AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿ ಯಡಿಯೂರಪ್ಪನವರದ್ದು ಅಭಿವೃದ್ಧಿ ಪರವಾದ ರಾಜಕಾರಣ; ಮುರುಘಾ ಮಠದ ಸ್ವಾಮೀಜಿ

ಕರ್ನಾಟಕದಲ್ಲಿ ನಾಯಕತ್ವದ ಬಿಕ್ಕಟ್ಟು ಆಗಿದೆ. ಮುಂದಿನ ನಾಯಕರ ಬಗ್ಗೆ ಸ್ಪಷ್ಟತೆ ಕಂಡು ಬರುತ್ತಿಲ್ಲ. ಇದನ್ನು ಎಲ್ಲ ಶಾಸಕರು ನಿರ್ಧಾರ ಮಾಡುತ್ತಾರೆ. ಈಗಿನ ಸಮಸ್ಯೆ ಬಗ್ಗೆ ಗಂಭೀರವಾಗಿ ಆಲೋಚಿಸಬೇಕು. ಇದು ಒಂದು ರೀತಿಯ ಬಿಸಿ ತುಪ್ಪವಾಗಿದೆ.

ಮುಖ್ಯಮಂತ್ರಿ ಯಡಿಯೂರಪ್ಪನವರದ್ದು ಅಭಿವೃದ್ಧಿ ಪರವಾದ ರಾಜಕಾರಣ; ಮುರುಘಾ ಮಠದ ಸ್ವಾಮೀಜಿ
ಮುರುಘಾ ಮಠದ ಸ್ವಾಮೀಜಿ
TV9 Web
| Edited By: sandhya thejappa|

Updated on:Jul 25, 2021 | 3:03 PM

Share

ಬೆಂಗಳೂರು: ತನಗೆ 70 ವರ್ಷವಾಗಿದ್ದರೂ ಪ್ರಧಾನಿ ಮೋದಿ (Narendra Modi), ಅಮಿತ್ ಶಾ (Amit Shah) ಅವಕಾಶ ನೀಡಿದ್ದಾರೆ ಅಂತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (BS Yediyurappa)ಆಗಾಗ ಹೇಳುತ್ತಿರುತ್ತಾರೆ. ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎನ್ನುತ್ತಿದ್ದರು. ಆದರೆ ಮುಂದೆ ಏನು ಎಂಬುದೇ ಈಗ ವಿಚಾರವಾಗಿದೆ. ಯಡಿಯೂರಪ್ಪನವರ ಒಳಗಡೆ ಒಂದಷ್ಟು ಶಕ್ತಿಯಿದೆ. ಅದರಿಂದಲೇ ಅವರು ಎಲ್ಲ ಸಮಸ್ಯೆಗಳಿಂದ ಪಾರಾದರು. ರಾಜ್ಯಕ್ಕೂ ಕೂಡ ಉತ್ತಮವಾದ ಯೋಜನೆ ಕೊಟ್ಟಿದ್ದಾರೆ. ಸಿಎಂ ಬಿಎಸ್ವೈರದ್ದು ಅಭಿವೃದ್ಧಿ ಪರವಾದ ರಾಜಕಾರಣ. ಈ ವೇಳೆ ಒಂದಷ್ಟು ಸಮಸ್ಯೆ ಉಂಟಾಯಿತು. ಇದಕ್ಕೆ ಸೂಕ್ತವಾದ ಪರಿಹಾರ ಕಂಡುಕೊಳ್ಳುತ್ತಾರೆ ಎಂದು ಮುರುಘಾ ಮಠದ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕದಲ್ಲಿ ನಾಯಕತ್ವದ ಬಿಕ್ಕಟ್ಟು ಆಗಿದೆ. ಮುಂದಿನ ನಾಯಕರ ಬಗ್ಗೆ ಸ್ಪಷ್ಟತೆ ಕಂಡು ಬರುತ್ತಿಲ್ಲ. ಇದನ್ನು ಎಲ್ಲ ಶಾಸಕರು ನಿರ್ಧಾರ ಮಾಡುತ್ತಾರೆ. ಈಗಿನ ಸಮಸ್ಯೆ ಬಗ್ಗೆ ಗಂಭೀರವಾಗಿ ಆಲೋಚಿಸಬೇಕು. ಇದು ಒಂದು ರೀತಿಯ ಬಿಸಿ ತುಪ್ಪವಾಗಿದೆ. ಎಲ್ಲಾ ಜಾತಿಯ ಮಠಾಧೀಶರನ್ನ ಸೇರಿಸಿಕೊಂಡು ಒಂದು ಶಕ್ತಿಯುತವಾದ ಸಂಘಟನೆ ಮಾಡಬೇಕಿದೆ ಅಂತಾ ಮುರುಘಾ ಶ್ರೀಗಳು ಸಭೆಯಲ್ಲಿ ಕರೆ ನೀಡಿದರು.

ಒಂದು ಕಡೆ ಪ್ರಕೃತಿ ವಿಕೋಪ, ಇನ್ನೊಂದು ಕಡೆ ಕೊರೊನಾ ಕೋಪ. ಇವೆರೆಡು ಸೇರಿ ಮಾನವನ ಜೀವನದ ಒಳಗೆ ತಾಪ ಸೃಷ್ಟಿ ಮಾಡಿದೆ. ಪರಿತಾಪವನ್ನು ಸೃಷ್ಟಿ ಮಾಡಿದೆ. ಇಂಥ ಸಂದಿಗ್ಧ ಪರಿಸ್ಥಿತಿಯಲ್ಲಿ ನಾವು ಇದ್ದೇವೆ. ಕೊರೊನಾ ಬಂದ ವೇಳೆ ಮಂದಿರ, ಮಸೀದಿ, ಚರ್ಚ್ಗಳು ಮುಚ್ಚಿ ಹೋದವು. ಅಂಥಹ ಸಂದರ್ಭದಲ್ಲಿ ಮಠಗಳು ಸಹಾಯ ಮಾಡಿದವು. ಹತ್ತಾರು ಜನರಿಗೆ ಆಹಾರ ಕಿಟ್ ವಿತರಿಸಿದ್ದೆವು ಎಂದು ಸ್ವಾಮೀಜಿ ತಿಳಿಸಿದರು.

ಸ್ವಾಮೀಜಿಗಳೆಲ್ಲಾ ಜಾತಿ ವಾದಿಗಳೆಂಬ ಭಾವನೆ ತಾಳಬಾರದು. ಸಂವಿಧಾನದ ಪ್ರಕಾರ ಪಕ್ಷಾತೀತ, ಜಾತ್ಯತೀತ ನಮ್ಮ ನಿಲುವು. ಮಠಾಧೀಶರೆಲ್ಲರೂ ಜಾತಿ ಒಳಗಿದ್ದು ಜಾತಿಯನ್ನು ಮೀರುವ ಕೆಲಸ ಮಾಡುತ್ತೇವೆ. 7 ವರ್ಷಗಳ ಹಿಂದೆ ಅಹಿಂದ ಚಳವಳಿಯನ್ನು ಬೆಂಬಲಿಸಿದ್ದೆವು. ಜಾತಿ ಭೇದ ಮರೆತು ನಾನು ಸಿದ್ದರಾಮಯ್ಯನವರಿಗೆ ಬೆಂಬಲಿಸಿದ್ದೆ. ಮಠಾಧೀಶರಿಗೆ ಅಭಿಮಾನಕ್ಕಿಂತ ಜಾತ್ಯತೀತವೇ ಮುಖ್ಯ. ಇಂದಿನ ಸ್ವಾಮೀಜಿಗಳ ಸಮಾವೇಶ ಒಂದು ದಿನಕ್ಕೆ ಅಲ್ಲ. ಮುಂಬರುವ ದಿನಗಳಲ್ಲಿ ಬಲಿಷ್ಠ ಸಂಘಟನೆ ಮಾಡಬೇಕು ಅಂತ ಮುರುಘಾ ಶ್ರೀ ಹೇಳಿದರು.

ಇದನ್ನೂ ಓದಿ

6 ತಿಂಗಳಾದರೂ ಸಿಎಂ ಬಿಎಸ್‌ ಯಡಿಯೂರಪ್ಪರನ್ನು ಮುಂದುವರಿಸಿ, ಮಠಾಧೀಶರ ಮಾತಿಗೆ ಬೆಲೆ ಕೊಡಿ -ನಿಡುಮಾಮಿಡಿ ಸ್ವಾಮೀಜಿ ಮನವಿ

ಯಡಿಯೂರಪ್ಪ ಕೈಬಿಟ್ಟರೆ 6 ತಿಂಗಳಲ್ಲಿ ಸರ್ಕಾರ ಪತನ ಗ್ಯಾರಂಟಿ, ಬಿಜೆಪಿಗೆ ದೊಡ್ಡ ಪೆಟ್ಟು: ಮುರುಘಾ ಮಠದ ಸ್ವಾಮೀಜಿ ಎಚ್ಚರಿಕೆ

(Swamiji of Muruga Math says Chief Minister Yediyurappa’s development politics)

Published On - 2:42 pm, Sun, 25 July 21

Follow Us
Web contact
Web contact

TV9 Kannada

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ