AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಚ್ಛ ಸರ್ವೇಕ್ಷಣಾ: ಬೆಂಗಳೂರಿಗೆ 125ನೇ ಸ್ಥಾನ, ದೇಶದ ಅತಿ ಸ್ವಚ್ಛ ನಗರ ಯಾವುದು?

ಬೆಂಗಳೂರಿಗೆ 125ನೇ ಸ್ಥಾನ ದೊರೆತಿರುವ ಬಗ್ಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹರ್ಷ ವ್ಯಕ್ತಪಡಿಸಿದ್ದಾರೆ. ‘ಸ್ವಚ್ಛ ಸರ್ವೇಕ್ಷಣಾ 2023’ರಲ್ಲಿ ಬಿಬಿಎಂಪಿ ಉತ್ತಮ ಸಾಧನೆ ತೋರಿದೆ. ಈ ಸಾಧನೆಗಾಗಿ ನಮ್ಮ ಬೆಂಗಳೂರಿನ ನಾಗರಿಕರು ಮತ್ತು ಬಿಬಿಎಂಪಿಯ ಅಧಿಕಾರಿಗಳು, ಎಲ್ಲಾ ಕಾರ್ಮಿಕರು ಪ್ರಶಂಸೆಗೆ ಅರ್ಹರು ಎಂದು ಅವರು ಹೇಳಿದ್ದಾರೆ.

ಸ್ವಚ್ಛ ಸರ್ವೇಕ್ಷಣಾ: ಬೆಂಗಳೂರಿಗೆ 125ನೇ ಸ್ಥಾನ, ದೇಶದ ಅತಿ ಸ್ವಚ್ಛ ನಗರ ಯಾವುದು?
ಸ್ವಚ್ಛ ಸರ್ವೇಕ್ಷಣಾ: ಬೆಂಗಳೂರಿಗೆ 125ನೇ ಸ್ಥಾನ
Ganapathi Sharma
|

Updated on:Jan 12, 2024 | 7:22 AM

Share

ಬೆಂಗಳೂರು, ಜನವರಿ 12: ‘ಸ್ವಚ್ಛ ಸರ್ವೇಕ್ಷಣಾ 2023’ ಪ್ರಶಸ್ತಿ ಪಟ್ಟಿಯನ್ನು (Swachh Survekshan Awards 2023) ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಗುರುವಾರ ಪ್ರಕಟಿಸಿದ್ದು, 1 ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಹೊಂದಿರುವ 446 ನಗರಗಳ ಪೈಕಿ ಬೆಂಗಳೂರು 125ನೇ ಸ್ಥಾನ ಗಳಿಸಿದೆ. ಮಧ್ಯಪ್ರದೇಶದ ಇಂದೋರ್ ಸತತ ಏಳನೇ ಬಾರಿಗೆ ಸ್ವಚ್ಛ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಗುಜರಾತ್​​ನ ಸೂರತ್ ಕೂಡ ಇದೇ ಮೊದಲ ಬಾರಿಗೆ ಪ್ರಶಸ್ತಿಗೆ ಭಾಜನವಾಗಿದೆ.

ಬೆಂಗಳೂರಿಗೆ 125ನೇ ಸ್ಥಾನ ದೊರೆತಿರುವ ಬಗ್ಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹರ್ಷ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿರುವ ಅವರು, ‘ಸ್ವಚ್ಛ ಸರ್ವೇಕ್ಷಣಾ 2023’ರಲ್ಲಿ ಬಿಬಿಎಂಪಿ ಉತ್ತಮ ಸಾಧನೆ ತೋರಿದೆ. ಈ ಸಾಧನೆಗಾಗಿ ನಮ್ಮ ಬೆಂಗಳೂರಿನ ನಾಗರಿಕರು ಮತ್ತು ಬಿಬಿಎಂಪಿಯ ಅಧಿಕಾರಿಗಳು, ಎಲ್ಲಾ ಕಾರ್ಮಿಕರು ಪ್ರಶಂಸೆಗೆ ಅರ್ಹರು. ಬೆಂಗಳೂರು ಕರ್ನಾಟಕದಲ್ಲಿ 3 ನೇ ಸ್ವಚ್ಛ ನಗರವಾಗಿದೆ. ಇದೇ ಮೊದಲ ಬಾರಿಗೆ, ವಾಟರ್ ಪ್ಲಸ್ ಪ್ರಮಾಣೀಕರಣವನ್ನು ಪಡೆದಿದೆ. ಜೊತೆಗೆ ನೈರ್ಮಲ್ಯ ಸಮೀಕ್ಷೆಯಲ್ಲಿ ಬೆಂಗಳೂರಿಗೆ ಅಗ್ರಸ್ಥಾನವನ್ನು ನೀಡಲಾಗಿದೆ ಎಂದು ಡಿಕೆ ಶಿವಕುಮಾರ್ ಉಲ್ಲೇಖಿಸಿದ್ದಾರೆ.

ಅತ್ಯುತ್ತಮ ಕಾರ್ಯವನ್ನು ಮುಂದುವರೆಸುತ್ತಾ, ಬಿಬಿಎಂಪಿ ಸೇವಾ ಮಟ್ಟದ ಪ್ರಗತಿ ಮತ್ತು ನಾಗರಿಕರ ಧ್ವನಿ ವಿಭಾಗಗಳ ಅಡಿಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಉತ್ತಮ ಆಡಳಿತಕ್ಕಾಗಿ ಹೊಸ ಮಾನದಂಡವನ್ನು ಸ್ಥಾಪಿಸಿದೆ. ಈ ಸುವರ್ಣ ಓಟ ಮುಂದುವರಿಯಲಿ ಮತ್ತು ಮುಂಬರುವ ವರ್ಷಗಳಲ್ಲಿ ಆಡಳಿತ ಮತ್ತು ಸಾರ್ವಜನಿಕ ಸೇವೆಗಾಗಿ ಹೊಸ ಮಾನದಂಡಗಳನ್ನು ರೂಪಿಸಲಿ ಎಂದು ಅವರು ಆಶಿಸಿದ್ದಾರೆ.

ಇದನ್ನೂ ಓದಿ: ಸತತ 7ನೇ ಬಾರಿಗೆ ಇಂದೋರ್​ಗೆ ಸ್ವಚ್ಛ ನಗರಿ ಪ್ರಶಸ್ತಿ ಗರಿ

ನವೀ ಮುಂಬೈ ದೇಶದ ಮೂರನೇ ಸ್ವಚ್ಛ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಮಹಾರಾಷ್ಟ್ರವು ಸ್ವಚ್ಛ ರಾಜ್ಯ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದರೆ, ಈ ವಿಭಾಗದಲ್ಲಿ ನಂತರದ ಸ್ಥಾನದಲ್ಲಿ ಮಧ್ಯಪ್ರದೇಶವಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:21 am, Fri, 12 January 24

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!