AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಈ ರಸ್ತೆಗಳಲ್ಲಿ ಸಿಂಕ್ರೋನೈಸ್ಡ್ ಸಿಗ್ನಲ್​ಗಳು! ನಾನ್ ಪೀಕ್ ಅವರ್ಸ್ ಸಂಚಾರ ಇನ್ನು ಸುಗಮ

ಬೆಂಗಳೂರು ಟ್ರಾಫಿಕ್ ಪೊಲೀಸರು ಜೆಸಿ ರಸ್ತೆಯಲ್ಲಿ ಸಿಂಕ್ರೊನೈಸ್ಡ್ ಸಿಗ್ನಲ್ ವ್ಯವಸ್ಥೆಯನ್ನು ಜಾರಿಗೆ ತಂದಿದ್ದಾರೆ. ಇದು ಪೀಕ್ ಅವರ್-ಅಲ್ಲದ ವೇಳೆಯಲ್ಲಿ ಅನಗತ್ಯ ನಿಲುಗಡೆಗಳನ್ನು ತಪ್ಪಿಸಿ, ಟೌನ್‌ಹಾಲ್‌ನಿಂದ ಪೊಲೀಸ್ ಕಾರ್ನರ್ ಜಂಕ್ಷನ್‌ವರೆಗೆ ಸುಗಮ ಪ್ರಯಾಣವನ್ನು ಖಚಿತಪಡಿಸುತ್ತದೆ. ಈ ಹೊಸ ಪ್ರಯತ್ನಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಬೆಂಗಳೂರಿನ ಈ ರಸ್ತೆಗಳಲ್ಲಿ ಸಿಂಕ್ರೋನೈಸ್ಡ್ ಸಿಗ್ನಲ್​ಗಳು! ನಾನ್ ಪೀಕ್ ಅವರ್ಸ್ ಸಂಚಾರ ಇನ್ನು ಸುಗಮ
ಬೆಂಗಳೂರಿನ ಈ ರಸ್ತೆಗಳಲ್ಲಿ ಸಿಂಕ್ರೋನೈಸ್ಡ್ ಸಿಗ್ನಲ್​ಗಳು!
Ganapathi Sharma
|

Updated on: Oct 07, 2025 | 10:07 AM

Share

ಬೆಂಗಳೂರು, ಅಕ್ಟೋಬರ್ 7: ಸಾಮಾನ್ಯವಾಗಿ ಬೆಂಗಳೂರಿನ ಟ್ರಾಫಿಕ್ (Bengaluru Traffic) ಸಿಗ್ನಲ್​ಗಳಲ್ಲಿ ಸ್ವಯಂಚಾಲಿತ ವ್ಯವಸ್ಥೆ ಚಾಲೂ ಮಾಡಿರುತ್ತಾರೆ. ಇನ್ನು ಕೆಲವೆಡೆ ಪೊಲೀಸರೇ ಮ್ಯಾನುವಲ್ ಆಗಿ ಸಿಗ್ನಲ್ ನಿರ್ವಹಿಸುತ್ತಾರೆ. ಆದರೆ, ಈ ಸ್ವಯಂಚಾಲಿತ ವ್ಯವಸ್ಥೆ ವೇಳೆ ಪೀಕ್ ಅವರ್ ಅಲ್ಲದಿದ್ದಾಗಲೂ, ಇನ್ನೊಂದು ಬದಿಯಿಂದ ಸಂಚಾರ ದಟ್ಟಣೆ ಇಲ್ಲದಿರುವಾಗಲೂ ಸಿಗ್ನಲ್​​ನಲ್ಲಿ ವಿನಾ ಕಾರಣ ಕಾಯುತ್ತಲೇ ಇರಬೇಕಾಗುತ್ತದೆ. ಒಂದು ಸಿಗ್ನಲ್ ಗ್ರೀನ್ ಬಂತೆಂದು ಮುಂದೆ ಹೋಗುತ್ತಿದ್ದಂತೆಯೇ ಅಲ್ಲಿ ರೆಡ್ ಸಿಗ್ನಲ್ ಕಾಣಿಸುತ್ತಿರುತ್ತದೆ. ಹೀಗೆ ವಿನಾ ಕಾರಣ ಸಿಗ್ನಲ್​ನಲ್ಲಿ ಕಾಯಬೇಕಾಗುತ್ತದೆ. ಆದರೆ, ಈ ಪರಿಸ್ಥಿತಿ ಇನ್ನು ಇಲ್ಲವಾಗಲಿದೆ. ಬೆಂಗಳೂರಿನ (Bengaluru) ಟೌನ್​ಹಾಲ್ ಜಂಕ್ಷನ್​ನಿಂದ ಎನ್​ಆರ್​ ಜಂಕ್ಷನ್, ಪಿಎಸ್​​ ಜಂಕ್ಷನ್, ಪೊಲೀಸ್ ಕಾರ್ನರ್​ ವರೆಗೆ ಜೆಸಿ ರಸ್ತೆಯಲ್ಲಿ ಸಿಂಕ್ರೋನೈಸ್ಡ್ ಸಿಗ್ನಲ್ ವ್ಯವಸ್ಥೆ ಜಾರಿಗೆ ತರಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸ್ ಪಶ್ಚಿಮ ವಲಯ ಡಿಸಿಪಿ ಅನೂಪ್ ಎ ಶೆಟ್ಟಿ ಎಕ್ಸ್ ಮೂಲಕ ಮಾಹಿತಿ ನೀಡಿದ್ದಾರೆ.

ನಾವು ಟೌನ್‌ಹಾಲ್ ಜಂಕ್ಷನ್‌ನ ಜೆಸಿ ರಸ್ತೆ ಬದಿಯಿಂದ ಎನ್ಆರ್ ಜಂಕ್ಷನ್ – ಪಿಎಸ್ ಜಂಕ್ಷನ್ – ಪೊಲೀಸ್ ಕಾರ್ನರ್ ಜಂಕ್ಷನ್ ವರೆಗೆ ಸಿಗ್ನಲ್‌ಗಳನ್ನು ಸಿಂಕ್ರೊನೈಸ್ ಮಾಡಿದ್ದೇವೆ. ಸುಗಮ ಪ್ರಯಾಣವನ್ನು ಆನಂದಿಸಿ ಮತ್ತು ಜನದಟ್ಟಣೆ ಇಲ್ಲದ ಸಮಯದಲ್ಲಿ ಎಲ್ಲಾ ಸಂದರ್ಭಗಳಲ್ಲಿ ಗ್ರೀನ್​ ಸಿಗ್ನಲ್ ಇರಲಿದೆ ಎಂದು ಡಿಸಿಪಿ ಅನೂಪ್ ಎ ಶೆಟ್ಟಿ ಎಕ್ಸ್ ಸಂದೇಶದಲ್ಲಿ ತಿಳಿಸಿದ್ದಾರೆ.

ಅನೂಪ್ ಎ ಶೆಟ್ಟಿ ಎಕ್ಸ್ ಸಂದೇಶ

ಟ್ರಾಫಿಕ್ ಸಿಗ್ನಲ್‌ ಸಿಂಕ್ರೊನೈಸೇಷನ್ ಎಂದರೇನು?

ಟ್ರಾಫಿಕ್ ಸಿಗ್ನಲ್‌ ಸಿಂಕ್ರೊನೈಸೇಷನ್ ಎಂದರೆ ಸುಧಾರಿತ ಸಂಚಾರ ನಿರ್ವಹಣೆ ತಂತ್ರಜ್ಞಾನಕ್ಕೆ ಸಂಬಂಧಿಸಿದ್ದಾಗಿದೆ. ಈ ವ್ಯವಸ್ಥೆಯಲ್ಲಿ ವಾಹನಗಳ ಸಂಚಾರದ ಟಟ್ಟಣೆಗೆ ಅನುಗುಣವಾಗಿ ಗ್ರೀನ್ ಸಿಗ್ನಲ್​ಗಳು ಕಾಣಿಸಿಕೊಳ್ಳುವಂತೆ ಮಾಡಲಾಗುತ್ತದೆ. ಒಂದು ಕಡೆ ಗ್ರೀನ್ ಸಿಗ್ನಲ್ ಬಂದರೆ ಅಲ್ಲಿಂದ ವಾಹನಗಳು ಮುಂದೆ ಚಲಿಸಿದಂತೆ ಮುಂದಿನ ಸಿಗ್ನಲ್​​ನಲ್ಲಿಯೂ ಗ್ರೀನ್ ಸಿಗ್ನಲ್ ಕಾಣಿಸಿಕೊಳ್ಳಲಿದೆ. ಇದರೊಂದಿಗೆ, ನಾನ್ ಪೀಕ್ ಅವರ್​​ನಲ್ಲಿ ಸಿಗಮ ಸಂಚಾರ ಸಾಧ್ಯವಾಗಲಿದೆ. ಅದೇ ರೀತಿ, ವಾಹ ಸಂಚಾರ ವಿರಳವಾಗಿದ್ದರೂ ನಿರ್ದಿಷ್ಟ ಸಮಯ ಸಿಗ್ನಲ್​ನಲ್ಲಿ ಕಾಯುವುದು ತಪ್ಪಲಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮತ್ತೆ ಬಿಎಂಟಿಸಿ ಬಸ್​ಗಾಗಿ ಪ್ರತ್ಯೇಕ ಲೇನ್: ಹೊರ ವರ್ತುಲ ರೆಸ್ತೆಯಲ್ಲಿ ಹಳೇ ನಿಯಮ ಜಾರಿಗೆ ಚಿಂತನೆ

ಬೆಂಗಳೂರು ಸಂಚಾರ ಪೊಲೀಸ್ ಪಶ್ಚಿಮ ವಲಯದ ಈ ಪ್ರಯತ್ನಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಅದೇ ರೀತಿ, ವಾಹನಗಳು ಲೇನ್ ಮೇಂಟೇನ್​ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹವೂ ವ್ಯಕ್ತವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ