AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KIA: ಟರ್ಮಿನಲ್ 2ರಿಂದ ವಿಸ್ತಾರ ವಿಮಾನ ಸೇವೆ; ಮಾರ್ಚ್ 26ರಿಂದ ಲಭ್ಯ

ಟಾಟಾ ಸಮೂಹದ ಸಿಂಗಾಪುರ ಏರ್​ಲೈನ್ಸ್ ಬ್ರ್ಯಾಂಡ್ ಆಗಿರುವ ‘ವಿಸ್ತಾರ’ ಮಾರ್ಚ್ 26ರಿಂದ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಿಂದ ಸೇವೆ ಆರಂಭಿಸಲಿದೆ.

KIA: ಟರ್ಮಿನಲ್ 2ರಿಂದ ವಿಸ್ತಾರ ವಿಮಾನ ಸೇವೆ; ಮಾರ್ಚ್ 26ರಿಂದ ಲಭ್ಯ
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2
Follow us
Ganapathi Sharma
|

Updated on:Mar 17, 2023 | 4:28 PM

ಬೆಂಗಳೂರು: ಟಾಟಾ ಸಮೂಹದ (Tata Group) ಸಿಂಗಾಪುರ ಏರ್​ಲೈನ್ಸ್ ಬ್ರ್ಯಾಂಡ್ ಆಗಿರುವ ‘ವಿಸ್ತಾರ (Vistara)’ ಮಾರ್ಚ್ 26ರಿಂದ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಟರ್ಮಿನಲ್ 2ರಿಂದ ಸೇವೆ ಆರಂಭಿಸಲಿದೆ. ಇದರೊಂದಿಗೆ, ಟರ್ಮಿನಲ್ 2ರಿಂದ ಕಾರ್ಯಾಚರಣೆ ಆರಂಭಿಸುತ್ತಿರುವ ಮೂರನೇ ವಿಮಾನಯಾನ ಸಂಸ್ಥೆಯಾಗಲಿದೆ. ‘ಡಿಯರ್ ಬೆಂಗಳೂರು, ನಾವು ಟರ್ಮಿನಲ್ 2 ಅನ್ನು ಪ್ರವೇಶಿಸುತ್ತಿದ್ದೇವೆ. ನಮ್ಮ ವಿಮಾನಗಳು ಮಾರ್ಚ್ 26ರಿಂದ ಟರ್ಮಿನಲ್ 2ರಿಂದ ಕಾರ್ಯಾಚರಣೆ ಮಾಡಲಿವೆ’ ಎಂದು ಟ್ವೀಟ್ ಮೂಲಕ ವಿಸ್ತಾರ ಮಾಹಿತಿ ನೀಡಿದೆ. ವಿಸ್ತಾರ ವಿಮಾನಗಳು ಬೆಂಗಳೂರಿನಿಂದ ಮುಂಬೈ, ಗೋವಾ, ಡೆಹ್ರಾಡೂನ್, ದೆಹಲಿ, ಹೈದರಾಬಾದ್, ಪುಣೆ ಹಾಗೂ ಚಂಡೀಗಢಕ್ಕೆ ತೆರಳುತ್ತವೆ.

ಪ್ರಸ್ತುತ ಏರ್​ ಏಷ್ಯಾ, ಸ್ಟಾರ್ ಏರ್​ವೇಸ್ ಟರ್ಮಿನಲ್ 2ರಿಂದ ಕಾರ್ಯಾಚರಣೆ ನಡೆಸುತ್ತಿವೆ. ಜನವರಿ 15ರಂದು ಸ್ಟಾರ್​​ ಏರ್​ವೇಸ್ ವಿಮಾನ ಬೆಂಗಳೂರಿನಿಂದ ಕಲಬುರಗಿಗೆ ತೆರಳುವ ಮೂಲಕ ಟರ್ಮಿನಲ್ 2ರಲ್ಲಿ ಕಾರ್ಯಾಚರಣೆ ಆರಂಭವಾಗಿತ್ತು. ವಿಮಾನ ನಿಲ್ದಾಣದಿಂದ ಪ್ರಯಾಣಿಕರನ್ನು ಕರೆದೊಯ್ಯಲು ಮತ್ತು ಡ್ರಾಪ್ ಮಾಡಲು ಸುಗಮ ವಾಹನ ಆಗಮನ, ನಿರ್ಗಮನಕ್ಕಾಗಿ ಟರ್ಮಿನಲ್​ 2ಗೆ ಐದು ಪಥದ ಮಾರ್ಗವೂ ಇದೆ.

ಇದನ್ನೂ ಓದಿ: Bengaluru Airport: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸೇವೆಗೆ ಸಿದ್ದವಾದ ಟರ್ಮಿನಲ್ 2

2022ರ ನವೆಂಬರ್​​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಟರ್ಮಿನಲ್ 2 ಅನ್ನು ಲೋಕಾರ್ಪಣೆಗೊಳಿಸಿದ್ದರು. ಭಾರತದ ಉದ್ಯಾನ ನಗರವಾಗಿ ಬೆಂಗಳೂರನ್ನು ಪ್ರದರ್ಶಿಸುವ ಥೀಮ್​ನೊಂದಿಗೆ ಟರ್ಮಿನಲ್ 2 ಅನ್ನು ನಿರ್ಮಿಸಲಾಗಿದೆ. ಟರ್ಮಿನಲ್ 2 ರ ಮೊದಲ ಹಂತದ ನಿರ್ಮಾಣದ ಅಂದಾಜು ವೆಚ್ಚ 13,000 ಕೋಟಿ ರೂ. ಆಗಿದ್ದು ಇದು ಸರಿಸುಮಾರು 2.5 ಲಕ್ಷ ಚದರ ಮೀಟರ್‌ ಪ್ರದೇಶದಲ್ಲಿ ನಿರ್ಮಾಣವಾಗಿದೆ. ಈ ಹೊಸ ಟರ್ಮಿನಲ್ ಮೂಲಕ ವಾರ್ಷಿಕ 25 ದಶಲಕ್ಷ ಪ್ರಯಾಣಿಕರು ಪ್ರಯಾಣಿಸುವ ನಿರೀಕ್ಷೆ ಇದೆ. ಎರಡನೇ ಹಂತದಲ್ಲಿ ಟರ್ಮಿನಲ್ 2ಗೆ ಇನ್ನೂ 4.41 ಲಕ್ಷ ಚದರ ಮೀಟರ್‌ ಪ್ರದೇಶ ಸೇರ್ಪಡೆಯಾಗಲಿದೆ ಎಂದು ವರದಿಗಳು ತಿಳಿಸಿವೆ.

ರಾಜ್ಯದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:26 pm, Fri, 17 March 23

ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್