Sign In

By signing in or creating an account, you agree with Associated Broadcasting Company's Terms & Conditions and Privacy Policy.

Swiggy: ಸ್ವಿಗ್ಗಿಯಲ್ಲಿ ಕಾಫಿ ಆರ್ಡರ್ ಮಾಡಿದ ಬೆಂಗಳೂರು ಯುವಕ; ಡೆಲಿವರಿ ಬಾಯ್ ಏನು ಮಾಡಿದ ಗೊತ್ತಾ?

Bengaluru News: ಬೆಂಗಳೂರಿನ ವ್ಯಕ್ತಿಯೊಬ್ಬರಿಗೆ ಕೆಫೆ ಕಾಫಿ ಡೇ (ಸಿಸಿಡಿ) ಔಟ್‌ಲೆಟ್‌ನಲ್ಲಿ ಕಾಫಿ ಕುಡಿಯಬೇಕೆನಿಸಿದ್ದರಿಂದ ಸ್ವಿಗ್ಗಿಯಲ್ಲಿ ಆರ್ಡರ್ ಮಾಡಿದ್ದರು. ಆ ಆರ್ಡರ್ ಅನ್ನು ಅಕ್ಸೆಪ್ಟ್​ ಮಾಡಿದ ಸ್ವಿಗ್ಗಿ ಡೆಲಿವರಿ ಏಜೆಂಟ್ ಮಾಡಿದ ಪ್ಲಾನ್ ಏನು ಗೊತ್ತಾ?

Swiggy: ಸ್ವಿಗ್ಗಿಯಲ್ಲಿ ಕಾಫಿ ಆರ್ಡರ್ ಮಾಡಿದ ಬೆಂಗಳೂರು ಯುವಕ; ಡೆಲಿವರಿ ಬಾಯ್ ಏನು ಮಾಡಿದ ಗೊತ್ತಾ?
ಸ್ವಿಗ್ಗಿ ಏಜೆಂಟ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on:May 05, 2022 | 7:24 PM

ಬೆಂಗಳೂರು ಭಾರತದ ಟೆಕ್ ಹಬ್ (Tech Hub) ಎಂಬುದು ಎಲ್ಲರಿಗೂ ಗೊತ್ತಿದೆ. ಆದರೆ ಬೆಂಗಳೂರು ವಿಚಿತ್ರ ಘಟನೆಗಳು ಮತ್ತು ಸನ್ನಿವೇಶಗಳ ಚಿನ್ನದ ಗಣಿ ಎಂದು ನಿಮಗೆ ತಿಳಿದಿದೆಯೇ? ಬೆಂಗಳೂರು ತಮಾಷೆಯ ಸಂಗತಿಗಳ ಕಾರಣದಿಂದ ಆಗಾಗ ಟ್ವಿಟ್ಟರ್​ನಲ್ಲಿ ಸದ್ದಾಗುತ್ತಲೇ ಇರುತ್ತದೆ. ಕೆಲವು ದಿನಗಳ ಹಿಂದೆ ರೂಮ್‌ಮೇಟ್‌ಗಳಿಬ್ಬರ ನಡುವೆ ನಡೆದಿದೆ ಎನ್ನಲಾದ ವಾಟ್ಸ್​ಆ್ಯಪ್ ಚಾಟ್ (WhatsApp Chat) ಟ್ವಿಟರ್‌ನಲ್ಲಿ ವೈರಲ್ ಆಗಿತ್ತು. ಇದೀಗ, ಸ್ವಿಗ್ಗಿ ಫುಡ್ ಡೆಲಿವರಿ ಏಜೆಂಟ್‌ಗೆ ಸಂಬಂಧಿಸಿದ ಅಚ್ಚರಿಯ ಘಟನೆಯೊಂದು ವೈರಲ್ ಆಗಿದೆ.

ಬೆಂಗಳೂರಿನ ವ್ಯಕ್ತಿಯೊಬ್ಬರಿಗೆ ಕೆಫೆ ಕಾಫಿ ಡೇ (ಸಿಸಿಡಿ) ಔಟ್‌ಲೆಟ್‌ನಲ್ಲಿ ಕಾಫಿ ಕುಡಿಯಬೇಕೆನಿಸಿದ್ದರಿಂದ ಸ್ವಿಗ್ಗಿಯಲ್ಲಿ ಆರ್ಡರ್ ಮಾಡಿದ್ದರು. ಆ ಆರ್ಡರ್ ಅನ್ನು ಅಕ್ಸೆಪ್ಟ್​ ಮಾಡಿದ ಸ್ವಿಗ್ಗಿ ಡೆಲಿವರಿ ಏಜೆಂಟ್ ಎಷ್ಟು ಹೊತ್ತಾದರೂ ಡೆಲಿವರಿ ನೀಡಲು ಬರಲಿಲ್ಲ. ಕೊನೆಗೆ ಅವರು ಫೋನ್ ಮಾಡಿ ಹೇಳಿದ ಮಾತು ಕೇಳಿ ಸ್ವಿಗ್ಗಿಯಲ್ಲಿ ಕಾಫಿ ಆರ್ಡರ್ ಮಾಡಿದ ಗ್ರಾಹಕನಿಗೆ ನಗಬೇಕೋ/ ಅಳಬೇಕೋ ತಿಳಿಯಲಿಲ್ಲವಂತೆ. (Source)

ಓಂಕಾರ್ ಜೋಶಿ ಎಂಬುವವರು ಟ್ವಿಟರ್‌ನಲ್ಲಿ ಈ ಪೋಸ್ಟ್​ ಹಂಚಿಕೊಂಡಿದ್ದಾರೆ. ಸ್ವಿಗ್ಗಿ ಡೆಲಿವರಿ ಏಜೆಂಟ್ ತಾನು ಕಾಫಿಯನ್ನು ಡೆಲಿವರಿ ನೀಡುವ ಬದಲು ಡಂಜೋ (Dunzo) ಎಂಬ ಮತ್ತೊಂದು ಡೆಲಿವರಿ ಅಪ್ಲಿಕೇಶನ್‌ನಿಂದ ಇನ್ನೊಬ್ಬ ವ್ಯಕ್ತಿಯನ್ನು ಬುಕ್ ಮಾಡಿ, ಅವರ ಮೂಲಕ ತನ್ನ ಗ್ರಾಹಕನಿಗೆ ಕಾಫಿಯನ್ನು ಕಳುಹಿಸಿಕೊಟ್ಟಿದ್ದಾರೆ. ತನ್ನ ಗ್ರಾಹಕನಿಗೆ ಡಂಜೋದಲ್ಲಿ ಕಾಫಿ ಕಳುಹಿಸಿರುವುದಾಗಿ ಹೇಳಿದ ಸ್ವಿಗ್ಗಿ ಡೆಲಿವರಿ ಬಾಯ್ ತನಗೆ 5 ಸ್ಟಾರ್ ಕೊಡುವಂತೆ ಮನವಿ ಮಾಡಿದ್ದಾನೆ!

ಈ ಟ್ವೀಟ್​ 2,500 ಕ್ಕೂ ಹೆಚ್ಚು ಲೈಕ್‌ಗಳನ್ನು ಗಳಿಸಿದೆ. ಈ ಪೋಸ್ಟ್​ ನೋಡಿ ನೆಟಿಜನ್‌ಗಳು ತಮಾಷೆಯಾಗಿ ಈ ಪೋಸ್ಟ್​ಗೆ ಕಮೆಂಟ್ ಹಾಕುತ್ತಿದ್ದಾರೆ. ಆ ಸ್ವಿಗ್ಗಿ ಡೆಲಿವರಿ ಬಾಯ್ ಇನ್ನೆಂತಹ ಸೋಮಾರಿ ಇರಬಹುದು ಎಂದು ಕೆಲವರು ಕಮೆಂಟ್ ಮಾಡಿದ್ದರೆ ಇನ್ನು ಕೆಲವರು ಟ್ರಾಫಿಕ್ ಉಸಾಬರಿಯೇ ಬೇಡವೆಂದು ಆತ ಜಾಣತನ ಪ್ರದರ್ಶಿಸಿದ್ದಾನೆ ಎಂದು ತಮಾಷೆ ಮಾಡಿದ್ದಾರೆ.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:22 pm, Thu, 5 May 22

ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?