AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KIA: ಟರ್ಮಿನಲ್ 2ರಿಂದ ವಿಸ್ತಾರ ವಿಮಾನ ಸೇವೆ; ಮಾರ್ಚ್ 26ರಿಂದ ಲಭ್ಯ

ಟಾಟಾ ಸಮೂಹದ ಸಿಂಗಾಪುರ ಏರ್​ಲೈನ್ಸ್ ಬ್ರ್ಯಾಂಡ್ ಆಗಿರುವ ‘ವಿಸ್ತಾರ’ ಮಾರ್ಚ್ 26ರಿಂದ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಿಂದ ಸೇವೆ ಆರಂಭಿಸಲಿದೆ.

KIA: ಟರ್ಮಿನಲ್ 2ರಿಂದ ವಿಸ್ತಾರ ವಿಮಾನ ಸೇವೆ; ಮಾರ್ಚ್ 26ರಿಂದ ಲಭ್ಯ
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2
ಗಣಪತಿ ಶರ್ಮಾ
|

Updated on:Mar 17, 2023 | 4:28 PM

Share

ಬೆಂಗಳೂರು: ಟಾಟಾ ಸಮೂಹದ (Tata Group) ಸಿಂಗಾಪುರ ಏರ್​ಲೈನ್ಸ್ ಬ್ರ್ಯಾಂಡ್ ಆಗಿರುವ ‘ವಿಸ್ತಾರ (Vistara)’ ಮಾರ್ಚ್ 26ರಿಂದ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಟರ್ಮಿನಲ್ 2ರಿಂದ ಸೇವೆ ಆರಂಭಿಸಲಿದೆ. ಇದರೊಂದಿಗೆ, ಟರ್ಮಿನಲ್ 2ರಿಂದ ಕಾರ್ಯಾಚರಣೆ ಆರಂಭಿಸುತ್ತಿರುವ ಮೂರನೇ ವಿಮಾನಯಾನ ಸಂಸ್ಥೆಯಾಗಲಿದೆ. ‘ಡಿಯರ್ ಬೆಂಗಳೂರು, ನಾವು ಟರ್ಮಿನಲ್ 2 ಅನ್ನು ಪ್ರವೇಶಿಸುತ್ತಿದ್ದೇವೆ. ನಮ್ಮ ವಿಮಾನಗಳು ಮಾರ್ಚ್ 26ರಿಂದ ಟರ್ಮಿನಲ್ 2ರಿಂದ ಕಾರ್ಯಾಚರಣೆ ಮಾಡಲಿವೆ’ ಎಂದು ಟ್ವೀಟ್ ಮೂಲಕ ವಿಸ್ತಾರ ಮಾಹಿತಿ ನೀಡಿದೆ. ವಿಸ್ತಾರ ವಿಮಾನಗಳು ಬೆಂಗಳೂರಿನಿಂದ ಮುಂಬೈ, ಗೋವಾ, ಡೆಹ್ರಾಡೂನ್, ದೆಹಲಿ, ಹೈದರಾಬಾದ್, ಪುಣೆ ಹಾಗೂ ಚಂಡೀಗಢಕ್ಕೆ ತೆರಳುತ್ತವೆ.

ಪ್ರಸ್ತುತ ಏರ್​ ಏಷ್ಯಾ, ಸ್ಟಾರ್ ಏರ್​ವೇಸ್ ಟರ್ಮಿನಲ್ 2ರಿಂದ ಕಾರ್ಯಾಚರಣೆ ನಡೆಸುತ್ತಿವೆ. ಜನವರಿ 15ರಂದು ಸ್ಟಾರ್​​ ಏರ್​ವೇಸ್ ವಿಮಾನ ಬೆಂಗಳೂರಿನಿಂದ ಕಲಬುರಗಿಗೆ ತೆರಳುವ ಮೂಲಕ ಟರ್ಮಿನಲ್ 2ರಲ್ಲಿ ಕಾರ್ಯಾಚರಣೆ ಆರಂಭವಾಗಿತ್ತು. ವಿಮಾನ ನಿಲ್ದಾಣದಿಂದ ಪ್ರಯಾಣಿಕರನ್ನು ಕರೆದೊಯ್ಯಲು ಮತ್ತು ಡ್ರಾಪ್ ಮಾಡಲು ಸುಗಮ ವಾಹನ ಆಗಮನ, ನಿರ್ಗಮನಕ್ಕಾಗಿ ಟರ್ಮಿನಲ್​ 2ಗೆ ಐದು ಪಥದ ಮಾರ್ಗವೂ ಇದೆ.

ಇದನ್ನೂ ಓದಿ: Bengaluru Airport: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸೇವೆಗೆ ಸಿದ್ದವಾದ ಟರ್ಮಿನಲ್ 2

2022ರ ನವೆಂಬರ್​​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಟರ್ಮಿನಲ್ 2 ಅನ್ನು ಲೋಕಾರ್ಪಣೆಗೊಳಿಸಿದ್ದರು. ಭಾರತದ ಉದ್ಯಾನ ನಗರವಾಗಿ ಬೆಂಗಳೂರನ್ನು ಪ್ರದರ್ಶಿಸುವ ಥೀಮ್​ನೊಂದಿಗೆ ಟರ್ಮಿನಲ್ 2 ಅನ್ನು ನಿರ್ಮಿಸಲಾಗಿದೆ. ಟರ್ಮಿನಲ್ 2 ರ ಮೊದಲ ಹಂತದ ನಿರ್ಮಾಣದ ಅಂದಾಜು ವೆಚ್ಚ 13,000 ಕೋಟಿ ರೂ. ಆಗಿದ್ದು ಇದು ಸರಿಸುಮಾರು 2.5 ಲಕ್ಷ ಚದರ ಮೀಟರ್‌ ಪ್ರದೇಶದಲ್ಲಿ ನಿರ್ಮಾಣವಾಗಿದೆ. ಈ ಹೊಸ ಟರ್ಮಿನಲ್ ಮೂಲಕ ವಾರ್ಷಿಕ 25 ದಶಲಕ್ಷ ಪ್ರಯಾಣಿಕರು ಪ್ರಯಾಣಿಸುವ ನಿರೀಕ್ಷೆ ಇದೆ. ಎರಡನೇ ಹಂತದಲ್ಲಿ ಟರ್ಮಿನಲ್ 2ಗೆ ಇನ್ನೂ 4.41 ಲಕ್ಷ ಚದರ ಮೀಟರ್‌ ಪ್ರದೇಶ ಸೇರ್ಪಡೆಯಾಗಲಿದೆ ಎಂದು ವರದಿಗಳು ತಿಳಿಸಿವೆ.

ರಾಜ್ಯದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:26 pm, Fri, 17 March 23

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು