AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಚ್ 29ರವರೆಗೆ ಯಲಹಂಕ ಮಾರ್ಗದಲ್ಲಿ ರೈಲು ಸಂಚಾರ ವ್ಯತ್ಯಯ: ಇಲ್ಲಿದೆ ರದ್ದಾಗಿರುವ ರೈಲುಗಳ ವಿವರ

Yelahanka Penukonda Line: ಯಲಹಂಕ-ಪೆನುಕೊಂಡ ರೈಲು ಮಾರ್ಗ ದುರಸ್ತಿಯ ಹಿನ್ನೆಲೆಯಲ್ಲಿ ಮಾರ್ಚ್ 29ರವರೆಗೆ ಪೆನುಕೊಂಡ ಮಾರ್ಗದಲ್ಲಿ 10 ರೈಲುಗಳನ್ನು ರದ್ದುಪಡಿಸಲಾಗಿದೆ. 14 ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ.

ಮಾರ್ಚ್ 29ರವರೆಗೆ ಯಲಹಂಕ ಮಾರ್ಗದಲ್ಲಿ ರೈಲು ಸಂಚಾರ ವ್ಯತ್ಯಯ: ಇಲ್ಲಿದೆ ರದ್ದಾಗಿರುವ ರೈಲುಗಳ ವಿವರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Mar 24, 2022 | 10:08 AM

Share

ಬೆಂಗಳೂರು: ಯಲಹಂಕ-ಪೆನುಕೊಂಡ ರೈಲು ಮಾರ್ಗ ದುರಸ್ತಿಯ ಹಿನ್ನೆಲೆಯಲ್ಲಿ Yelahanka Penukonda Railway Line)  ಮಾರ್ಚ್ 29ರವರೆಗೆ ಪೆನುಕೊಂಡ ಮಾರ್ಗದಲ್ಲಿ 10 ರೈಲುಗಳನ್ನು ರದ್ದುಪಡಿಸಲಾಗಿದೆ. 14 ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಯಲಹಂಕ-ಪೆನುಕೊಂಡ ಮಾರ್ಗದಲ್ಲಿ ಅಂತಿಮ ಹಂತದ ವಿದ್ಯುದೀಕರಣ ಮತ್ತು ದ್ವಿಪಥ ಕಾಮಗಾರಿ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಓಡಾಟಕ್ಕೆ ನಿರ್ಬಂಧ ವಿಧಿಸಲಾಗಿದೆ. ಈ ಮಾರ್ಗದ ಮೂಲಕ ಬೆಂಗಳೂರು ಕಂಟೋನ್​ಮೆಂಟ್ ಹಾಗೂ ಯಶವಂತಪುರ ರೈಲು ನಿಲ್ದಾಣಕ್ಕೆ ಬರುತ್ತಿದ್ದ ರೈಲುಗಳ ಸಂಚಾರ ನಿರ್ಬಂಧಿಸಲಾಗಿದೆ.

ಯಲಹಂಕ-ಪೆನುಕೊಂಡ ಮಾರ್ಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈಲುಗಳು ಸಂಚರಿಸುತ್ತಿದ್ದ ಕಾರಣ ಮಾರ್ಗದ ಮೇಲೆ ತೀವ್ರ ಒತ್ತಡವಿತ್ತು. ಇದರಿಂದಾಗಿ ರೈಲುಗಳ ಸಂಚಾರವೂ ಕಷ್ಟವಾಗಿತ್ತು. ಮಾರ್ಗದ ಸಂಚಾರ ಸಾಮರ್ಥ್ಯ ಹೆಚ್ಚಿಸಲು 2015-16ರಲ್ಲಿ ಒಟ್ಟು ₹ 1,104 ಕೋಟಿ ವೆಚ್ಚದಲ್ಲಿ ಡಬ್ಲಿಂಗ್ ಕಾಮಗಾರಿ ಕೈಗೆತ್ತಿಕೊಳ್ಳಲಾಯಿತು. 82 ಕಿಮೀ ಮಾರ್ಗವನ್ನು ಈಗಾಗಲೇ ಬಳಸಲಾಗುತ್ತಿದೆ. ಬಾಕಿ ಇರುವ ಹಿಂದೂಪುರ-ಪೆನುಕೊಂಡ ಮಾರ್ಗದಲ್ಲಿ ಇದೇ ತಿಂಗಳ ಅಂತ್ಯಕ್ಕೆ ಕಾಮಗಾರಿ ಪೂರ್ಣಗೊಳಿಸಲು ರೈಲ್ವೆ ಇಲಾಖೆ ಉದ್ದೇಶಿಸಿ ಎಂದು ಪತ್ರಿಕಾ ಹೇಳಿಕೆಯಲ್ಲಿ ರೈಲ್ವೆ ಇಲಾಖೆ ತಿಳಿಸಿದೆ.

‘ಟಿಕೆಟ್ ಬುಕ್ ಮಾಡಿರುವ ಪ್ರಯಾಣಿಕರು ಮಾರ್ಗ ಬದಲಾವಣೆ ಕುರಿತು ಎಸ್​ಎಂಎಸ್​ಗಳನ್ನು ಕಳಿಸಲಾಗಿದೆ. ಅಂತರ ಹೆಚ್ಚಾಗುವ ಕಾರಣ ಪ್ರಯಾಣದ ಅವಧಿಯೂ ಹೆಚ್ಚಾಗಲಿದೆ. ಇಂಥವರಿಗೆ ಸಮಸ್ಯೆಯಾಗಬಾರದು ಎಂಬ ಕಾರಣಕ್ಕಾಗಿ ಹೆಚ್ಚುವರಿಯಾಗಿ ಊಟೋಪಚಾರದ ವ್ಯವಸ್ಥೆ ಮಾಡಲಾಗಿದೆ. ರದ್ದುಪಡಿಸುವ ಟಿಕೆಟ್​ಗಳಿಗೆ ನಿಯಮಗಳ ಪ್ರಕಾರ ಹಣವನ್ನು ರಿಫಂಡ್ ಮಾಡುತ್ತೇವೆ’ ಎಂದು ರೈಲ್ವೆ ಇಲಾಖೆಯ ವಾಣಿಜ್ಯ ವಿಭಾಗದ ಮ್ಯಾನೇಜರ್ ದಯಾನಂದ್ ಸಾಧು ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದ್ದರು.

ರದ್ದಾಗಿರುವ ರೈಲುಗಳು 1) ಧರ್ಮಾವರಂ-ಬೆಂಗಳೂರು ಕಂಟೋನ್​ಮೆಂಟ್ ಮೆಮು 2) ಸಿಕಂದ್ರಾಬಾದ್-ಯಶವಂತಪುರ ಗರೀಬ್​ರಥ್ ಎಕ್ಸ್​ಪ್ರೆಸ್ 3) ಮುಂಬೈ-ಬೆಂಗಳೂರು ಉದ್ಯಾನ್ ಎಕ್ಸ್​ಪ್ರೆಸ್ 4) ಸೊಲ್ಲಾಪುರ-ಹಾಸನ ಡೈಲಿ ಎಕ್ಸ್​ಪ್ರೆಸ್ 5) ಯಶವಂತಪುರ-ಡಾ.ಅಂಬೇಡ್ಕರ್ ನಗರ ವೀಕ್ಲಿ ಎಕ್ಸ್​ಪ್ರೆಸ್ 7) ಗುಂತಕಲ್-ಹಿಂದೂಪುರ ಮೆಮು 8) ಮಚಲೀಪಟ್ಟಣಂ-ಯಶವಂತಪುರ ಎಕ್ಸ್​ಪ್ರೆಸ್

ಭಾಗಶಃ ರದ್ದಾಗಿರುವ ರೈಲುಗಳು 1) ಭುವನೇಶ್ವರ-ಬೆಂಗಳೂರು ಪ್ರಶಾಂತಿ ಎಕ್ಸ್​ಪ್ರೆಸ್ 2) ಕಾಚಿಗುಡ-ಯಲಹಂಕ 3) ಚೆನ್ನೈ-ಸತ್ಯಸಾಯಿ ಪ್ರಶಾಂತಿ ನಿಲಯಂ ವೀಕ್ಸಲಿ ಎಕ್ಸ್​ಪ್ರೆಸ್

ಈ ಮಾರ್ಗದಲ್ಲಿ ಸಂಚರಿಸುವ 14 ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಪ್ರಯಾಣಿಕರು ಸಮೀಪದ ರೈಲ್ವೆ ನಿಲ್ದಾಣದಿಂದ ಮಾಹಿತಿ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಈ ಲಿಂಕ್ ಕ್ಲಿಕ್ ಮಾಡಿ.

ಇದನ್ನೂ ಓದಿ: Indian Railways: ಭಾರತೀಯ ರೈಲ್ವೆ ಇಲಾಖೆಯಿಂದ ವಿವಿಧ ರಾಜ್ಯಗಳ 240 ರೈಲುಗಳ ಸಂಚಾರ ರದ್ದು

ಇದನ್ನೂ ಓದಿ: ಹೊಸೂರುವರೆಗೂ ನಮ್ಮ ಮೆಟ್ರೋ ರೈಲು ಬಿಡಲು ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಸಿದ್ದರಾಮಯ್ಯ

Published On - 10:06 am, Thu, 24 March 22

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್