AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಕೆದಾಟು ಪಾದಯಾತ್ರೆಯನ್ನು ಬೆಂಬಲಿಸಿ ಜನವರಿ 19ರಂದು ತಮಿಳುನಾಡು ಗಡಿ ಬಂದ್: ವಾಟಾಳ್ ನಾಗರಾಜ್

ಕನ್ನಡ ಪರ ಸಂಘಟನೆಗಳು ಈ ಹಿಂದೆಯೇ ಈ ಯೋಜನೆ ಶಂಕುಸ್ಥಾಪನೆ ಮಾಡಿದ್ದೆವು. ಸರ್ಕಾರ ಹಾಗೂ ರಾಜಕೀಯ ಪಕ್ಷಗಳು ಈ ವಿಷಯವನ್ನು ರಾಜಕೀಯ ಮಾಡಬಾರದು‌ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

ಮೇಕೆದಾಟು ಪಾದಯಾತ್ರೆಯನ್ನು ಬೆಂಬಲಿಸಿ ಜನವರಿ 19ರಂದು ತಮಿಳುನಾಡು ಗಡಿ ಬಂದ್: ವಾಟಾಳ್ ನಾಗರಾಜ್
ವಾಟಾಳ್ ನಾಗರಾಜ್
TV9 Web
| Edited By: |

Updated on:Jan 09, 2022 | 2:09 PM

Share

ಬೆಂಗಳೂರು: ಮೇಕೆದಾಟು ಪಾದಯಾತ್ರೆಯನ್ನು ಬೆಂಬಲಿಸಿ ಜನವರಿ 19ರಂದು ತಮಿಳುನಾಡು ಗಡಿ ಬಂದ್ ಮಾಡುತ್ತೇವೆ. ಬಳಿಕ ಜ.22ರಂದು ಟೌನ್‌ಹಾಲ್‌ನಿಂದ ಬೃಹತ್ ಮೆರವಣಿಗೆ ಮಾಡುತ್ತೇವೆ. ಆನೇಕಲ್ ಗಡಿಯಲ್ಲಿ ಕನ್ನಡಪರ ಸಂಘಟನೆಗಳ ಹೋರಾಟ ನಡೆಸಲಿವೆ. ಈ ವೇಳೆ ಕಳಸಾಬಂಡೂರಿ ಯೋಜನೆ ಜಾರಿಗೂ ಆಗ್ರಹಿಸಲಾಗುವುದು ಎಂದು ಬೆಂಗಳೂರಿನ ಮೈಸೂರು ಬ್ಯಾಕ್‌ ಸರ್ಕಲ್‌ನಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿಕೆ ನೀಡಿದ್ದಾರೆ.

ಕಾವೇರಿ ವಿಚಾರದಲ್ಲಿ ತಮಿಳರು ನಮ್ಮ ಶತೃಗಳು.‌ ಸಿಎಂ ಸ್ಟಾಲಿನ್ ಕರ್ನಾಟಕದ ಯೋಜನೆ ವಿರೋಧಿಸಬಾರದು. ಕಾಂಗ್ರೆಸ್​ನವರು ಕೇಂದ್ರ ಹಾಗೂ ರಾಜ್ಯದಲ್ಲಿ ಡಿಎಂಕೆ ನೀಡಿರುವ ಬೆಂಬಲವನ್ನು ವಾಪಸ್ ಪಡೆಯಬೇಕು. ಕನ್ನಡ ಪರ ಸಂಘಟನೆಗಳು ಈ ಹಿಂದೆಯೇ ಈ ಯೋಜನೆ ಶಂಕುಸ್ಥಾಪನೆ ಮಾಡಿದ್ದೆವು. ಸರ್ಕಾರ ಹಾಗೂ ರಾಜಕೀಯ ಪಕ್ಷಗಳು ಈ ವಿಷಯವನ್ನು ರಾಜಕೀಯ ಮಾಡಬಾರದು‌ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

ಕಾಂಗ್ರೆಸ್​ನವರು ಅಪರಾಧಿ ಸ್ಥಾನದಲ್ಲಿ ಇದ್ದಾರೆ: ವಾಟಾಳ್ ನಾಗರಾಜ್ ಕಾಂಗ್ರೆಸ್​ನವರು ಅಪರಾಧಿ ಸ್ಥಾನದಲ್ಲಿ ಇದ್ದಾರೆ. ಅವರಿಗೆ ಹೋರಾಡುವ ನೈತಿಕತೆ ಇಲ್ಲ. ಇನ್ನೂ ಕನ್ನಡದ ನಾಡು ನುಡಿ ಹೋರಾಟ ಬೆಂಬಲಿಸದ ಕನ್ನಡ ಚಿತ್ರರಂಗ, ಇವತ್ತು ಮೇಕೆದಾಟು ಬೆಂಬಲಿಸುತ್ತಿರುವುದು ಸರಿಯಲ್ಲ ಎಂದು ಚಿತ್ರರಂಗದ ವಿರುದ್ಧ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕಿಡಿಕಾರಿದ್ದಾರೆ.

ಪಾದಯಾತ್ರೆಗೆ ಬರುವವರಿಗೆ ತೊಂದರೆ ನೀಡುತ್ತಿದ್ದಾರೆ: ಡಿಕೆ ಶಿವಕುಮಾರ್​ ಮೇಕೆದಾಟು ಪಾದಯಾತ್ರೆಗೆ ಬರುವವರಿಗೆ ತೊಂದರೆ ನೀಡುತ್ತಿದ್ದಾರೆ. ಆದರೆ ನೀವು ಯಾರನ್ನೂ ತಡೆಯುವುದಕ್ಕೆ ಆಗಲ್ಲ. ಉದಯಿಸುವ ಸೂರ್ಯ, ಹರಿಯುವ ನೀರನ್ನು ತಡೆಯಲಾಗಲ್ಲ. ಅದೇ ರೀತಿ ನಮ್ಮ ಪಾದಯಾತ್ರೆಯನ್ನು ತಡೆಯುವುದಕ್ಕೆ ಆಗಲ್ಲ. ಪಾದಯಾತ್ರೆಗೆ ನಮ್ಮ ತಾಲೂಕಿನಲ್ಲಿ ಎಲ್ಲರೂ ಬೆಂಬಲಿಸುತ್ತಿದ್ದಾರೆ. ಆದರೆ ಕೆಲವರು ಪಾದಯಾತ್ರೆಗೆ ಹೋಗದಂತೆ ಕರೆ ಮಾಡಿ ಹೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಂಗಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

ಎಲ್ಲರಿಗೂ ಪಾದಯಾತ್ರೆಗೆ ಬನ್ನಿ ಎಂದು ಆಹ್ವಾನ ನೀಡುತ್ತೇನೆ. ಪಾದಯಾತ್ರೆಗೆ ಬರಲು ನಾನು ಯಾರಿಗೂ ಬಲವಂತ ಮಾಡಲ್ಲ. ಪಾದಯಾತ್ರೆ ನಮ್ಮ ಕಾರ್ಯಕ್ರಮವಲ್ಲ, ನಿಮ್ಮ ಕಾರ್ಯಕ್ರಮ. ಯಾರು ಬೇಕಾದರೂ ಪಾದಯಾತ್ರೆಯಲ್ಲಿ ಭಾಗವಹಿಸಬಹುದು. ಎಸ್‌ಪಿ, ಡಿಸಿ ಏನು ಮಾಡುತ್ತಾರೆ. ಹೆಚ್ಚು ಎಂದರೆ ಇವರು ಸಿದ್ದರಾಮಯ್ಯ ಮತ್ತು ನನ್ನ ಮೇಲೆ ಕೇಸ್ ಹಾಕಬಹುದು. ನಾನು ಫಿಲ್ಮ್ ಚೇಂಬರ್‌ಗೆ ಕೂಡ ಹೋಗಿ ಎಲ್ಲರನ್ನೂ ಆಹ್ವಾನಿಸಿದ್ದೇನೆ. ಯಾರು ಬರುತ್ತಾರೆಂದು ನನಗೆ ಗೊತ್ತಿಲ್ಲ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: Mekedatu Project: ಮೇಕೆದಾಟು ಪಾದಯಾತ್ರೆ; ಕಾಂಗ್ರೆಸ್​ ಹೋರಾಟ ಹೇಗಿರಲಿದೆ? ಸಂಪೂರ್ಣ ವಿವರ ಇಲ್ಲಿದೆ

Mekedatu Padayatra: ಪಾದಯಾತ್ರೆಗೆ ಬರುವ ಯಾರನ್ನು ನೀವು ತಡೆಯುವುದಕ್ಕೆ ಆಗಲ್ಲ: ಡಿಕೆ ಶಿವಕುಮಾರ್

Published On - 1:34 pm, Sun, 9 January 22

ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ