AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ಶಿಕ್ಷಣ ಸಚಿವ ಅನ್ಬಿಲ್ ಮಹೇಶ್​ಗೆ ಎದೆನೋವು, ಅಸ್ವಸ್ಥ; ಆಸ್ಪತ್ರೆಗೆ ಕರೆತರುವಾಗ ಬೆಂಗಳೂರು ಟ್ರಾಫಿಕ್​ನಲ್ಲಿ ಸಿಲುಕಿ ಪರದಾಟ

ಕೃಷ್ಣಗಿರಿಯಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ತೆರಳುವಾಗ ತಮಿಳುನಾಡು ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಅದರಂತೆ ಆಸ್ಪತ್ರೆಗೆ ಹೋಗುವ ದಾರಿ ಮಧ್ಯೆ ತಮಿಳುನಾಡು-ಕರ್ನಾಟಕ ಗಡಿ ಅತ್ತಿಬೆಲೆ ಬಳಿ ಟ್ರಾಫಿಕ್​ನಲ್ಲಿ ಜಾಮ್​ನಲ್ಲಿ ಸಿಲುಕಿ ಪರದಾಡುವಂತಾಯಿತು.

ತಮಿಳುನಾಡು ಶಿಕ್ಷಣ ಸಚಿವ ಅನ್ಬಿಲ್ ಮಹೇಶ್​ಗೆ ಎದೆನೋವು, ಅಸ್ವಸ್ಥ; ಆಸ್ಪತ್ರೆಗೆ ಕರೆತರುವಾಗ ಬೆಂಗಳೂರು ಟ್ರಾಫಿಕ್​ನಲ್ಲಿ ಸಿಲುಕಿ ಪರದಾಟ
ತಮಿಳುನಾಡು ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೊಳಿ
ರಾಮು, ಆನೇಕಲ್​
| Edited By: Rakesh Nayak Manchi|

Updated on: Aug 12, 2023 | 6:27 PM

Share

ಆನೇಕಲ್, ಆಗಸ್ಟ್ 12: ಕೃಷ್ಣಗಿರಿಯಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ತೆರಳುವಾಗ ತಮಿಳುನಾಡು (Tamil Nadu) ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೊಳಿ (Anbil Mahesh Poyyamozhi) ಅವರಿಗೆ ಎದೆನೋವು ಕಾಣಿಸಿಕೊಂಡು ಅಸ್ವಸ್ಥಗೊಂಡಿದ್ದಾರೆ. ಅದರಂತೆ, ಸಚಿವರು ಸೇಲಂನಿಂದ ಬೆಂಗಳೂರಿನ ಬೊಮ್ಮಸಂದ್ರದ ಆಸ್ಪತ್ರೆಗೆ ಬರುತ್ತಿದ್ದಾಗ ಅತ್ತಿಬೆಲೆ ಬಳಿ ಟ್ರಾಫಿಕ್​ನಲ್ಲಿ ಜಾಮ್​ನಲ್ಲಿ ಸಿಲುಕಿ ಪರದಾಡುವಂತಾಯಿತು.

ಕೃಷ್ಣಗಿರಿಯಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ಹೋಗುತ್ತಿದ್ದ ಸಚಿವ ಅನ್ಬಿಲ್ ಮಹೇಶ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ತಮಿಳುನಾಡಿನ ಸೇಲಂನಿಂದ ಬೆಂಗಳೂರು ನಗರದ ಆನೇಕಲ್ ತಾಲ್ಲೂಕಿನ ಬೊಮ್ಮಸಂದ್ರದ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ಕೊರೆತರುವಾಗ ಅತ್ತಿಬೆಲೆ ಬಳಿ ಟ್ರಾಫಿಕ್​ನಲ್ಲಿ ಸಿಲುಕಿದರು.

ಇದನ್ನೂ ಓದಿ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಗದ್ದಲ; ಪಟ್ಟು ಬಿಡದ ತಮಿಳುನಾಡು ಅಧಿಕಾರಿಗಳು

ಕೂಡಲೇ ಎಚ್ಚೆತ್ತ ಟ್ರಾಫಿಕ್ ಪೊಲೀಸರು, ಶಿಕ್ಷಣ ಸಚಿವರು ಆಸ್ಪತ್ರೆಗೆ ಹೋಗುತ್ತಿದ್ದ ವಾಹನವನ್ನು ಟ್ರಾಫಿಕ್​ನಿಂದ ಮುಕ್ತಗೊಳಿಸಿ ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾದರು. ಸದ್ಯ ಅನ್ಬಿಲ್ ಮಹೇಶ್ ಅವರನ್ನು ನಾರಾಯಣ ಹೆಲ್ತ್ ಸಿಟಿಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು