AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Swiggy: ಸ್ವಿಗ್ಗಿಯಲ್ಲಿ ಕಾಫಿ ಆರ್ಡರ್ ಮಾಡಿದ ಬೆಂಗಳೂರು ಯುವಕ; ಡೆಲಿವರಿ ಬಾಯ್ ಏನು ಮಾಡಿದ ಗೊತ್ತಾ?

Bengaluru News: ಬೆಂಗಳೂರಿನ ವ್ಯಕ್ತಿಯೊಬ್ಬರಿಗೆ ಕೆಫೆ ಕಾಫಿ ಡೇ (ಸಿಸಿಡಿ) ಔಟ್‌ಲೆಟ್‌ನಲ್ಲಿ ಕಾಫಿ ಕುಡಿಯಬೇಕೆನಿಸಿದ್ದರಿಂದ ಸ್ವಿಗ್ಗಿಯಲ್ಲಿ ಆರ್ಡರ್ ಮಾಡಿದ್ದರು. ಆ ಆರ್ಡರ್ ಅನ್ನು ಅಕ್ಸೆಪ್ಟ್​ ಮಾಡಿದ ಸ್ವಿಗ್ಗಿ ಡೆಲಿವರಿ ಏಜೆಂಟ್ ಮಾಡಿದ ಪ್ಲಾನ್ ಏನು ಗೊತ್ತಾ?

Swiggy: ಸ್ವಿಗ್ಗಿಯಲ್ಲಿ ಕಾಫಿ ಆರ್ಡರ್ ಮಾಡಿದ ಬೆಂಗಳೂರು ಯುವಕ; ಡೆಲಿವರಿ ಬಾಯ್ ಏನು ಮಾಡಿದ ಗೊತ್ತಾ?
ಸ್ವಿಗ್ಗಿ ಏಜೆಂಟ್
TV9 Web
| Edited By: |

Updated on:May 05, 2022 | 7:24 PM

Share

ಬೆಂಗಳೂರು ಭಾರತದ ಟೆಕ್ ಹಬ್ (Tech Hub) ಎಂಬುದು ಎಲ್ಲರಿಗೂ ಗೊತ್ತಿದೆ. ಆದರೆ ಬೆಂಗಳೂರು ವಿಚಿತ್ರ ಘಟನೆಗಳು ಮತ್ತು ಸನ್ನಿವೇಶಗಳ ಚಿನ್ನದ ಗಣಿ ಎಂದು ನಿಮಗೆ ತಿಳಿದಿದೆಯೇ? ಬೆಂಗಳೂರು ತಮಾಷೆಯ ಸಂಗತಿಗಳ ಕಾರಣದಿಂದ ಆಗಾಗ ಟ್ವಿಟ್ಟರ್​ನಲ್ಲಿ ಸದ್ದಾಗುತ್ತಲೇ ಇರುತ್ತದೆ. ಕೆಲವು ದಿನಗಳ ಹಿಂದೆ ರೂಮ್‌ಮೇಟ್‌ಗಳಿಬ್ಬರ ನಡುವೆ ನಡೆದಿದೆ ಎನ್ನಲಾದ ವಾಟ್ಸ್​ಆ್ಯಪ್ ಚಾಟ್ (WhatsApp Chat) ಟ್ವಿಟರ್‌ನಲ್ಲಿ ವೈರಲ್ ಆಗಿತ್ತು. ಇದೀಗ, ಸ್ವಿಗ್ಗಿ ಫುಡ್ ಡೆಲಿವರಿ ಏಜೆಂಟ್‌ಗೆ ಸಂಬಂಧಿಸಿದ ಅಚ್ಚರಿಯ ಘಟನೆಯೊಂದು ವೈರಲ್ ಆಗಿದೆ.

ಬೆಂಗಳೂರಿನ ವ್ಯಕ್ತಿಯೊಬ್ಬರಿಗೆ ಕೆಫೆ ಕಾಫಿ ಡೇ (ಸಿಸಿಡಿ) ಔಟ್‌ಲೆಟ್‌ನಲ್ಲಿ ಕಾಫಿ ಕುಡಿಯಬೇಕೆನಿಸಿದ್ದರಿಂದ ಸ್ವಿಗ್ಗಿಯಲ್ಲಿ ಆರ್ಡರ್ ಮಾಡಿದ್ದರು. ಆ ಆರ್ಡರ್ ಅನ್ನು ಅಕ್ಸೆಪ್ಟ್​ ಮಾಡಿದ ಸ್ವಿಗ್ಗಿ ಡೆಲಿವರಿ ಏಜೆಂಟ್ ಎಷ್ಟು ಹೊತ್ತಾದರೂ ಡೆಲಿವರಿ ನೀಡಲು ಬರಲಿಲ್ಲ. ಕೊನೆಗೆ ಅವರು ಫೋನ್ ಮಾಡಿ ಹೇಳಿದ ಮಾತು ಕೇಳಿ ಸ್ವಿಗ್ಗಿಯಲ್ಲಿ ಕಾಫಿ ಆರ್ಡರ್ ಮಾಡಿದ ಗ್ರಾಹಕನಿಗೆ ನಗಬೇಕೋ/ ಅಳಬೇಕೋ ತಿಳಿಯಲಿಲ್ಲವಂತೆ. (Source)

ಓಂಕಾರ್ ಜೋಶಿ ಎಂಬುವವರು ಟ್ವಿಟರ್‌ನಲ್ಲಿ ಈ ಪೋಸ್ಟ್​ ಹಂಚಿಕೊಂಡಿದ್ದಾರೆ. ಸ್ವಿಗ್ಗಿ ಡೆಲಿವರಿ ಏಜೆಂಟ್ ತಾನು ಕಾಫಿಯನ್ನು ಡೆಲಿವರಿ ನೀಡುವ ಬದಲು ಡಂಜೋ (Dunzo) ಎಂಬ ಮತ್ತೊಂದು ಡೆಲಿವರಿ ಅಪ್ಲಿಕೇಶನ್‌ನಿಂದ ಇನ್ನೊಬ್ಬ ವ್ಯಕ್ತಿಯನ್ನು ಬುಕ್ ಮಾಡಿ, ಅವರ ಮೂಲಕ ತನ್ನ ಗ್ರಾಹಕನಿಗೆ ಕಾಫಿಯನ್ನು ಕಳುಹಿಸಿಕೊಟ್ಟಿದ್ದಾರೆ. ತನ್ನ ಗ್ರಾಹಕನಿಗೆ ಡಂಜೋದಲ್ಲಿ ಕಾಫಿ ಕಳುಹಿಸಿರುವುದಾಗಿ ಹೇಳಿದ ಸ್ವಿಗ್ಗಿ ಡೆಲಿವರಿ ಬಾಯ್ ತನಗೆ 5 ಸ್ಟಾರ್ ಕೊಡುವಂತೆ ಮನವಿ ಮಾಡಿದ್ದಾನೆ!

ಈ ಟ್ವೀಟ್​ 2,500 ಕ್ಕೂ ಹೆಚ್ಚು ಲೈಕ್‌ಗಳನ್ನು ಗಳಿಸಿದೆ. ಈ ಪೋಸ್ಟ್​ ನೋಡಿ ನೆಟಿಜನ್‌ಗಳು ತಮಾಷೆಯಾಗಿ ಈ ಪೋಸ್ಟ್​ಗೆ ಕಮೆಂಟ್ ಹಾಕುತ್ತಿದ್ದಾರೆ. ಆ ಸ್ವಿಗ್ಗಿ ಡೆಲಿವರಿ ಬಾಯ್ ಇನ್ನೆಂತಹ ಸೋಮಾರಿ ಇರಬಹುದು ಎಂದು ಕೆಲವರು ಕಮೆಂಟ್ ಮಾಡಿದ್ದರೆ ಇನ್ನು ಕೆಲವರು ಟ್ರಾಫಿಕ್ ಉಸಾಬರಿಯೇ ಬೇಡವೆಂದು ಆತ ಜಾಣತನ ಪ್ರದರ್ಶಿಸಿದ್ದಾನೆ ಎಂದು ತಮಾಷೆ ಮಾಡಿದ್ದಾರೆ.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:22 pm, Thu, 5 May 22

Follow Us
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ