AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Swiggy: ಸ್ವಿಗ್ಗಿಯಲ್ಲಿ ಕಾಫಿ ಆರ್ಡರ್ ಮಾಡಿದ ಬೆಂಗಳೂರು ಯುವಕ; ಡೆಲಿವರಿ ಬಾಯ್ ಏನು ಮಾಡಿದ ಗೊತ್ತಾ?

Bengaluru News: ಬೆಂಗಳೂರಿನ ವ್ಯಕ್ತಿಯೊಬ್ಬರಿಗೆ ಕೆಫೆ ಕಾಫಿ ಡೇ (ಸಿಸಿಡಿ) ಔಟ್‌ಲೆಟ್‌ನಲ್ಲಿ ಕಾಫಿ ಕುಡಿಯಬೇಕೆನಿಸಿದ್ದರಿಂದ ಸ್ವಿಗ್ಗಿಯಲ್ಲಿ ಆರ್ಡರ್ ಮಾಡಿದ್ದರು. ಆ ಆರ್ಡರ್ ಅನ್ನು ಅಕ್ಸೆಪ್ಟ್​ ಮಾಡಿದ ಸ್ವಿಗ್ಗಿ ಡೆಲಿವರಿ ಏಜೆಂಟ್ ಮಾಡಿದ ಪ್ಲಾನ್ ಏನು ಗೊತ್ತಾ?

Swiggy: ಸ್ವಿಗ್ಗಿಯಲ್ಲಿ ಕಾಫಿ ಆರ್ಡರ್ ಮಾಡಿದ ಬೆಂಗಳೂರು ಯುವಕ; ಡೆಲಿವರಿ ಬಾಯ್ ಏನು ಮಾಡಿದ ಗೊತ್ತಾ?
ಸ್ವಿಗ್ಗಿ ಏಜೆಂಟ್
TV9 Web
| Edited By: |

Updated on:May 05, 2022 | 7:24 PM

Share

ಬೆಂಗಳೂರು ಭಾರತದ ಟೆಕ್ ಹಬ್ (Tech Hub) ಎಂಬುದು ಎಲ್ಲರಿಗೂ ಗೊತ್ತಿದೆ. ಆದರೆ ಬೆಂಗಳೂರು ವಿಚಿತ್ರ ಘಟನೆಗಳು ಮತ್ತು ಸನ್ನಿವೇಶಗಳ ಚಿನ್ನದ ಗಣಿ ಎಂದು ನಿಮಗೆ ತಿಳಿದಿದೆಯೇ? ಬೆಂಗಳೂರು ತಮಾಷೆಯ ಸಂಗತಿಗಳ ಕಾರಣದಿಂದ ಆಗಾಗ ಟ್ವಿಟ್ಟರ್​ನಲ್ಲಿ ಸದ್ದಾಗುತ್ತಲೇ ಇರುತ್ತದೆ. ಕೆಲವು ದಿನಗಳ ಹಿಂದೆ ರೂಮ್‌ಮೇಟ್‌ಗಳಿಬ್ಬರ ನಡುವೆ ನಡೆದಿದೆ ಎನ್ನಲಾದ ವಾಟ್ಸ್​ಆ್ಯಪ್ ಚಾಟ್ (WhatsApp Chat) ಟ್ವಿಟರ್‌ನಲ್ಲಿ ವೈರಲ್ ಆಗಿತ್ತು. ಇದೀಗ, ಸ್ವಿಗ್ಗಿ ಫುಡ್ ಡೆಲಿವರಿ ಏಜೆಂಟ್‌ಗೆ ಸಂಬಂಧಿಸಿದ ಅಚ್ಚರಿಯ ಘಟನೆಯೊಂದು ವೈರಲ್ ಆಗಿದೆ.

ಬೆಂಗಳೂರಿನ ವ್ಯಕ್ತಿಯೊಬ್ಬರಿಗೆ ಕೆಫೆ ಕಾಫಿ ಡೇ (ಸಿಸಿಡಿ) ಔಟ್‌ಲೆಟ್‌ನಲ್ಲಿ ಕಾಫಿ ಕುಡಿಯಬೇಕೆನಿಸಿದ್ದರಿಂದ ಸ್ವಿಗ್ಗಿಯಲ್ಲಿ ಆರ್ಡರ್ ಮಾಡಿದ್ದರು. ಆ ಆರ್ಡರ್ ಅನ್ನು ಅಕ್ಸೆಪ್ಟ್​ ಮಾಡಿದ ಸ್ವಿಗ್ಗಿ ಡೆಲಿವರಿ ಏಜೆಂಟ್ ಎಷ್ಟು ಹೊತ್ತಾದರೂ ಡೆಲಿವರಿ ನೀಡಲು ಬರಲಿಲ್ಲ. ಕೊನೆಗೆ ಅವರು ಫೋನ್ ಮಾಡಿ ಹೇಳಿದ ಮಾತು ಕೇಳಿ ಸ್ವಿಗ್ಗಿಯಲ್ಲಿ ಕಾಫಿ ಆರ್ಡರ್ ಮಾಡಿದ ಗ್ರಾಹಕನಿಗೆ ನಗಬೇಕೋ/ ಅಳಬೇಕೋ ತಿಳಿಯಲಿಲ್ಲವಂತೆ. (Source)

ಓಂಕಾರ್ ಜೋಶಿ ಎಂಬುವವರು ಟ್ವಿಟರ್‌ನಲ್ಲಿ ಈ ಪೋಸ್ಟ್​ ಹಂಚಿಕೊಂಡಿದ್ದಾರೆ. ಸ್ವಿಗ್ಗಿ ಡೆಲಿವರಿ ಏಜೆಂಟ್ ತಾನು ಕಾಫಿಯನ್ನು ಡೆಲಿವರಿ ನೀಡುವ ಬದಲು ಡಂಜೋ (Dunzo) ಎಂಬ ಮತ್ತೊಂದು ಡೆಲಿವರಿ ಅಪ್ಲಿಕೇಶನ್‌ನಿಂದ ಇನ್ನೊಬ್ಬ ವ್ಯಕ್ತಿಯನ್ನು ಬುಕ್ ಮಾಡಿ, ಅವರ ಮೂಲಕ ತನ್ನ ಗ್ರಾಹಕನಿಗೆ ಕಾಫಿಯನ್ನು ಕಳುಹಿಸಿಕೊಟ್ಟಿದ್ದಾರೆ. ತನ್ನ ಗ್ರಾಹಕನಿಗೆ ಡಂಜೋದಲ್ಲಿ ಕಾಫಿ ಕಳುಹಿಸಿರುವುದಾಗಿ ಹೇಳಿದ ಸ್ವಿಗ್ಗಿ ಡೆಲಿವರಿ ಬಾಯ್ ತನಗೆ 5 ಸ್ಟಾರ್ ಕೊಡುವಂತೆ ಮನವಿ ಮಾಡಿದ್ದಾನೆ!

ಈ ಟ್ವೀಟ್​ 2,500 ಕ್ಕೂ ಹೆಚ್ಚು ಲೈಕ್‌ಗಳನ್ನು ಗಳಿಸಿದೆ. ಈ ಪೋಸ್ಟ್​ ನೋಡಿ ನೆಟಿಜನ್‌ಗಳು ತಮಾಷೆಯಾಗಿ ಈ ಪೋಸ್ಟ್​ಗೆ ಕಮೆಂಟ್ ಹಾಕುತ್ತಿದ್ದಾರೆ. ಆ ಸ್ವಿಗ್ಗಿ ಡೆಲಿವರಿ ಬಾಯ್ ಇನ್ನೆಂತಹ ಸೋಮಾರಿ ಇರಬಹುದು ಎಂದು ಕೆಲವರು ಕಮೆಂಟ್ ಮಾಡಿದ್ದರೆ ಇನ್ನು ಕೆಲವರು ಟ್ರಾಫಿಕ್ ಉಸಾಬರಿಯೇ ಬೇಡವೆಂದು ಆತ ಜಾಣತನ ಪ್ರದರ್ಶಿಸಿದ್ದಾನೆ ಎಂದು ತಮಾಷೆ ಮಾಡಿದ್ದಾರೆ.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:22 pm, Thu, 5 May 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ