AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ ರೈಲು ನಿಲ್ದಾಣದಲ್ಲಿ ಟಿಕೆಟ್​ಗಾಗಿ ನಿಲ್ಲಬೇಕಿಲ್ಲ ಕ್ಯೂ: ನಿಂತಿದ್ದಲ್ಲೇ ಸಿಗಲಿದೆ ಟಿಕೆಟ್!

ಬೆಂಗಳೂರಿನ ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು, ನೈರುತ್ಯ ರೈಲ್ವೆ ಹೊಸ ಮೊಬೈಲ್ ಟಿಕೆಟ್ ವ್ಯವಸ್ಥೆ (ಎಂ-ಯುಟಿಎಸ್)ಪರಿಚಯಿಸಿದೆ. ಈ ವ್ಯವಸ್ಥೆಯಿಂದ ಪ್ರಯಾಣಿಕರು ಟಿಕೆಟ್ ಕೌಂಟರ್‌ಗಳಲ್ಲಿ ಸರತಿ ಸಾಲಿನಲ್ಲಿ ನಿಲ್ಲುವ ಅಗತ್ಯವಿಲ್ಲ. ಸಿಬ್ಬಂದಿ ಪ್ರಯಾಣಿಕರಿದ್ದ ಸ್ಥಳಕ್ಕೆ ಬಂದು ಟಿಕೆಟ್‌ಗಳನ್ನು ನೀಡುತ್ತಾರೆ. ಹೊಸ ವ್ಯವಸ್ಥೆಯ ವಿವರ ಇಲ್ಲಿದೆ.

ಇನ್ಮುಂದೆ ರೈಲು ನಿಲ್ದಾಣದಲ್ಲಿ ಟಿಕೆಟ್​ಗಾಗಿ ನಿಲ್ಲಬೇಕಿಲ್ಲ ಕ್ಯೂ: ನಿಂತಿದ್ದಲ್ಲೇ ಸಿಗಲಿದೆ ಟಿಕೆಟ್!
ರೈಲು ಟಿಕೆಟ್​​ಗಾಗಿ ನಿಲ್ಬೇಕಿಲ್ಲ ಕ್ಯೂ, ನಿಲ್ದಾಣದಲ್ಲಿ ನೀವು ನಿಂತಿದ್ದಲ್ಲಿಗೇ ಬರಲಿದೆ ಟಿಕೆಟ್!
Kiran Surya
| Edited By: |

Updated on: Nov 20, 2024 | 7:36 AM

Share

ಬೆಂಗಳೂರು, ನವೆಂಬರ್ 20: ರೈಲ್ವೆ ಸ್ಟೇಷನ್ ಅಂದರೆ ಮೊದಲಿಗೆ ನೆನಪಾಗುವುದೇ ಟಿಕೆಟ್ ಕೌಂಟರ್ ಮುಂದಿನ ಸರದಿ ಸಾಲು. ಅದರಲ್ಲೂ ಹಬ್ಬಗಳ ಸೀಸನ್ ಬಂದರೆ ಸಾಕು, ಹೆಜ್ಜೆ ಹೆಜ್ಜೆಗೂ ಪ್ರಯಾಣಿಕರಿರುತ್ತಾರೆ. ಕ್ಯೂ ಉದ್ದ ಇರುತ್ತದೆ. ಕೆಲವರು ಟಿಕೆಟ್ ಸಿಗದೆ ವಾಪಸ್ ಆಗುವ ಘಟನೆಯೂ ಕೂಡ ನಡೆಯುತ್ತವೆ. ಆದರೆ, ಇದೀಗ ಪ್ರಯಾಣಿಕರ ಸಂಕಷ್ಟ ತಪ್ಪಿಸಲು ನೈರುತ್ಯ ರೈಲ್ವೆ ಹೊಸ ಯೋಜನೆ ಶುರು ಮಾಡುತ್ತಿದೆ.

ಪ್ರಯಾಣಿಕರಿದ್ದ ಜಾಗಕ್ಕೇ ಬಂದು ಕೊಡಲಿದ್ದಾರೆ ಟಿಕೆಟ್!

ಇನ್ಮುಂದೆ ರೈಲ್ವೆ ಪ್ರಯಾಣಿಕರು ಟಿಕೆಟ್​​ಗಾಗಿ ಕೌಂಟರ್ ಮುಂದೆ ಸರದಿಯಲ್ಲಿ ನಿಂತು ಕಾಯಬೇಕಲ್ಲ. ಪ್ರಯಾಣಿಕರ ದಟ್ಟಣೆಯ ಸಮಯದಲ್ಲಿ, ಪ್ರಯಾಣಿಕರಿದ್ದ ಜಾಗಕ್ಕೆ ಹೋಗಿ ಟಿಕೆಟ್ ಕೊಡಲು ನೈರುತ್ಯ ರೈಲ್ವೆ ಎಂ-ಯುಟಿಎಸ್ ವ್ಯವಸ್ಥೆ ಪರಿಚಯಿಸಿದೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಸರ್.ಎಂ.ವಿಶ್ವೇಶರಯ್ಯ ನಿಲ್ದಾಣ, ಯಶವಂತಪುರ ರೈಲು ನಿಲ್ದಾಣಗಳಲ್ಲಿ ಪ್ರಾಯೋಗಿಕವಾಗಿ ಹೊಸ ವ್ಯವಸ್ಥೆ ಜಾರಿಗೆ ಬಂದಿದೆ.

ಯಾವೆಲ್ಲ ಟಿಕೆಟ್, ಎಲ್ಲೆಲ್ಲಿ ಸಿಗಲಿದೆ?

ಎಂ-ಯುಟಿಎಸ್‌ ಯಂತ್ರಗಳ ಮೂಲಕ ಕಾಯ್ದಿರಿಸದ ಟಿಕೆಟ್‌, ಪ್ಲಾಟ್‌ಫಾರ್ಮ್ ಟಿಕೆಟ್‌ಗಳನ್ನು ಪ್ರಯಾಣಿಕರು ನಿಂತಿರುವ ಜಾಗಕ್ಕೆ ಹೋಗಿ ಸಿಬ್ಬಂದಿ ಕೊಡಲಿದ್ದಾರೆ. ನಿಲ್ದಾಣದಿಂದ 500-ಮೀಟರ್‌ ಅಂತರದಲ್ಲಿ ಎಂ-ಯುಟಿಎಸ್‌ ಟಿಕೆಟ್‌ ವಿತರಿಸಲು ಅವಕಾಶವಿದೆ ಎಂದು ನೈರುತ್ಯ ರೈಲ್ವೇ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರಾದ ತ್ರಿನೇತ್ರ ಕೆಆರ್ ತಿಳಿಸಿದ್ದಾರೆ.

ಏನಿದು ಎಂ ಯುಟಿಎಸ್ ಸೇವೆ?

SWR Launches Mobile Ticket Service, M-UTS system in Bengaluru Railway Stations, No More Queues

ಎಂ-ಯುಟಿಎಸ್ ಎಂಬುದು ಯುಟಿಎಸ್ ಆ್ಯಪ್ ಸೇವೆಗಿಂತ ತುಸು ವಿಭಿನ್ನವಾಗಿದೆ. ಯುಟಿಎಸ್ ಆ್ಯಪ್ ಮೂಲಕ ನಾವೇ ಟಿಕೆಟ್ ಪಡೆಯಬೇಕು. ಆದರೆ, ಎಂ-ಯುಟಿಎಸ್‌ನಲ್ಲಿ ರೈಲ್ವೆ ಸಿಬ್ಬಂದಿ ಟಿಕೆಟ್ ನೀಡುತ್ತಾರೆ. ನೈರುತ್ಯ ರೈಲ್ವೆಯ ಈ ಹೊಸ ಸೇವೆಗೆ ಪ್ರಯಾಣಿಕರು ಖುಷಿಯಾಗಿದ್ದು, ತುಂಬಾ ಸಮಯ ಉಳಿಯುತ್ತೆಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೃಷಿ ಕ್ಷೇತ್ರಕ್ಕೂ ಕಾಲಿಟ್ಟ ಎಐ: ಮಣ್ಣಿಲ್ಲದೆ ನೀರಿನಲ್ಲೇ ಬಾಲ್ಕನಿ, ಟೆರಸ್ ಮೇಲೆ‌ ಬೆಳೆಯಬಹುದು ಸೊಪ್ಪು-ತರಕಾರಿ!

ಪ್ರಯಾಣಿಕರಿಗೆ ನಿಂತಲ್ಲಿಯೇ ಟಿಕೆಟ್ ಸಿಗುವುದರಿಂದ ದಟ್ಟಣೆ ತಗ್ಗಲಿದೆ. ಇಷ್ಟು ದಿನ ಹಬ್ಬಗಳ ಸಂದರ್ಭದಲ್ಲಿ ಕೆಲವರು ಸರದಿಯಲ್ಲಿ ನಿಂತು ಟಿಕೆಟ್ ಸಿಗದೆ ವಾಪಾಸಾಗುತ್ತಿದ್ದರು. ಇನ್ನು ಕೆಲವರು ಟಿಕೆಟ್ ಸಿಗದ ಕಾರಣ ಟಿಕೆಟ್ ರಹಿತ ಪ್ರಯಾಣಿಸಿ ಸಿಕ್ಕಿ ಬೀಳುತ್ತಿದ್ದರು. ಆದರೆ, ಈ ಎಲ್ಲಾ ಸಮಸ್ಯೆಗಳಿಗೆ ಎಂ-ಯುಟಿಎಸ್ ಆ್ಯಪ್ ಮುಕ್ತಿ‌ಕೊಟ್ಟಿದ್ದು, ಆದಷ್ಟು ಬೇಗ ಈ ವ್ಯವಸ್ಥೆ ಎಲ್ಲಾ ರೈಲು ನಿಲ್ದಾಣಗಳಲ್ಲಿ ಬರಲಿ ಎಂದು ಪ್ರಯಾಣಿಕರು ಆಶಯ ವ್ಯಕ್ತಪಡಿಸಿದ್ದಾರೆ. ಸದ್ಯ ಬೆಂಗಳೂರಿನ ರೈಲು ನಿಲ್ದಾಣಗಳಲ್ಲಿ ಪ್ರಾಯೋಗಿಕವಾಗಿ ಜಾರಿಯಾಗಿರುವ ಈ ವ್ಯವಸ್ಥೆ ಯಶಸ್ವಿಯಾದರೆ ಇತರ ರೈಲು ನಿಲ್ದಾಣಗಳಿಗೂ ಬರುವ ದಿನ ದೂರವಿಲ್ಲ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ