AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಉತ್ತರ ಕರ್ನಾಟಕ ಭಾಗದ ಓಲಾ, ಊಬರ್ ಚಾಲಕರೇ ಟಾರ್ಗೆಟ್; ಪ್ರಯಾಣಿಕನ ಸೋಗಿನಲ್ಲಿ ಬುಕ್ ಮಾಡಿ ಚಾಕು ತೋರಿಸಿ ಸುಲಿಗೆ

ಉತ್ತರ ಕರ್ನಾಟಕ ಭಾಗದಿಂದ ಬಂದಿರುವ ಓಲಾ, ಉಬರ್​ ಚಾಲಕರನ್ನೇ ಟಾರ್ಗೆಟ್ ಮಾಡಿ, ಪ್ರಯಾಣಿಕನ ಸೋಗಿನಲ್ಲಿ ಬುಕ್ ಮಾಡುವ ಮೂಲಕ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಚಾಕು ತೋರಿಸಿ ಸುಲಿಗೆ ಮಾಡುತ್ತಿದ್ದ ಆರೋಪಿಯನ್ನ ಅರೆಸ್ಟ್ ಮಾಡಲಾಗಿದೆ.​

Bengaluru: ಉತ್ತರ ಕರ್ನಾಟಕ ಭಾಗದ ಓಲಾ, ಊಬರ್ ಚಾಲಕರೇ ಟಾರ್ಗೆಟ್; ಪ್ರಯಾಣಿಕನ ಸೋಗಿನಲ್ಲಿ ಬುಕ್ ಮಾಡಿ ಚಾಕು ತೋರಿಸಿ ಸುಲಿಗೆ
ಆರೋಪಿ ಅರೆಸ್ಟ್​
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Jun 17, 2023 | 11:11 AM

Share

ಬೆಂಗಳೂರು: ಮಹಾನಗರಕ್ಕೆ ಬದುಕು ಕಟ್ಟಿಕೊಳ್ಳಲು ಬರುವವರಲ್ಲಿ ಉತ್ತರ ಕರ್ನಾಟಕ(North Karnataka) ಭಾಗದ ಜನರೇ ಹೆಚ್ಚು. ಅದೆಷ್ಟೋ ಕನಸುಗಳನ್ನ ಹೊತ್ತು ಬಂದ ಇವರು ಹೊಟ್ಟೆಪಾಡಿಗಾಗಿ, ಜೀವನದ ಬಂಡಿ ನೂಕಲು ಮಾಡದ ಕೆಲಸಗಳಿಲ್ಲ. ಅದರಂತೆ ಕೆಲವರು ಓಲಾ(Ola), ಉಬರ್(Uber) ಚಾಲಕರಾಗಿ ಕೆಲಸ ಮಾಡುತ್ತಾರೆ. ಇಂತಹವರನ್ನೇ ಟಾರ್ಗೆಟ್ ಮಾಡಿದ ಕೆಲವರು ಇದೀಗ ಸುಲಿಗೆಗೆ ನಿಂತಿದ್ದಾರೆ. ಹೌದು ಉತ್ತರ ಕರ್ನಾಟಕ ಭಾಗದಿಂದ ಬಂದಿರುವ ಓಲಾ, ಉಬರ್​ ಚಾಲಕರನ್ನೇ ಟಾರ್ಗೆಟ್ ಮಾಡಿ, ಪ್ರಯಾಣಿಕನ ಸೋಗಿನಲ್ಲಿ ಬುಕ್ ಮಾಡುವ ಮೂಲಕ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಚಾಕು ತೋರಿಸಿ ಸುಲಿಗೆಗೆ ಇಳಿದಿದ್ದ ಓರ್ವ ಆರೋಪಿ ವಿನಯ್ ಎಂಬಾತನನ್ನ ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.

ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಚಾಕು ತೋರಿಸಿ ಸುಲಿಗೆ

ಹೌದು ಪೊಲೀಸರಿಗೆ ದೂರು ಕೊಡದಂತೆ ಹೆದರಿಸಿ, ಹೆಚ್​ಎಎಲ್, ಬಾಣಸವಾಡಿ, ಹೈ ಗ್ರೌಂಡ್ಸ್, ಎಂ.ಜಿ ರೋಡ್ ಈ ಭಾಗಗಳಿಂದ ಕ್ಯಾಬ್ ಬುಕ್ ಮಾಡಿ, ಬಳಿಕ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ, ಅಲ್ಲಿ ಚಾಕು ತೋರಿಸಿ ಸುಲಿಗೆ ಮಾಡುತ್ತಿದ್ದ. ಅಷ್ಟೇ ಅಲ್ಲ ಚಾಲಕನ ಕಡೆಯಿಂದ ಅವರ ಕುಟುಂಬಸ್ಥರಿಗೆ ಕರೆ ಮಾಡಿ, ಬೆದರಿಕೆ ಹಾಕಿ ಪೋನ್ ಫೇ ಮೂಲಕ ಹಣ ಹಾಕಿಸಿಕೊಳ್ಳುತ್ತಿದ್ದ. ‘ನಾನು ಆಸ್ಪತ್ರೆಗೆ ಸೇರಿದ್ದೀನಿ, ನನಗೆ ಹಣದ ಅವಶ್ಯಕತೆಯಿದೆ ಎಂದು ಚಾಲಕರ ಕುಟುಂಬಸ್ಥರಿಗೆ ಕರೆ ಮಾಡಿಸುತ್ತಿದ್ದ. ಇದೀಗ ಆರೋಪಿಯನ್ನ ಬಂಧಿಸಿ, ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಇನ್ನು ವಿಚಾರಣೆ ವೇಳೆ ಮತ್ತೆ ನಾಲ್ಕು ಸುಲಿಗೆ ಪ್ರಕರಣಗಳು ಬೆಳಕಿಗೆ ಬಂದಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ