AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಏರ್​ಪೋರ್ಟ್​ನಿಂದ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ: ಕಾರಣ ಇಲ್ಲಿದೆ

ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಥರ್ಡ್ ಪಾರ್ಟಿ ಸಿಸ್ಟಂ’ ದೋಷದಿಂದ ಚೆಕ್-ಇನ್ ವ್ಯತ್ಯಯ ಉಂಟಾಗಿ ಇಂಡಿಗೋ, ಏರ್ ಇಂಡಿಯಾ ಸೇರಿದಂತೆ ಹಲವು ಏರ್‌ಲೈನ್ಸ್‌ಗಳ 58ಕ್ಕೂ ಹೆಚ್ಚು ವಿಮಾನಗಳು ವಿಳಂಬವಾಗಿವೆ. ವ್ಯವಸ್ಥೆ ಪುನಃಸ್ಥಾಪನೆ ನಡೆಯುತ್ತಿದ್ದು, ಪ್ರಯಾಣಿಕರು ನಿಲ್ದಾಣಕ್ಕೆ ಹೊರಡುವ ಮುನ್ನ ವಿಮಾನ ಸ್ಥಿತಿ ಪರಿಶೀಲಿಸಿಕೊಳ್ಳುವಂತೆ ಏರ್​ಲೈನ್ಸ್​​ಗಳು ಮನವಿ ಮಾಡಿವೆ.

ಬೆಂಗಳೂರು ಏರ್​ಪೋರ್ಟ್​ನಿಂದ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ: ಕಾರಣ ಇಲ್ಲಿದೆ
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಸಂಗ್ರಹ ಚಿತ್ರ)
ಗಣಪತಿ ಶರ್ಮಾ
|

Updated on: Dec 03, 2025 | 7:33 AM

Share

ಬೆಂಗಳೂರು, ಡಿಸೆಂಬರ್ 3: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ (KIA) ಮಂಗಳವಾರ ಸಂಚಾರ ಮಾಡಬೇಕಿದ್ದ ಮತ್ತು ಬುಧವಾರ ಹೊರಡಲಿರುವ ಸುಮಾರು 58 ವಿಮಾನಗಳು ವಿಳಂಬವಾಗಿ ಸಂಚರಿಸುತ್ತಿವೆ ಎಂದು ವಿಮಾನ ಟ್ರ್ಯಾಕಿಂಗ್ ವೆಬ್‌ಸೈಟ್ ಸ್ಕೈಸ್ಕ್ಯಾನರ್ ತಿಳಿಸಿದೆ. ಈ ಪೈಕಿ, ಮಂಗಳವಾರ ಸುಮಾರು 29 ವಿಮಾನಗಳು ವಿಳಂಬವಾಗಿ ಹಾರಾಟ ನಡೆಸಿವೆ. ಅದರಲ್ಲೂ ಇಂಡಿಗೋ ಏರ್​ಲೈನ್ಸ್​ನ ಹೆಚ್ಚಿನ ವಿಮಾನಗಳು ವಿಳಂಬವಾಗಿವೆ. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (BIAL) ಮೂಲಗಳ ಪ್ರಕಾರ, ವಿಮಾನಯಾನ ಸಂಸ್ಥೆಗಳ ಕಾರ್ಯಾಚರಣೆಯ ಕಾರಣಗಳಿಂದ ಈ ವಿಳಂಬವಾಗಿದೆ. ವಿಮಾನ ನಿಲ್ದಾಣಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ.

ವಿಮಾನ ಸಂಚಾರ ವಿಳಂಬಕ್ಕೆ ಕಾರಣವೇನು?

ವಿಮಾನಯಾನ ಸಂಸ್ಥೆಗಳ ಕಾರ್ಯಾಚರಣೆಯನ್ನು ನಿರ್ವಹಿಸುವ ‘ಥರ್ಡ್ ಪಾರ್ಟಿ ಸಿಸ್ಟಂ’ನಲ್ಲಿ ಉಂಟಾದ ಅಡಚಣೆಯಿಂದಾಗಿ ಚೆಕ್-ಇನ್ ಮೇಲೆ ಪರಿಣಾಮವಾಗುತ್ತಿದೆ. ಇದರ ಪರಿಣಾಮವಾಗಿ ಏರ್ ಇಂಡಿಯಾ ಸೇರಿದಂತೆ ಹಲವಾರು ಏರ್​ಲೈನ್ಸ್​​ಗಳ ಕಾರ್ಯಾಚರಣೆಯಲ್ಲಿ ವಿಳಂಬವಾಗುತ್ತಿದೆ.

ಪ್ರಯಾಣಿಕರಿಗೆ ಸುಗಮ ಚೆಕ್-ಇನ್ ಮಾಡಿಕೊಡುವುದನ್ನು ಖಚಿತಪಡಿಸಿಕೊಳ್ಳಲು ನಮ್ಮ ತಂಡಗಳು ಶ್ರದ್ಧೆಯಿಂದ ಕೆಲಸ ಮಾಡುತ್ತಿವೆ. ವ್ಯವಸ್ಥೆಯನ್ನು ಹಂತಹಂತವಾಗಿ ಪುನಃಸ್ಥಾಪಿಸಲಾಗುತ್ತಿದ್ದರೂ, ಪರಿಸ್ಥಿತಿ ಸಂಪೂರ್ಣವಾಗಿ ಮೊದಲಿನ ಸ್ಥಿತಿಗೆ ಬರುವ ವರೆಗೆ ನಮ್ಮ ಕೆಲವು ವಿಮಾನಗಳು ವಿಳಂಬವಾಗಿ ಸಂಚರಿಸಬಹುದು ಎಂದು ಏರ್ ಇಂಡಿಯಾ ಎಕ್ಸ್‌ ಹೇಳಿಕೆಯಲ್ಲಿ ತಿಳಿಸಿದೆ. ಏರ್ ಇಂಡಿಯಾದ 6 ವಿಮಾನಗಳು ಈಗಾಗಲೇ ವಿಳಂಬವಾಗಿ ಸಂಚರಿಸಿವೆ.

ಏರ್ ಇಂಡಿಯಾ ಎಕ್ಸ್ ಸಂದೇಶ

ವಿಮಾನ ನಿಲ್ದಾಣಕ್ಕೆ ಹೊರಡುವ ಮುನ್ನ ತಾವು ಪ್ರಯಾಣಿಸಲಿರುವ ವಿಮಾನದ ಸ್ಥಿತಿಗತಿ ಪರಿಶೀಲಿಸಿಕೊಂಡು ಹೊರಡುವಂತೆ ಪ್ರಯಾಣಿಕರಿಗೆ ಏರ್ ಇಂಡಿಯಾ ಮನವಿ ಮಾಡಿದೆ.

ಇದನ್ನೂ ಓದಿ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಹೊಸ ರೂಲ್ಸ್​: ಎಲ್ಲೆಂದರಲ್ಲಿ ವಾಹನ ನಿಲ್ಲಿಸಿದ್ರೆ ದಂಡ ಫಿಕ್ಸ್​​

ಸ್ಟಾರ್ ಏರ್, ಸ್ಪೈಸ್‌ಜೆಟ್,ಅಕಾಸಾ ಏರ್, ಸಿಂಗಾಪುರ್ ಏರ್‌ಲೈನ್ಸ್, ಬಾಟಿಕ್ ಏರ್ ಮಲೇಷ್ಯಾ, ಏರ್ ಫ್ರಾನ್ಸ್, ಲುಫ್ಥಾನ್ಸ, ವರ್ಜಿನ್ ಅಟ್ಲಾಂಟಿಕ್ ಮತ್ತು ಕುವೈತ್ ಏರ್‌ವೇ ಗಳ ಕೆಲ ವಿಮಾನಗಳು ಕೂಡ ವಿಳಂಬವಾಗಿ ಸಂಚರಿಸಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ
ಇಂದು ಈ ರಾಶಿಯವರಿಗೆ ದೈವಾನುಗ್ರಹದಿಂದ ಮಾಡಿದ ಕೆಲಸಗಳಲ್ಲಿ ಯಶಸ್ಸು
ಇಂದು ಈ ರಾಶಿಯವರಿಗೆ ದೈವಾನುಗ್ರಹದಿಂದ ಮಾಡಿದ ಕೆಲಸಗಳಲ್ಲಿ ಯಶಸ್ಸು
ದೇವೇಗೌಡ, ಕುಮಾರಸ್ವಾಮಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ
ದೇವೇಗೌಡ, ಕುಮಾರಸ್ವಾಮಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ
ಚೆನ್ನಮ್ಮನ ಆಸಿಡ್‌ ದಾಳಿ ಪ್ರಕರಣದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ವಕೀಲ
ಚೆನ್ನಮ್ಮನ ಆಸಿಡ್‌ ದಾಳಿ ಪ್ರಕರಣದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ವಕೀಲ
‘ಅವರು ನಮಗೆ ದೇವರು’: ಚೆನ್ನಮ್ಮ ಬಗ್ಗೆ ಸಹೋದರ ಭಾವುಕ ಮಾತು
‘ಅವರು ನಮಗೆ ದೇವರು’: ಚೆನ್ನಮ್ಮ ಬಗ್ಗೆ ಸಹೋದರ ಭಾವುಕ ಮಾತು