AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಕೆದಾಟು ಪಾದಯಾತ್ರೆಯನ್ನು ಬೆಂಬಲಿಸಿ ಜನವರಿ 19ರಂದು ತಮಿಳುನಾಡು ಗಡಿ ಬಂದ್: ವಾಟಾಳ್ ನಾಗರಾಜ್

ಕನ್ನಡ ಪರ ಸಂಘಟನೆಗಳು ಈ ಹಿಂದೆಯೇ ಈ ಯೋಜನೆ ಶಂಕುಸ್ಥಾಪನೆ ಮಾಡಿದ್ದೆವು. ಸರ್ಕಾರ ಹಾಗೂ ರಾಜಕೀಯ ಪಕ್ಷಗಳು ಈ ವಿಷಯವನ್ನು ರಾಜಕೀಯ ಮಾಡಬಾರದು‌ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

ಮೇಕೆದಾಟು ಪಾದಯಾತ್ರೆಯನ್ನು ಬೆಂಬಲಿಸಿ ಜನವರಿ 19ರಂದು ತಮಿಳುನಾಡು ಗಡಿ ಬಂದ್: ವಾಟಾಳ್ ನಾಗರಾಜ್
ವಾಟಾಳ್ ನಾಗರಾಜ್
TV9 Web
| Updated By: preethi shettigar|

Updated on:Jan 09, 2022 | 2:09 PM

Share

ಬೆಂಗಳೂರು: ಮೇಕೆದಾಟು ಪಾದಯಾತ್ರೆಯನ್ನು ಬೆಂಬಲಿಸಿ ಜನವರಿ 19ರಂದು ತಮಿಳುನಾಡು ಗಡಿ ಬಂದ್ ಮಾಡುತ್ತೇವೆ. ಬಳಿಕ ಜ.22ರಂದು ಟೌನ್‌ಹಾಲ್‌ನಿಂದ ಬೃಹತ್ ಮೆರವಣಿಗೆ ಮಾಡುತ್ತೇವೆ. ಆನೇಕಲ್ ಗಡಿಯಲ್ಲಿ ಕನ್ನಡಪರ ಸಂಘಟನೆಗಳ ಹೋರಾಟ ನಡೆಸಲಿವೆ. ಈ ವೇಳೆ ಕಳಸಾಬಂಡೂರಿ ಯೋಜನೆ ಜಾರಿಗೂ ಆಗ್ರಹಿಸಲಾಗುವುದು ಎಂದು ಬೆಂಗಳೂರಿನ ಮೈಸೂರು ಬ್ಯಾಕ್‌ ಸರ್ಕಲ್‌ನಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿಕೆ ನೀಡಿದ್ದಾರೆ.

ಕಾವೇರಿ ವಿಚಾರದಲ್ಲಿ ತಮಿಳರು ನಮ್ಮ ಶತೃಗಳು.‌ ಸಿಎಂ ಸ್ಟಾಲಿನ್ ಕರ್ನಾಟಕದ ಯೋಜನೆ ವಿರೋಧಿಸಬಾರದು. ಕಾಂಗ್ರೆಸ್​ನವರು ಕೇಂದ್ರ ಹಾಗೂ ರಾಜ್ಯದಲ್ಲಿ ಡಿಎಂಕೆ ನೀಡಿರುವ ಬೆಂಬಲವನ್ನು ವಾಪಸ್ ಪಡೆಯಬೇಕು. ಕನ್ನಡ ಪರ ಸಂಘಟನೆಗಳು ಈ ಹಿಂದೆಯೇ ಈ ಯೋಜನೆ ಶಂಕುಸ್ಥಾಪನೆ ಮಾಡಿದ್ದೆವು. ಸರ್ಕಾರ ಹಾಗೂ ರಾಜಕೀಯ ಪಕ್ಷಗಳು ಈ ವಿಷಯವನ್ನು ರಾಜಕೀಯ ಮಾಡಬಾರದು‌ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

ಕಾಂಗ್ರೆಸ್​ನವರು ಅಪರಾಧಿ ಸ್ಥಾನದಲ್ಲಿ ಇದ್ದಾರೆ: ವಾಟಾಳ್ ನಾಗರಾಜ್ ಕಾಂಗ್ರೆಸ್​ನವರು ಅಪರಾಧಿ ಸ್ಥಾನದಲ್ಲಿ ಇದ್ದಾರೆ. ಅವರಿಗೆ ಹೋರಾಡುವ ನೈತಿಕತೆ ಇಲ್ಲ. ಇನ್ನೂ ಕನ್ನಡದ ನಾಡು ನುಡಿ ಹೋರಾಟ ಬೆಂಬಲಿಸದ ಕನ್ನಡ ಚಿತ್ರರಂಗ, ಇವತ್ತು ಮೇಕೆದಾಟು ಬೆಂಬಲಿಸುತ್ತಿರುವುದು ಸರಿಯಲ್ಲ ಎಂದು ಚಿತ್ರರಂಗದ ವಿರುದ್ಧ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕಿಡಿಕಾರಿದ್ದಾರೆ.

ಪಾದಯಾತ್ರೆಗೆ ಬರುವವರಿಗೆ ತೊಂದರೆ ನೀಡುತ್ತಿದ್ದಾರೆ: ಡಿಕೆ ಶಿವಕುಮಾರ್​ ಮೇಕೆದಾಟು ಪಾದಯಾತ್ರೆಗೆ ಬರುವವರಿಗೆ ತೊಂದರೆ ನೀಡುತ್ತಿದ್ದಾರೆ. ಆದರೆ ನೀವು ಯಾರನ್ನೂ ತಡೆಯುವುದಕ್ಕೆ ಆಗಲ್ಲ. ಉದಯಿಸುವ ಸೂರ್ಯ, ಹರಿಯುವ ನೀರನ್ನು ತಡೆಯಲಾಗಲ್ಲ. ಅದೇ ರೀತಿ ನಮ್ಮ ಪಾದಯಾತ್ರೆಯನ್ನು ತಡೆಯುವುದಕ್ಕೆ ಆಗಲ್ಲ. ಪಾದಯಾತ್ರೆಗೆ ನಮ್ಮ ತಾಲೂಕಿನಲ್ಲಿ ಎಲ್ಲರೂ ಬೆಂಬಲಿಸುತ್ತಿದ್ದಾರೆ. ಆದರೆ ಕೆಲವರು ಪಾದಯಾತ್ರೆಗೆ ಹೋಗದಂತೆ ಕರೆ ಮಾಡಿ ಹೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಂಗಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

ಎಲ್ಲರಿಗೂ ಪಾದಯಾತ್ರೆಗೆ ಬನ್ನಿ ಎಂದು ಆಹ್ವಾನ ನೀಡುತ್ತೇನೆ. ಪಾದಯಾತ್ರೆಗೆ ಬರಲು ನಾನು ಯಾರಿಗೂ ಬಲವಂತ ಮಾಡಲ್ಲ. ಪಾದಯಾತ್ರೆ ನಮ್ಮ ಕಾರ್ಯಕ್ರಮವಲ್ಲ, ನಿಮ್ಮ ಕಾರ್ಯಕ್ರಮ. ಯಾರು ಬೇಕಾದರೂ ಪಾದಯಾತ್ರೆಯಲ್ಲಿ ಭಾಗವಹಿಸಬಹುದು. ಎಸ್‌ಪಿ, ಡಿಸಿ ಏನು ಮಾಡುತ್ತಾರೆ. ಹೆಚ್ಚು ಎಂದರೆ ಇವರು ಸಿದ್ದರಾಮಯ್ಯ ಮತ್ತು ನನ್ನ ಮೇಲೆ ಕೇಸ್ ಹಾಕಬಹುದು. ನಾನು ಫಿಲ್ಮ್ ಚೇಂಬರ್‌ಗೆ ಕೂಡ ಹೋಗಿ ಎಲ್ಲರನ್ನೂ ಆಹ್ವಾನಿಸಿದ್ದೇನೆ. ಯಾರು ಬರುತ್ತಾರೆಂದು ನನಗೆ ಗೊತ್ತಿಲ್ಲ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: Mekedatu Project: ಮೇಕೆದಾಟು ಪಾದಯಾತ್ರೆ; ಕಾಂಗ್ರೆಸ್​ ಹೋರಾಟ ಹೇಗಿರಲಿದೆ? ಸಂಪೂರ್ಣ ವಿವರ ಇಲ್ಲಿದೆ

Mekedatu Padayatra: ಪಾದಯಾತ್ರೆಗೆ ಬರುವ ಯಾರನ್ನು ನೀವು ತಡೆಯುವುದಕ್ಕೆ ಆಗಲ್ಲ: ಡಿಕೆ ಶಿವಕುಮಾರ್

Published On - 1:34 pm, Sun, 9 January 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!