿಂದ ಪರಪ್ಪನ ಅಗ್ರಹಾರ​ ಜೈಲಿನಲ್ಲಿದ್ದ ಶಂಕಿತ ಉಗ್ರ ಚಿಕಿತ್ಸೆ ಫಲಿಸದೆ ಸಾವು!

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿತನಾಗಿದ್ದ ಶಂಕಿತ ಭಯೋತ್ಪಾದಕ ಸಾದಿಕ್ ಪಾಷಾ (47) ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸುದ್ದಗುಂಟೆಪಾಳ್ಯ ಸ್ಫೋಟಕ ವಸ್ತು ಸಂಗ್ರಹ ಪ್ರಕರಣದಲ್ಲಿ ಎನ್‌ಐಎನಿಂದ ಬಂಧಿತರಾಗಿದ್ದ ಸಾದಿಕ್, ಕಳೆದ ಆರು ತಿಂಗಳಿಂದ ಲೋ ಬಿಪಿ ಮತ್ತು ಹೈ ಶುಗರ್‌ನಿಂದ ಬಳಲುತ್ತಿದ್ದರು. ಜೈಲು ಅಧಿಕಾರಿಗಳು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು, ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ವರ್ಷಗಳಿಂದ ಪರಪ್ಪನ ಅಗ್ರಹಾರ​ ಜೈಲಿನಲ್ಲಿದ್ದ ಶಂಕಿತ ಉಗ್ರ ಚಿಕಿತ್ಸೆ ಫಲಿಸದೆ ಸಾವು!
ವರ್ಷಗಳಿಂದ ಪರಪ್ಪನ ಅಗ್ರಹಾರ​ ಜೈಲಿನಲ್ಲಿದ್ದ ಶಂಕಿತ ಉಗ್ರ ಸಾವು!
ರಾಚಪ್ಪಾಜಿ ನಾಯ್ಕ್
| Edited By: |

Updated on: Feb 07, 2026 | 11:46 AM

Share

ಬೆಂಗಳೂರು, ಫೆಬ್ರವರಿ 07: ಬೆಂಗಳೂರಿನ ಪರಪ್ಪನ ಅಗ್ರಹಾರ (Parappana Agrahara) ಕೇಂದ್ರ ಕಾರಾಗೃಹದಲ್ಲಿ ಬಂಧಿತನಾಗಿದ್ದ ಶಂಕಿತ ಭಯೋತ್ಪಾದಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಸುದ್ದಗುಂಟೆಪಾಳ್ಯ ಸ್ಫೋಟಕ ವಸ್ತು ಸಂಗ್ರಹ ಪ್ರಕರಣದಲ್ಲಿ ಬಂಧಿತರಾಗಿದ್ದ ಸಾಧಿಕ್ ಪಾಷಾ (47), ಅನಾರೋಗ್ಯದ ಕಾರಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ. ನಿನ್ನೆ (ಫೆಬ್ರುವರಿ 06) ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆಂದು ತಿಳಿದು ಬಂದಿದೆ.

6 ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪಾಷಾ

ಸಾಧಿಕ್ ಪಾಷಾ ಕಳೆದ ಆರು ತಿಂಗಳಿಂದ ಲೋ ಬಿಪಿ ಹಾಗೂ ಹೈ ಶುಗರ್ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಆರೋಗ್ಯದಲ್ಲಿ ತೀವ್ರ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಜೈಲು ಅಧಿಕಾರಿಗಳು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದ ಕಾರಣ ಶುಕ್ರವಾರ ಮಧ್ಯರಾತ್ರಿ ಸಾಧಿಕ್ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ ಗೋಡೌನ್‌ನಲ್ಲಿ ಅಕ್ರಮವಾಗಿ ಯೂರಿಯಾ ಗೊಬ್ಬರ ಸ್ಟಾಕ್; ಅಧಿಕಾರಿಗಳಿಂದ ದಾಳಿ

6 ವರ್ಷಗಳ ಹಿಂದೆ ಜೈಲು ಪಾಲಾಗಿದ್ದ ಶಂಕಿತ ಉಗ್ರ

2020ರಲ್ಲಿ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಸ್ಫೋಟಕ ವಸ್ತು ಸಂಗ್ರಹ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸಾಧಿಕ್ ಸೇರಿ ಒಟ್ಟು ಆರು ಶಂಕಿತರನ್ನು ಬಂಧಿಸಿತ್ತು. ಅಂದಿನಿಂದ 6 ವರ್ಷಗಳ ಕಾಲ ಪಾಷಾ ಪರಪ್ಪನ ಅಗ್ರಹಾರದಲ್ಲಿಯೇ ಬಂಧಿಯಾಗಿದ್ದ. ಇದೀಗ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾಧಿಕ್ ಪಾಷಾ ಸಾವಿನ ಕುರಿತು ಜೈಲು ಹಾಗೂ ಆಸ್ಪತ್ರೆ ಅಧಿಕಾರಿಗಳು ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ಕೈಗೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ