ಮತಾಂತರ ಕಾಯ್ದೆ ಜಾರಿ ವಿಚಾರ ಚರ್ಚಿಸಲು ಸಿಎಂ ಬೊಮ್ಮಾಯಿ ಭೇಟಿಗೆ ಆಗಮಿಸಿದ ಶ್ರೀಗಳ ನಿಯೋಗ

ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಬೇಕೆಂದು ಆಗ್ರಹಿಸಿ ಸ್ವಾಮೀಜಿಗಳು ಹಾಗೂ ಪ್ರಮೋದ್ ಮುತಾಲಿಕ್ ಆಗ್ರಹ ವ್ಯಕ್ತಪಡಿಸಿದ್ದಾರೆ. ಕಾಯ್ದೆ ಮಾಡದಿದ್ರೆ ಸ್ವಾಮೀಜಿಗಳ ನೇತೃತ್ವದಲ್ಲಿ ಪ್ರತಿಭಟನೆ ಬಗ್ಗೆ ಎಚ್ಚರಿಕೆ ಕೊಡಲಾಗಿದೆ.

ಮತಾಂತರ ಕಾಯ್ದೆ ಜಾರಿ ವಿಚಾರ ಚರ್ಚಿಸಲು ಸಿಎಂ ಬೊಮ್ಮಾಯಿ ಭೇಟಿಗೆ ಆಗಮಿಸಿದ ಶ್ರೀಗಳ ನಿಯೋಗ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
Follow us
| Edited By: ganapathi bhat

Updated on: Nov 12, 2021 | 5:03 PM

ಬೆಂಗಳೂರು: ಮತಾಂತರ ಕಾಯ್ದೆ ಜಾರಿ ವಿಚಾರವಾಗಿ ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಗೆ ಶ್ರೀಗಳ ನಿಯೋಗ ಮತ್ತು ಪ್ರಮೋದ್ ಮುತಾಲಿಕ್​ ಆಗಮಿಸಿದ್ದಾರೆ. ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಬೇಕೆಂದು ಆಗ್ರಹಿಸಿ ಸ್ವಾಮೀಜಿಗಳು ಹಾಗೂ ಪ್ರಮೋದ್ ಮುತಾಲಿಕ್ ಆಗ್ರಹ ವ್ಯಕ್ತಪಡಿಸಿದ್ದಾರೆ. ಕಾಯ್ದೆ ಜಾರಿಗೆ ತರುವಂತೆ ಸಿಎಂಗೆ ಮಾದಾರ ಚನ್ನಯ್ಯ, ಸೇವಾಲಾಲ್ ಸ್ವಾಮೀಜಿ, ಸಿದ್ದಲಿಂಗಶ್ರೀ ಹಾಗೂ ಸುಮಾರು 50ಕ್ಕೂ ಹೆಚ್ಚು ಸ್ವಾಮೀಜಿಗಳ ನಿಯೋಗ ಮನವಿ ಮಾಡಿದೆ. ಕಾಯ್ದೆ ಮಾಡದಿದ್ರೆ ಸ್ವಾಮೀಜಿಗಳ ನೇತೃತ್ವದಲ್ಲಿ ಪ್ರತಿಭಟನೆ ಬಗ್ಗೆ ಎಚ್ಚರಿಕೆ ಕೊಡಲಾಗಿದೆ.

ಇದೇ ವೇಳೆ, ಬಿಟ್ ಕಾಯಿನ್ ವಿಚಾರದ ಬಗ್ಗೆ ಸೂಕ್ತ ತನಿಖೆ ಆಗಬೇಕು ಎಂದು ಬೆಂಗಳೂರಿನಲ್ಲಿ ಸ್ವಾಮೀಜಿಗಳ ನಿಯೋಗ ಒತ್ತಾಯ ಮಾಡಿದೆ. ಪ್ರಕರಣದಲ್ಲಿ ಯಾರೇ ಇದ್ದರೂ ಬಹಿರಂಗ ಪಡಿಸಬೇಕು. ಬಿಟ್ ಕಾಯಿನ್ ವಿಚಾರದಲ್ಲಿ ಪರಸ್ಪರ ದೂಷಣೆ ನಡೀತಿದೆ ವಿನಃ ಸತ್ಯ ಹೊರ ಬರ್ತಿಲ್ಲ. ತನಿಖೆ ಮಾಡಬೇಕು, ಮುಚ್ಚಿಹಾಕುವ ಕೆಲಸ ಆಗಬಾರದು ಎಂದು ಅವರು ಹೇಳಿದ್ದಾರೆ.

ಮತಾಂತರ ದೇಶಾದ್ಯಂತ ನಡೆಯುತ್ತಿದೆ. ಇದು ಬ್ರಿಟೀಷರಿಂದ ಪ್ರಾರಂಭವಾಗಿದೆ. ನಿಷೇಧ ಕಾಯ್ದೆ ಮಾಡ್ತಾರೆ ಅಂತ ಗೊತ್ತಾಗ್ತಿದ್ದಂತೆ ಪಾದ್ರಿಗಳು ಸಿಎಂ ಭೇಟಿಯಾಗಿದ್ದಾರೆ. ಇದು ಸರಿಯಲ್ಲ ಎಂದು ಸ್ವಾಮೀಜಿಗಳು ಹೇಳಿದ್ದಾರೆ. ಹಾಗಾಗಿ ಸಿಎಂ ಅವರಿಗೆ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಬೇಕು ಅಂತ ಆಗ್ರಹ ಮಾಡುತ್ತೇವೆ. ಬಿಟ್ ಕಾಯಿನ್ ವಿಚಾರವಾಗಿ ಕೂಡ ಸಾಮಾಜಿಕ ಕಳಕಳಿಯಿಂದ ತನಿಖೆ ಮಾಡಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಈಗ ಕಲಬೆರಕೆ ಪಕ್ಷ; ಒರಿಜಿನಲ್ ಬಿಜೆಪಿ ಆಗಿ ಉಳಿದಿಲ್ಲ: ಪ್ರಮೋದ್ ಮುತಾಲಿಕ್

ಇದನ್ನೂ ಓದಿ: ನೀವು ಮತಾಂತರಗೊಂಡಿದ್ದರೆ ಅದನ್ನು ಬಹಿರಂಗಪಡಿಸಿ, ಎರಡೆರಡು ಪ್ರಯೋಜನಗಳನ್ನು ಪಡೆಯಲು ಸಾಧ್ಯವಿಲ್ಲ: ಆರ್‌ಎಸ್‌ಎಸ್

ತಾಜಾ ಸುದ್ದಿ
ಕರ್ನಾಟಕ ಬಂದ್ ಗೆ ನಮ್ಮ ನೈತಿಕ ಬೆಂಬಲವಿದೆ: ಶಶಿಕುಮಾರ್-ಕಾಮ್ಸ್ ಅಧ್ಯಕ್ಷ
ಕರ್ನಾಟಕ ಬಂದ್ ಗೆ ನಮ್ಮ ನೈತಿಕ ಬೆಂಬಲವಿದೆ: ಶಶಿಕುಮಾರ್-ಕಾಮ್ಸ್ ಅಧ್ಯಕ್ಷ
ಕಾವೇರಿ ಹೋರಾಟವನ್ನು ವಿಭಿನ್ನವಾಗಿ ಬೆಂಬಲಿಸಿದ ಮೈಸೂರು ಮೂಲದ ವೈದ್ಯ
ಕಾವೇರಿ ಹೋರಾಟವನ್ನು ವಿಭಿನ್ನವಾಗಿ ಬೆಂಬಲಿಸಿದ ಮೈಸೂರು ಮೂಲದ ವೈದ್ಯ
ರಾಜ್ಯದ ಸಂಸದರೆಲ್ಲ ರಣಹೇಡಿಗಳು: ಟಿಎ ನಾರಾಯಣಗೌಡ, ಕರವೇ-ಅಧ್ಯಕ್ಷ
ರಾಜ್ಯದ ಸಂಸದರೆಲ್ಲ ರಣಹೇಡಿಗಳು: ಟಿಎ ನಾರಾಯಣಗೌಡ, ಕರವೇ-ಅಧ್ಯಕ್ಷ
ವ್ಯವಸಾಯ ಮಾಡಲು ಲಕ್ಷಾಂತರ ಎಕರೆ ಜಮೀನು ವಶಪಡಿಸಿಕೊಂಡ ಪಾಕಿಸ್ತಾನ ಸೇನ
ವ್ಯವಸಾಯ ಮಾಡಲು ಲಕ್ಷಾಂತರ ಎಕರೆ ಜಮೀನು ವಶಪಡಿಸಿಕೊಂಡ ಪಾಕಿಸ್ತಾನ ಸೇನ
ನಾಳೆ ಓಲಾ-ಊಬರ್ ಕ್ಯಾಬ್​ಗಳು ರಸ್ತೆಗಿಳಿಯಲ್ಲ; ಕ್ಯಾಬ್ ಚಾಲಕರ ಸಂಘದ ಅಧ್ಯಕ್ಷ
ನಾಳೆ ಓಲಾ-ಊಬರ್ ಕ್ಯಾಬ್​ಗಳು ರಸ್ತೆಗಿಳಿಯಲ್ಲ; ಕ್ಯಾಬ್ ಚಾಲಕರ ಸಂಘದ ಅಧ್ಯಕ್ಷ
ಬ್ರಿಟಿಷರು ಭಾರತ ಬಿಟ್ಟು ಹೋಗಿದ್ದು ನೇತಾಜಿ ಭಯದಿಂದ: ಬಸನಗೌಡ ಯತ್ನಾಳ್
ಬ್ರಿಟಿಷರು ಭಾರತ ಬಿಟ್ಟು ಹೋಗಿದ್ದು ನೇತಾಜಿ ಭಯದಿಂದ: ಬಸನಗೌಡ ಯತ್ನಾಳ್
ಚಿರಂಜೀವಿ ಕೊನೆಯ ಸಿನಿಮಾ ‘ರಾಜಮಾರ್ತಂಡ’ಕ್ಕೆ ಭರ್ಜರಿ ಪ್ರಚಾರ
ಚಿರಂಜೀವಿ ಕೊನೆಯ ಸಿನಿಮಾ ‘ರಾಜಮಾರ್ತಂಡ’ಕ್ಕೆ ಭರ್ಜರಿ ಪ್ರಚಾರ
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ