AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ವಿದೇಶಿ ಮಹಿಳೆ ಅನುಮಾನಾಸ್ಪದ ಸಾವು; ಉಸಿರುಗಟ್ಟಿಸಿ ಕೊಲೆ ಮಾಡಿರುವ ಶಂಕೆ

ಬೆಂಗಳೂರಿನ ಶೇಷಾದ್ರಿಪುರಂ ಠಾಣಾ ವ್ಯಾಪ್ತಿಯ ಬಿಡಿಎ ಸೇತುವೆ ಬಳಿಯ ಖಾಸಗಿ ಸ್ಟಾರ್ ಹೋಟೆಲ್​ನಲ್ಲಿ ಉಜ್ಬೇಕಿಸ್ತಾನ ಮೂಲದ ವಿದೇಶಿ ಮಹಿಳೆ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಉಸಿರುಗಟ್ಟಿಸಿ ಮಹಿಳೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಮರಣೋತ್ತರ ಪರೀಕ್ಷೆಗೆ ಮೃತದೇಹ ಬೋರಿಂಗ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ ವಿದೇಶಿ ಮಹಿಳೆ ಅನುಮಾನಾಸ್ಪದ ಸಾವು; ಉಸಿರುಗಟ್ಟಿಸಿ ಕೊಲೆ ಮಾಡಿರುವ ಶಂಕೆ
ಉಜ್ಬೇಕಿಸ್ತಾನ ಮೂಲದ ವಿದೇಶಿ ಮಹಿಳೆ ಜರೀನಾ
Shivaprasad B
| Edited By: |

Updated on: Mar 14, 2024 | 7:00 AM

Share

ಬೆಂಗಳೂರು, ಮಾರ್ಚ್​.14: ಉಜ್ಬೇಕಿಸ್ತಾನ ಮೂಲದ ವಿದೇಶಿ ಮಹಿಳೆ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ (Death) ಘಟನೆ ಬೆಂಗಳೂರಿನ ಶೇಷಾದ್ರಿಪುರಂ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜರೀನಾ ಮೃತ ಮಹಿಳೆ. ನಾಲ್ಕು ದಿನದ ಹಿಂದೆ ನಗರಕ್ಕೆ ಬಂದಿದ್ದ ವಿದೇಶಿ ಮಹಿಳೆ ಬಿಡಿಎ ಸೇತುವೆ ಬಳಿಯ ಖಾಸಗಿ ಸ್ಟಾರ್ ಹೋಟೆಲ್​ನ ಸೆಕೆಂಡ್ ಪ್ಲೋರ್​ನ ಕೊಠಡಿಯೊಂದರಲ್ಲಿ ಮೃತಪಟ್ಟಿದ್ದಾರೆ. ಮೃತ ಜರೀನಾ ಟೂರಿಸ್ಟ್ ವೀಸಾದಡಿ ಬೆಂಗಳೂರಿಗೆ ಆಗಮಿಸಿದ್ದರು. ನಿನ್ನೆ ಸಂಜೆ ಹೋಟೆಲ್ ಸಿಬ್ಬಂದಿ ಎಷ್ಟೇ ಕೂಗಿದ್ರು ಮಹಿಳೆ ಬಂದಿರಲಿಲ್ಲ. ಹೀಗಾಗಿ ಇಂದು ಮಧ್ಯರಾತ್ರಿ ಮಾಸ್ಟರ್ ಕೀ ಮೂಲಕ ಬಾಗಿಲು ತೆಗೆದಾಗ ಮಹಿಳೆ ಶವಪತ್ತೆಯಾಗಿದೆ.

ಕೊಲೆಯಾಗಿರುವ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಶೇಷಾದ್ರಿಪುರಂ ಪೊಲೀಸರು, ಎಫ್​ಎಸ್​ಎಲ್ ತಂಡ ಹಾಗೂ ಡಾಗ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದೆ. ಸಿಎಆರ್​ಡಿಸಿಪಿ ಅರುಣಾಂಶು, ಕೇಂದ್ರ ವಿಭಾಗ ಡಿಸಿಪಿ ಶೇಖರ್ ಟೆಕ್ಕಣ್ಣನವರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಆರೋಪಿ ಉಸಿರುಗಟ್ಟಿಸಿ ಮಹಿಳೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಹೋಟೆಲ್ ಸಿಸಿಟಿವಿ ಹಾಗೂ ಲೆಡ್ಜರ್ ಬುಕ್ ಪರಿಶೀಲಿಸಲಾಗುತ್ತಿದೆ. ಯಾರೆಲ್ಲ ಹೋಟೆಲ್​ಗೆ ಬಂದು ಹೋಗಿದ್ದಾರೆ ಎಂಬುದರ ಪರಿಶೀಲನೆ ನಡೆಯುತ್ತಿದೆ. ಸದ್ಯ ಸ್ಥಳದಲ್ಲಿ ಎಫ್​ಎಸ್​ಎಲ್ ಪರಿಶೀಲನೆ ಮುಕ್ತಾಯವಾಗಿದೆ. ಮರಣೋತ್ತರ ಪರೀಕ್ಷೆಗೆ ಮೃತದೇಹ ಬೋರಿಂಗ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಇದನ್ನೂ ಓದಿ: ಕೋಲಾರ: ಭಕ್ತರು ನೀಡುವ ಕಾಣಿಕೆ ಮೂಲಕ ಶಾಲೆ ನಿರ್ಮಿಸಿದ ದೇವಾಲಯದ ಟ್ರಸ್ಟ್; ಇಲ್ಲಿದೆ ವಿವರ

ಠಾಣೆ ಬಳಿಯೇ ವಕೀಲನಿಗೆ ಚಾಕು ಇರಿತ

ಪೊಲೀಸ್ ಠಾಣೆ ಸಮೀಪವೇ ವಕೀಲನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ಠಾಣೆ ಬಳಿ ನಡೆದಿದೆ. ವಕೀಲ ಮಂಜುನಾಥ್ ಬೆನ್ನು, ಕೈಗೆ ಚಾಕು ಇರಿಯಲಾಗಿದೆ. ನೆರವಿಗೆ ಬಂದ ಆಟೊ ಚಾಲಕನ ಮೇಲೂ ಹಲ್ಲೆಗೆ ಯತ್ನಿಸಲಾಗಿದೆ. ಸ್ಥಳಿಯರು ಆರೋಪಿಯನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಬೈಕ್-ಕಾರು ಡಿಕ್ಕಿ ಸವಾರ ದುರ್ಮರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಕೆಂಪಲಿಂಗನಹಳ್ಳಿ ಬಳಿ, ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಉತ್ತರಪ್ರದೇಶ ಮೂಲದ 27ವರ್ಷದ ಕೃಷ್ಣದಾಸ್ ಮೃತ ದುರ್ದೈವಿ. ಅಪಘಾತದ ಸ್ಥಳದಲ್ಲೇ ಕಾರು ನಿಲ್ಲಿಸಿ ಚಾಲಕ ಪರಾರಿಯಾಗಿದ್ದು, ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೈಸ್ಪೀಡ್ ಕ್ರೇಜ್​ಗೆ ಓರ್ವ ಬಲಿ ರಾಮನಗರ

ರಾಮನಗರ ತಾಲೂಕಿನ ಮಂಚನಬೆಲೆ ರಸ್ತೆಯ ಕಟ್ಟಮಾನದೊಡ್ಡಿಯಲ್ಲಿ, ಯುವಕರು ಹೈಸ್ಪೀಟ್​ನಲ್ಲಿ ತ್ರಿಬಲ್ ರೈಡಿಂಗ್ ಮಾಡಿ ಅಪಘಾತಕ್ಕೀಡಾಗಿದ್ದಾರೆ. ಒಬ್ಬ ಯುವಕ ಸಾವನ್ನಪ್ಪಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ರಾಮನಗರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್