AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೀಲ್ ರಾಮಯ್ಯ ಹೇಳೋದು ಆಚಾರ ತಿನ್ನೋದು ಬದನೆಕಾಯಿ: ಸಿದ್ದರಾಮಯ್ಯ ವಿರುದ್ಧ ಪರಿಷತ್ ಸದಸ್ಯ ಟಿ.ಎ.ಶರವಣ ಆರೋಪ

ಬಿಜೆಪಿ ಬಿ ಟೀಂ ಪಿತಾಮಹ, ಡೀಲ್ ರಾಮಯ್ಯ ಸಿದ್ದರಾಮಯ್ಯ’ ನಮ್ಮ ಶಾಸಕರನ್ನ ಮನೆಗೆ ಕರೆಸಿಕೊಂಡು ಡೀಲ್ ಮಾಡ್ಕೊಂಡಿದ್ದೀರಾ ಎಂದು ಸಿದ್ದರಾಮಯ್ಯ ವಿರುದ್ಧ ಪರಿಷತ್ ಸದಸ್ಯ ಟಿ.ಎ.ಶರವಣ ಆರೋಪ ಮಾಡಿದ್ದಾರೆ.

ಡೀಲ್ ರಾಮಯ್ಯ ಹೇಳೋದು ಆಚಾರ ತಿನ್ನೋದು ಬದನೆಕಾಯಿ: ಸಿದ್ದರಾಮಯ್ಯ ವಿರುದ್ಧ ಪರಿಷತ್ ಸದಸ್ಯ ಟಿ.ಎ.ಶರವಣ ಆರೋಪ
ಪರಿಷತ್ ಸದಸ್ಯ ಟಿ.ಎ.ಶರವಣ
TV9 Web
| Edited By: |

Updated on: Jun 12, 2022 | 2:23 PM

Share

ಬೆಂಗಳೂರು: ಬಿಜೆಪಿಯ ಬಿ ಟೀಂ ಪಿತಾಮಹ ಸಿದ್ದರಾಮಯ್ಯ. ಡೀಲ್ ರಾಮಯ್ಯ ಸಿದ್ದರಾಮಯ್ಯ. ನಮ್ಮ ಶಾಸಕರನ್ನ ಮನೆಗೆ ಕರೆಸಿಕೊಂಡು ಡೀಲ್ ಮಾಡ್ಕೊಂಡಿದ್ದೀರಾ ಎಂದು ಎಂಎಲ್ಸಿ ಶರವಣ ಸಿದ್ದರಾಮಯ್ಯ ವಿರುದ್ದ ಆರೋಪ ಮಾಡಿದ್ದಾರೆ. ಡೀಲ್ ರಾಮಯ್ಯ ಹೇಳೋದು ಆಚಾರ ತಿನ್ನೋದು ಬದನೆಕಾಯಿ. ನಿಮಗೆ ಎಷ್ಟು ಸೂಟ್ ಕೇಸ್​ನಲ್ಲಿ ಬಂದಿದೆ ಅನ್ನೋದನ್ನು ಡೀಲ್ ರಾಮಯ್ಯ ಹೇಳಬೇಕು. ರಾಜ್ಯ ಸಭಾ ಚುನಾವಣೆಯಲ್ಲಿ ಬಣ್ಣ ಬಯಲಾಗಿದೆ. ಸಿದ್ದರಾಮಯ್ಯ ಯಾರ ಮಾತೂ ಕೇಳಲ್ಲ. ಸಿದ್ದರಾಮಯ್ಯ ತಾವೇ ಹೈಕಮಾಂಡ್ ತರ ಮಾಡುತ್ತಿದ್ದಾರೆ ಅಂತ ಕಾಂಗ್ರೆಸ್​ನವರೇ ಹೇಳುತ್ತಿದ್ದಾರೆ. ದೇವೇಗೌಡರು ನನಗೆ ಫಾರೂಕ್​ಗೆ ಸಿದ್ದರಾಮಯ್ಯ ಭೇಟಿ ಮಾಡುವುದಕ್ಕೆ ಹೇಳಿದ್ದರು. ಸಿದ್ದರಾಮಯ್ಯ ಭೇಟಿ ಮಾಡಿದಾಗ ನಾವು ರಿಕ್ ವೆಸ್ಟ್ ಮಾಡಿಕೊಂಡಿದ್ದೇವು. ಅಲ್ಲಿ ನಡೆದದ್ದನ್ನು ಹೇಳದೇ ಶರವಣ ಸ್ವೀಟ್ ಕೊಡೋದಕ್ಕೆ ಬಂದ ಅಂತ ತಿರುಚಿ ಹೇಳೋ ಸಿದ್ದರಾಮಯ್ಯರನ್ನು ಏನಂತ ಕರಿಬೇಕು ಎಂದರು.

ಇದನ್ನೂ ಓದಿ: ರಾಜಸ್ಥಾನದ ಸಚಿವರ ಮಗನ ವಿರುದ್ಧ ಅತ್ಯಾಚಾರ ಆರೋಪ ಹೊರಿಸಿದ್ದ ಮಹಿಳೆ ಮೇಲೆ ಮಸಿ ದಾಳಿ

ಕುಮಾರಣ್ಣ ದೇವೇಗೌಡ ಕಣ್ಣಲ್ಲಿ ಕಣ್ಣೀರು ಹಾಕ್ಸಿದ್ದೀರಾ ನೀವು ಅದಕ್ಕೆ ಬೆಲೆ ತೆರಲೇಬೇಕು. ನಮ್ಮ ಇಬ್ಬರು ಸೂಟ್ ಕೇಸ್ ಶ್ರೀನಿವಾಸರಿಗೆ ತಿರುಪತಿ ಶ್ರೀನಿವಾಸನ ಶಾಪ ತಟ್ಟುತ್ತದೆ. ನಮ್ಮ ಪಕ್ಷದಲ್ಲಿ ಗೆದ್ದು ತಾಯಿನ ಮಾರಾಟ ಮಾಡಿದ್ದೀರಾ. ಪುಡಿ ರೌಡಿಗಳಂತೆ ಮಾತನಾಡ್ತಿದ್ದೀರಾ. ನಮ್ಮ ಕಾರ್ಯಕರ್ತರು ಸನ್ಯಾಸಿಗಳಲ್ಲ ಬುದ್ದಿ ಕಲಿಸುತ್ತಾರೆ ಎಂದು ಹೇಳಿದರು.

ಸಿದ್ದರಾಮಯ್ಯ ವಿರುದ್ಧ ಸಿ.ಎಂ.ಇಬ್ರಾಹಿಂ ವಾಗ್ದಾಳಿ

ಸಿದ್ದರಾಮಯ್ಯ ವಿರುದ್ಧ ಸಿ.ಎಂ.ಇಬ್ರಾಹಿಂ ವಾಗ್ದಾಳಿ ನಡೆಸಿದ್ದು, ಸಿದ್ದರಾಮಯ್ಯ 12 ಶಾಸಕರನ್ನು ಮುಂಬೈಗೆ ಕಳುಹಿಸಿ ಮಂಚದ ಮೇಲೆ ಮಲಗಿಸಿ ವಿಡಿಯೋ ಮಾಡಿಸಿ, ಬಿ.ಎಸ್​.ಯಡಿಯೂರಪ್ಪನನ್ನು ಸಿಎಂ ಮಾಡಿದ್ರಿ ಎಂದು ಜೆಡಿಎಸ್​​ ಪ್ರತಿಭಟನೆಯಲ್ಲಿ ಸಿ.ಎಂ.ಇಬ್ರಾಹಿಂ ಆಕ್ರೋಶ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ಈಗಲೂ ಬಿಎಸ್​​ವೈ ಜೊತೆ ಡೀಲ್ ಮಾಡ್ಕೊಂಡ್ರಲ್ಲ. ಏರ್​ಪೋರ್ಟ್​​ನಲ್ಲಿ ಸಿದ್ದರಾಮಯ್ಯ ಡೀಲ್ ಮಾಡಿದ್ರಲ್ಲ. ಸಿ.ಟಿ.ರವಿ ಅದಕ್ಕೆ ಸಿದ್ದರಾಮಯ್ಯಗೆ ವಿಧಾನಸೌಧದ ಕಾಂಗ್ರೆಸ್ ಕಚೇರಿಗೆ ಹೋಗಿ ಅಭಿನಂದನೆ ಸಲ್ಲಿಸಿದ್ದರು. ತಾಳಿ ಕಟ್ಟಿಸಿಕೊಳ್ಳುವುದು ಒಬ್ಬರ ಜತೆ ಪ್ರಸ್ತ ಮತ್ತೊಬ್ಬರ ಜತೆ. ನಾಚಿಕೆಗೆಟ್ಟವರು ನೀವು, ಮಾನಗೆಟ್ಟವರು ನೀವು ಎಂದು ಇಬ್ರಾಹಿಂ ಕಿಡಿಕಾರಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ