AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ ರೈಲು ನಿಲ್ದಾಣದಲ್ಲಿ ಟಿಕೆಟ್​ಗಾಗಿ ನಿಲ್ಲಬೇಕಿಲ್ಲ ಕ್ಯೂ: ನಿಂತಿದ್ದಲ್ಲೇ ಸಿಗಲಿದೆ ಟಿಕೆಟ್!

ಬೆಂಗಳೂರಿನ ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು, ನೈರುತ್ಯ ರೈಲ್ವೆ ಹೊಸ ಮೊಬೈಲ್ ಟಿಕೆಟ್ ವ್ಯವಸ್ಥೆ (ಎಂ-ಯುಟಿಎಸ್)ಪರಿಚಯಿಸಿದೆ. ಈ ವ್ಯವಸ್ಥೆಯಿಂದ ಪ್ರಯಾಣಿಕರು ಟಿಕೆಟ್ ಕೌಂಟರ್‌ಗಳಲ್ಲಿ ಸರತಿ ಸಾಲಿನಲ್ಲಿ ನಿಲ್ಲುವ ಅಗತ್ಯವಿಲ್ಲ. ಸಿಬ್ಬಂದಿ ಪ್ರಯಾಣಿಕರಿದ್ದ ಸ್ಥಳಕ್ಕೆ ಬಂದು ಟಿಕೆಟ್‌ಗಳನ್ನು ನೀಡುತ್ತಾರೆ. ಹೊಸ ವ್ಯವಸ್ಥೆಯ ವಿವರ ಇಲ್ಲಿದೆ.

ಇನ್ಮುಂದೆ ರೈಲು ನಿಲ್ದಾಣದಲ್ಲಿ ಟಿಕೆಟ್​ಗಾಗಿ ನಿಲ್ಲಬೇಕಿಲ್ಲ ಕ್ಯೂ: ನಿಂತಿದ್ದಲ್ಲೇ ಸಿಗಲಿದೆ ಟಿಕೆಟ್!
ರೈಲು ಟಿಕೆಟ್​​ಗಾಗಿ ನಿಲ್ಬೇಕಿಲ್ಲ ಕ್ಯೂ, ನಿಲ್ದಾಣದಲ್ಲಿ ನೀವು ನಿಂತಿದ್ದಲ್ಲಿಗೇ ಬರಲಿದೆ ಟಿಕೆಟ್!
Kiran Surya
| Edited By: |

Updated on: Nov 20, 2024 | 7:36 AM

Share

ಬೆಂಗಳೂರು, ನವೆಂಬರ್ 20: ರೈಲ್ವೆ ಸ್ಟೇಷನ್ ಅಂದರೆ ಮೊದಲಿಗೆ ನೆನಪಾಗುವುದೇ ಟಿಕೆಟ್ ಕೌಂಟರ್ ಮುಂದಿನ ಸರದಿ ಸಾಲು. ಅದರಲ್ಲೂ ಹಬ್ಬಗಳ ಸೀಸನ್ ಬಂದರೆ ಸಾಕು, ಹೆಜ್ಜೆ ಹೆಜ್ಜೆಗೂ ಪ್ರಯಾಣಿಕರಿರುತ್ತಾರೆ. ಕ್ಯೂ ಉದ್ದ ಇರುತ್ತದೆ. ಕೆಲವರು ಟಿಕೆಟ್ ಸಿಗದೆ ವಾಪಸ್ ಆಗುವ ಘಟನೆಯೂ ಕೂಡ ನಡೆಯುತ್ತವೆ. ಆದರೆ, ಇದೀಗ ಪ್ರಯಾಣಿಕರ ಸಂಕಷ್ಟ ತಪ್ಪಿಸಲು ನೈರುತ್ಯ ರೈಲ್ವೆ ಹೊಸ ಯೋಜನೆ ಶುರು ಮಾಡುತ್ತಿದೆ.

ಪ್ರಯಾಣಿಕರಿದ್ದ ಜಾಗಕ್ಕೇ ಬಂದು ಕೊಡಲಿದ್ದಾರೆ ಟಿಕೆಟ್!

ಇನ್ಮುಂದೆ ರೈಲ್ವೆ ಪ್ರಯಾಣಿಕರು ಟಿಕೆಟ್​​ಗಾಗಿ ಕೌಂಟರ್ ಮುಂದೆ ಸರದಿಯಲ್ಲಿ ನಿಂತು ಕಾಯಬೇಕಲ್ಲ. ಪ್ರಯಾಣಿಕರ ದಟ್ಟಣೆಯ ಸಮಯದಲ್ಲಿ, ಪ್ರಯಾಣಿಕರಿದ್ದ ಜಾಗಕ್ಕೆ ಹೋಗಿ ಟಿಕೆಟ್ ಕೊಡಲು ನೈರುತ್ಯ ರೈಲ್ವೆ ಎಂ-ಯುಟಿಎಸ್ ವ್ಯವಸ್ಥೆ ಪರಿಚಯಿಸಿದೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಸರ್.ಎಂ.ವಿಶ್ವೇಶರಯ್ಯ ನಿಲ್ದಾಣ, ಯಶವಂತಪುರ ರೈಲು ನಿಲ್ದಾಣಗಳಲ್ಲಿ ಪ್ರಾಯೋಗಿಕವಾಗಿ ಹೊಸ ವ್ಯವಸ್ಥೆ ಜಾರಿಗೆ ಬಂದಿದೆ.

ಯಾವೆಲ್ಲ ಟಿಕೆಟ್, ಎಲ್ಲೆಲ್ಲಿ ಸಿಗಲಿದೆ?

ಎಂ-ಯುಟಿಎಸ್‌ ಯಂತ್ರಗಳ ಮೂಲಕ ಕಾಯ್ದಿರಿಸದ ಟಿಕೆಟ್‌, ಪ್ಲಾಟ್‌ಫಾರ್ಮ್ ಟಿಕೆಟ್‌ಗಳನ್ನು ಪ್ರಯಾಣಿಕರು ನಿಂತಿರುವ ಜಾಗಕ್ಕೆ ಹೋಗಿ ಸಿಬ್ಬಂದಿ ಕೊಡಲಿದ್ದಾರೆ. ನಿಲ್ದಾಣದಿಂದ 500-ಮೀಟರ್‌ ಅಂತರದಲ್ಲಿ ಎಂ-ಯುಟಿಎಸ್‌ ಟಿಕೆಟ್‌ ವಿತರಿಸಲು ಅವಕಾಶವಿದೆ ಎಂದು ನೈರುತ್ಯ ರೈಲ್ವೇ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರಾದ ತ್ರಿನೇತ್ರ ಕೆಆರ್ ತಿಳಿಸಿದ್ದಾರೆ.

ಏನಿದು ಎಂ ಯುಟಿಎಸ್ ಸೇವೆ?

SWR Launches Mobile Ticket Service, M-UTS system in Bengaluru Railway Stations, No More Queues

ಎಂ-ಯುಟಿಎಸ್ ಎಂಬುದು ಯುಟಿಎಸ್ ಆ್ಯಪ್ ಸೇವೆಗಿಂತ ತುಸು ವಿಭಿನ್ನವಾಗಿದೆ. ಯುಟಿಎಸ್ ಆ್ಯಪ್ ಮೂಲಕ ನಾವೇ ಟಿಕೆಟ್ ಪಡೆಯಬೇಕು. ಆದರೆ, ಎಂ-ಯುಟಿಎಸ್‌ನಲ್ಲಿ ರೈಲ್ವೆ ಸಿಬ್ಬಂದಿ ಟಿಕೆಟ್ ನೀಡುತ್ತಾರೆ. ನೈರುತ್ಯ ರೈಲ್ವೆಯ ಈ ಹೊಸ ಸೇವೆಗೆ ಪ್ರಯಾಣಿಕರು ಖುಷಿಯಾಗಿದ್ದು, ತುಂಬಾ ಸಮಯ ಉಳಿಯುತ್ತೆಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೃಷಿ ಕ್ಷೇತ್ರಕ್ಕೂ ಕಾಲಿಟ್ಟ ಎಐ: ಮಣ್ಣಿಲ್ಲದೆ ನೀರಿನಲ್ಲೇ ಬಾಲ್ಕನಿ, ಟೆರಸ್ ಮೇಲೆ‌ ಬೆಳೆಯಬಹುದು ಸೊಪ್ಪು-ತರಕಾರಿ!

ಪ್ರಯಾಣಿಕರಿಗೆ ನಿಂತಲ್ಲಿಯೇ ಟಿಕೆಟ್ ಸಿಗುವುದರಿಂದ ದಟ್ಟಣೆ ತಗ್ಗಲಿದೆ. ಇಷ್ಟು ದಿನ ಹಬ್ಬಗಳ ಸಂದರ್ಭದಲ್ಲಿ ಕೆಲವರು ಸರದಿಯಲ್ಲಿ ನಿಂತು ಟಿಕೆಟ್ ಸಿಗದೆ ವಾಪಾಸಾಗುತ್ತಿದ್ದರು. ಇನ್ನು ಕೆಲವರು ಟಿಕೆಟ್ ಸಿಗದ ಕಾರಣ ಟಿಕೆಟ್ ರಹಿತ ಪ್ರಯಾಣಿಸಿ ಸಿಕ್ಕಿ ಬೀಳುತ್ತಿದ್ದರು. ಆದರೆ, ಈ ಎಲ್ಲಾ ಸಮಸ್ಯೆಗಳಿಗೆ ಎಂ-ಯುಟಿಎಸ್ ಆ್ಯಪ್ ಮುಕ್ತಿ‌ಕೊಟ್ಟಿದ್ದು, ಆದಷ್ಟು ಬೇಗ ಈ ವ್ಯವಸ್ಥೆ ಎಲ್ಲಾ ರೈಲು ನಿಲ್ದಾಣಗಳಲ್ಲಿ ಬರಲಿ ಎಂದು ಪ್ರಯಾಣಿಕರು ಆಶಯ ವ್ಯಕ್ತಪಡಿಸಿದ್ದಾರೆ. ಸದ್ಯ ಬೆಂಗಳೂರಿನ ರೈಲು ನಿಲ್ದಾಣಗಳಲ್ಲಿ ಪ್ರಾಯೋಗಿಕವಾಗಿ ಜಾರಿಯಾಗಿರುವ ಈ ವ್ಯವಸ್ಥೆ ಯಶಸ್ವಿಯಾದರೆ ಇತರ ರೈಲು ನಿಲ್ದಾಣಗಳಿಗೂ ಬರುವ ದಿನ ದೂರವಿಲ್ಲ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​