AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಚ್ 29ರವರೆಗೆ ಯಲಹಂಕ ಮಾರ್ಗದಲ್ಲಿ ರೈಲು ಸಂಚಾರ ವ್ಯತ್ಯಯ: ಇಲ್ಲಿದೆ ರದ್ದಾಗಿರುವ ರೈಲುಗಳ ವಿವರ

Yelahanka Penukonda Line: ಯಲಹಂಕ-ಪೆನುಕೊಂಡ ರೈಲು ಮಾರ್ಗ ದುರಸ್ತಿಯ ಹಿನ್ನೆಲೆಯಲ್ಲಿ ಮಾರ್ಚ್ 29ರವರೆಗೆ ಪೆನುಕೊಂಡ ಮಾರ್ಗದಲ್ಲಿ 10 ರೈಲುಗಳನ್ನು ರದ್ದುಪಡಿಸಲಾಗಿದೆ. 14 ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ.

ಮಾರ್ಚ್ 29ರವರೆಗೆ ಯಲಹಂಕ ಮಾರ್ಗದಲ್ಲಿ ರೈಲು ಸಂಚಾರ ವ್ಯತ್ಯಯ: ಇಲ್ಲಿದೆ ರದ್ದಾಗಿರುವ ರೈಲುಗಳ ವಿವರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Mar 24, 2022 | 10:08 AM

Share

ಬೆಂಗಳೂರು: ಯಲಹಂಕ-ಪೆನುಕೊಂಡ ರೈಲು ಮಾರ್ಗ ದುರಸ್ತಿಯ ಹಿನ್ನೆಲೆಯಲ್ಲಿ Yelahanka Penukonda Railway Line)  ಮಾರ್ಚ್ 29ರವರೆಗೆ ಪೆನುಕೊಂಡ ಮಾರ್ಗದಲ್ಲಿ 10 ರೈಲುಗಳನ್ನು ರದ್ದುಪಡಿಸಲಾಗಿದೆ. 14 ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಯಲಹಂಕ-ಪೆನುಕೊಂಡ ಮಾರ್ಗದಲ್ಲಿ ಅಂತಿಮ ಹಂತದ ವಿದ್ಯುದೀಕರಣ ಮತ್ತು ದ್ವಿಪಥ ಕಾಮಗಾರಿ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಓಡಾಟಕ್ಕೆ ನಿರ್ಬಂಧ ವಿಧಿಸಲಾಗಿದೆ. ಈ ಮಾರ್ಗದ ಮೂಲಕ ಬೆಂಗಳೂರು ಕಂಟೋನ್​ಮೆಂಟ್ ಹಾಗೂ ಯಶವಂತಪುರ ರೈಲು ನಿಲ್ದಾಣಕ್ಕೆ ಬರುತ್ತಿದ್ದ ರೈಲುಗಳ ಸಂಚಾರ ನಿರ್ಬಂಧಿಸಲಾಗಿದೆ.

ಯಲಹಂಕ-ಪೆನುಕೊಂಡ ಮಾರ್ಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈಲುಗಳು ಸಂಚರಿಸುತ್ತಿದ್ದ ಕಾರಣ ಮಾರ್ಗದ ಮೇಲೆ ತೀವ್ರ ಒತ್ತಡವಿತ್ತು. ಇದರಿಂದಾಗಿ ರೈಲುಗಳ ಸಂಚಾರವೂ ಕಷ್ಟವಾಗಿತ್ತು. ಮಾರ್ಗದ ಸಂಚಾರ ಸಾಮರ್ಥ್ಯ ಹೆಚ್ಚಿಸಲು 2015-16ರಲ್ಲಿ ಒಟ್ಟು ₹ 1,104 ಕೋಟಿ ವೆಚ್ಚದಲ್ಲಿ ಡಬ್ಲಿಂಗ್ ಕಾಮಗಾರಿ ಕೈಗೆತ್ತಿಕೊಳ್ಳಲಾಯಿತು. 82 ಕಿಮೀ ಮಾರ್ಗವನ್ನು ಈಗಾಗಲೇ ಬಳಸಲಾಗುತ್ತಿದೆ. ಬಾಕಿ ಇರುವ ಹಿಂದೂಪುರ-ಪೆನುಕೊಂಡ ಮಾರ್ಗದಲ್ಲಿ ಇದೇ ತಿಂಗಳ ಅಂತ್ಯಕ್ಕೆ ಕಾಮಗಾರಿ ಪೂರ್ಣಗೊಳಿಸಲು ರೈಲ್ವೆ ಇಲಾಖೆ ಉದ್ದೇಶಿಸಿ ಎಂದು ಪತ್ರಿಕಾ ಹೇಳಿಕೆಯಲ್ಲಿ ರೈಲ್ವೆ ಇಲಾಖೆ ತಿಳಿಸಿದೆ.

‘ಟಿಕೆಟ್ ಬುಕ್ ಮಾಡಿರುವ ಪ್ರಯಾಣಿಕರು ಮಾರ್ಗ ಬದಲಾವಣೆ ಕುರಿತು ಎಸ್​ಎಂಎಸ್​ಗಳನ್ನು ಕಳಿಸಲಾಗಿದೆ. ಅಂತರ ಹೆಚ್ಚಾಗುವ ಕಾರಣ ಪ್ರಯಾಣದ ಅವಧಿಯೂ ಹೆಚ್ಚಾಗಲಿದೆ. ಇಂಥವರಿಗೆ ಸಮಸ್ಯೆಯಾಗಬಾರದು ಎಂಬ ಕಾರಣಕ್ಕಾಗಿ ಹೆಚ್ಚುವರಿಯಾಗಿ ಊಟೋಪಚಾರದ ವ್ಯವಸ್ಥೆ ಮಾಡಲಾಗಿದೆ. ರದ್ದುಪಡಿಸುವ ಟಿಕೆಟ್​ಗಳಿಗೆ ನಿಯಮಗಳ ಪ್ರಕಾರ ಹಣವನ್ನು ರಿಫಂಡ್ ಮಾಡುತ್ತೇವೆ’ ಎಂದು ರೈಲ್ವೆ ಇಲಾಖೆಯ ವಾಣಿಜ್ಯ ವಿಭಾಗದ ಮ್ಯಾನೇಜರ್ ದಯಾನಂದ್ ಸಾಧು ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದ್ದರು.

ರದ್ದಾಗಿರುವ ರೈಲುಗಳು 1) ಧರ್ಮಾವರಂ-ಬೆಂಗಳೂರು ಕಂಟೋನ್​ಮೆಂಟ್ ಮೆಮು 2) ಸಿಕಂದ್ರಾಬಾದ್-ಯಶವಂತಪುರ ಗರೀಬ್​ರಥ್ ಎಕ್ಸ್​ಪ್ರೆಸ್ 3) ಮುಂಬೈ-ಬೆಂಗಳೂರು ಉದ್ಯಾನ್ ಎಕ್ಸ್​ಪ್ರೆಸ್ 4) ಸೊಲ್ಲಾಪುರ-ಹಾಸನ ಡೈಲಿ ಎಕ್ಸ್​ಪ್ರೆಸ್ 5) ಯಶವಂತಪುರ-ಡಾ.ಅಂಬೇಡ್ಕರ್ ನಗರ ವೀಕ್ಲಿ ಎಕ್ಸ್​ಪ್ರೆಸ್ 7) ಗುಂತಕಲ್-ಹಿಂದೂಪುರ ಮೆಮು 8) ಮಚಲೀಪಟ್ಟಣಂ-ಯಶವಂತಪುರ ಎಕ್ಸ್​ಪ್ರೆಸ್

ಭಾಗಶಃ ರದ್ದಾಗಿರುವ ರೈಲುಗಳು 1) ಭುವನೇಶ್ವರ-ಬೆಂಗಳೂರು ಪ್ರಶಾಂತಿ ಎಕ್ಸ್​ಪ್ರೆಸ್ 2) ಕಾಚಿಗುಡ-ಯಲಹಂಕ 3) ಚೆನ್ನೈ-ಸತ್ಯಸಾಯಿ ಪ್ರಶಾಂತಿ ನಿಲಯಂ ವೀಕ್ಸಲಿ ಎಕ್ಸ್​ಪ್ರೆಸ್

ಈ ಮಾರ್ಗದಲ್ಲಿ ಸಂಚರಿಸುವ 14 ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಪ್ರಯಾಣಿಕರು ಸಮೀಪದ ರೈಲ್ವೆ ನಿಲ್ದಾಣದಿಂದ ಮಾಹಿತಿ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಈ ಲಿಂಕ್ ಕ್ಲಿಕ್ ಮಾಡಿ.

ಇದನ್ನೂ ಓದಿ: Indian Railways: ಭಾರತೀಯ ರೈಲ್ವೆ ಇಲಾಖೆಯಿಂದ ವಿವಿಧ ರಾಜ್ಯಗಳ 240 ರೈಲುಗಳ ಸಂಚಾರ ರದ್ದು

ಇದನ್ನೂ ಓದಿ: ಹೊಸೂರುವರೆಗೂ ನಮ್ಮ ಮೆಟ್ರೋ ರೈಲು ಬಿಡಲು ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಸಿದ್ದರಾಮಯ್ಯ

Published On - 10:06 am, Thu, 24 March 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ