AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: 83 ಸಾವಿರ ಮೌಲ್ಯದ ಆಪಲ್ ವಾಚ್ ಕದ್ದ ಸ್ವಿಗ್ಗಿ ಜೀನಿ ಎಕ್ಸಿಕ್ಯೂಟಿವ್

ಬೆಂಗಳೂರು ಮೂಲದ ಸ್ವಿಗ್ಗಿ ಜೀನಿ ಡೆಲಿವರಿ ಎಕ್ಸಿಕ್ಯೂಟಿವ್ ಓರ್ವ ತನ್ನ 82,999 ರೂ. ಮೊತ್ತದ ಆಪಲ್ ವಾಚ್ ಅಲ್ಟ್ರಾವನ್ನು ಕದ್ದಿದ್ದರು ಎಂದು ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ಆರೋಪಿಸಿ ಟ್ವೀಟ್​​ ಮಾಡಿದ್ದಾರೆ.

Bengaluru News: 83 ಸಾವಿರ ಮೌಲ್ಯದ ಆಪಲ್ ವಾಚ್ ಕದ್ದ ಸ್ವಿಗ್ಗಿ ಜೀನಿ ಎಕ್ಸಿಕ್ಯೂಟಿವ್
ಸ್ವಿಗ್ಗಿ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Jul 14, 2023 | 7:52 AM

Share

ಬೆಂಗಳೂರು: ಬೆಂಗಳೂರು ಮೂಲದ ಸ್ವಿಗ್ಗಿ ಜೀನಿ (Swiggy genie) ಡೆಲಿವರಿ ಎಕ್ಸಿಕ್ಯೂಟಿವ್ ಓರ್ವ ತನ್ನ 82,999 ರೂ. ಮೊತ್ತದ ಆಪಲ್ ವಾಚ್ ಅಲ್ಟ್ರಾವನ್ನು ಕದ್ದಿದ್ದರು ಎಂದು ಬೆಂಗಳೂರು (Bengaluru) ಮೂಲದ ವ್ಯಕ್ತಿಯೊಬ್ಬರು ಆರೋಪಿಸಿ ಟ್ವೀಟ್ ಮಾಡಿದ್ದಾರೆ. Swiggy ಯ Genie ಸೇವೆ ಆಹಾರದ ಹೊರತಾಗಿ ಇತರ ವಸ್ತು ವಿತರಣಾ ಕಾರ್ಯಗಳನ್ನು ನಿರ್ವಹಿಸುತ್ತದೆ. ಜಯದೀಪ್ ಎಂಬ ಟ್ವಿಟರ್​​ (Twitter) ಬಳಕೆದಾರರ ಸ್ನೇಹಿತರಿಂದ ಸ್ವಿಗ್ಗಿ ಜೀನಿ ಡೆಲಿವರಿ ಬಾಯ್​​ ಆಪಲ್ ವಾಚ್ ಅಲ್ಟ್ರಾ ಅನ್ನು ಪಡೆದಿದ್ದಾನೆ.

ನಂತರ ಅದನ್ನು ತೆಗೆದುಕೊಂಡು ಜಯದೀಪ್​​ ಅವರ ಬಳಿ ಬರುತ್ತಿರುತ್ತಾನೆ. ದಾರಿ ಮಧ್ಯೆ ಇದ್ದಕ್ಕಿದ್ದಂತೆ ಆರ್ಡ್​​ ಕ್ಯಾನ್ಸಲ್​​ ಮಾಡಿ ನಂತರ ಮಾರ್ಗ ಬದಲಿಸಿ ಜಯದೀಪ ಅವರ ನಂಬರ್​ ಅನ್ನು ಬ್ಲಾಕ್​ ಮಾಡುತ್ತಾನೆ. ಡೆಲಿವೆರಿ ಬಾಯ್​ ಆರ್ಡ್​​ ಕ್ಯಾನ್ಸಲ್​​ ಮಾಡಿದ ತಕ್ಷಣ ಜಯದೀಪ ಅವರು ಗಾಭರಿಗೊಂಡಿದ್ದಾರೆ. ನಂತರ ಐಫೋನ್‌ನಲ್ಲಿನ ಸ್ಥಳ ಟ್ರ್ಯಾಕಿಂಗ್ ವೈಶಿಷ್ಟ್ಯದ ಸಹಾಯದಿಂದ, ಮತ್ತು ರ್ಯಾಪಿಡೋ ಬೈಕ್​ ಬುಕ್​ ಮಾಡಿಕೊಂಡು ಆತನನ್ನು ಬೆನ್ನು ಹತ್ತುತ್ತಾರೆ.

ಇದನ್ನೂ ಓದಿ: Karnataka Budget 2023: ಸ್ವಿಗ್ಗಿ, ಜೊಮಾಟೊ ಸೇರಿದಂತೆ ಡೆಲಿವರಿ ಬಾಯ್​​ಗಳಿಗೆ 4 ಲಕ್ಷ ರೂ. ಜೀವ, ಅಪಘಾತ ವಿಮೆ; ಬಜೆಟ್​​ನಲ್ಲಿ ಘೋಷಣೆ

ಹೀಗೆ ಆತನನ್ನು ಬೆನ್ನು ಹತ್ತಿ 2 ಗಂಟೆ ಸುಮಾರಿಗೆ ಅವನನ್ನು ಟ್ರ್ಯಾಕ್ ಮಾಡಿದ್ದಾರೆ. ನಂತರ ಆತನಿಂದ ವಾಚ್​​ ಪಡೆಯುತ್ತಾರೆ. ಇನ್ನು ಘಟನೆಯ ನಂತರ Swiggy ಯ Genie ಸೇವೆಯ ವಿಶ್ವಾಸಾರ್ಹತೆ ಮತ್ತು ಸುರಕ್ಷತೆಯ ಬಗ್ಗೆ ಕಳವಳವನ್ನು ಉಂಟುಮಾಡಿದೆ.್ ಸಂಭಾವ್ಯ ಕಳ್ಳತನ ಮತ್ತು ಮೋಸದ ಅಭ್ಯಾಸಗಳ ಬಗ್ಗೆ ಬಳಕೆದಾರರನ್ನು ಜಾಗರೂಕರಾಗಿರಿಸುತ್ತದೆ.

ಈ ಘಟನೆಯು Swiggy ನ Genie ಸೇವೆಯ ವಿಶ್ವಾಸಾರ್ಹತೆ ಮತ್ತು ಸುರಕ್ಷತೆಯ ಬಗ್ಗೆ ಕಳವಳವನ್ನು ಉಂಟುಮಾಡಿದೆ, ಸಂಭಾವ್ಯ ಕಳ್ಳತನ ಮತ್ತು ಮೋಸದ ಅಭ್ಯಾಸಗಳ ಬಗ್ಗೆ ಬಳಕೆದಾರರನ್ನು ಜಾಗರೂಕರಾಗಿರಿಸುತ್ತದೆ. ಘಟನೆಗೆ ಸಂಬಂಧಿಸಿದಂತೆ ಸ್ವಿಗ್ಗಿ ಇನ್ನೂ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ, ಆದರೆ ಡೆಲಿವರಿ ಮ್ಯಾನ್ ವಾಚ್ ಕದ್ದ ನಂತರ ಕಂಪನಿಯು ಇಮೇಲ್ ಅನ್ನು ಡ್ರಾಪ್ ಮಾಡಲು ಕೇಳಿದೆ ಎಂದು ಸಂತ್ರಸ್ತೆಯ ಸ್ನೇಹಿತ ಟ್ವಿಟರ್‌ನಲ್ಲಿ ವರದಿ ಮಾಡಿದ್ದಾರೆ. ಸದ್ಯಕ್ಕೆ ಸಂತ್ರಸ್ತೆ ದೂರು ಅಥವಾ ಎಫ್‌ಐಆರ್ ದಾಖಲಿಸಿದ್ದಾರೆಯೇ ಎಂಬ ಬಗ್ಗೆ ಯಾವುದೇ ಮಾಹಿತಿ ತಿಳಿದುಬಂದಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ