AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಬರ್ ಚಾಲಕನಿಂದ ಮಹಿಳೆಗೆ ಕಿರುಕುಳ; ಲಿಂಕ್ಡ್​​ಇನ್ ಪೋಸ್ಟ್ ವೈರಲ್ ಆದ ಬೆನ್ನಲ್ಲೇ ಕ್ರಮ ಕೈಗೊಂಡ ಕಂಪನಿ

ಮಹಿಳಾ ಗ್ರಾಹಕರ ಜತೆ ಕ್ಯಾಬ್ ಡ್ರೈವರ್ ಅಸಭ್ಯವಾಗಿ ವರ್ತಿಸಿದ ಮತ್ತೊಂದು ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಉಬರ್ ಚಾಲಕನೊಬ್ಬ ಮಹಿಳೆಯೊಬ್ಬರ ಜತೆ ಅಸಭ್ಯವಾಗಿ ವರ್ತಿಸಿದ್ದು, ಈ ವಿಚಾರವಾಗಿ ಮಹಿಳೆಯು ಲಿಂಕ್ಡ್‌ಇನ್‌ನಲ್ಲಿ ಸಂದೇಶ ಪ್ರಕಟಿಸಿದ್ದಾರೆ.

ಉಬರ್ ಚಾಲಕನಿಂದ ಮಹಿಳೆಗೆ ಕಿರುಕುಳ; ಲಿಂಕ್ಡ್​​ಇನ್ ಪೋಸ್ಟ್ ವೈರಲ್ ಆದ ಬೆನ್ನಲ್ಲೇ ಕ್ರಮ ಕೈಗೊಂಡ ಕಂಪನಿ
ಆರೋಪಿ ಚಾಲಕ (ಲಿಂಕ್ಡ್​​ಇನ್ ಚಿತ್ರ)Image Credit source: Linkedin
ಗಣಪತಿ ಶರ್ಮಾ
|

Updated on: Jun 21, 2023 | 7:58 PM

Share

ಬೆಂಗಳೂರು: ಮಹಿಳಾ ಗ್ರಾಹಕರ ಜತೆ ಕ್ಯಾಬ್ ಡ್ರೈವರ್ (Uber Cab Driver) ಅಸಭ್ಯವಾಗಿ ವರ್ತಿಸಿದ ಮತ್ತೊಂದು ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಉಬರ್ ಚಾಲಕನೊಬ್ಬ ಮಹಿಳೆಯೊಬ್ಬರ ಜತೆ ಅಸಭ್ಯವಾಗಿ ವರ್ತಿಸಿದ್ದು, ಈ ವಿಚಾರವಾಗಿ ಮಹಿಳೆಯು ಲಿಂಕ್ಡ್‌ಇನ್‌ನಲ್ಲಿ ಸಂದೇಶ ಪ್ರಕಟಿಸಿದ್ದಾರೆ. ಲಿಂಕ್ಡ್‌ಇನ್‌ (LinkedIn) ಪೋಸ್ಟ್ ವೈರಲ್ ಆಗುತ್ತಿದ್ದಂತೆಯೇ ಉಬರ್ ಕಂಪನಿಯು ಚಾಲಕನ ವಿರುದ್ಧ ಕ್ರಮ ಕೈಗೊಂಡಿದೆ. ಲಿಂಕ್ಡ್‌ಇನ್‌ ಪೋಸ್ಟ್ ಪ್ರಕಾರ, ಮಹಿಳೆಯು ಬಿಟಿಎಂ 2 ನೇ ಹಂತದಿಂದ ಜೆಪಿ ನಗರ ಮೆಟ್ರೋಗೆ ಕ್ಯಾಬ್ ಸೇವೆ ಪಡೆದಿದ್ದರು. ಚಾಲಕನು ಸಮಯಕ್ಕೆ ಸರಿಯಾಗಿ ಬಂದಿದ್ದಲ್ಲದೆ ಆರಂಭದಲ್ಲಿ ಪ್ರಯಾಣ ಸರಿಯಾಗಿಯೇ ಸಾಗುತ್ತಿತ್ತು ಎಂದು ಮಹಿಳೆ ಬರೆದುಕೊಂಡಿದ್ದಾರೆ.

ಹಠಾತ್ತನೆ ಚಾಲಕ ಮಾರ್ಗ ಬದಲಾಯಿಸಿದ್ದ. ಗೂಗಲ್ ಮ್ಯಾಪ್ ಪರಿಶೀಲಿಸಿದ ಮಹಿಳೆಗೆ ಕ್ಯಾಬ್ ಬೇರೆ ಮಾರ್ಗದಲ್ಲಿ ಸಾಗುತ್ತಿರುವುದರ ಅರಿವಾಯಿತು. ಹೀಗಾಗಿ ನಿಗದಿತ ನಿಲ್ದಾಣದ ವರೆಗೆ ಕಾಯುವ ಮೊದಲೇ, ಅಲ್ಲಿಯೇ ಕ್ಯಾಬ್​​ನಿಂದ ಇಳಿಯಲು ಮಹಿಳೆ ವಿನಂತಿಸಿದ್ದಾರೆ.

ಕ್ಯಾಬ್ ದರವನ್ನು ಪಾವತಿಸುತ್ತಿದ್ದಂತೆಯೇ ಚಾಲಕ ತನ್ನ ಬಟ್ಟೆ ಬಿಚ್ಚಿ ಗುಪ್ತಾಂಗ ಪ್ರದರ್ಶಿಸಿದ. ಆಘಾತಕ್ಕೊಳಗಾಗಿ ಓಡಿಹೋಗಿ ಜನಸಂದಣಿಯನ್ನು ಸೇರಿಕೊಂಡೆ. ಒಂದು ಕ್ಷಣ ಗೊಂದಲ ಹಾಗೂ ಭೀತಿಯಿಂದ ಏನು ಮಾಡಬೇಕೆಂಬುದು ತೋಚದಾಯಿತು ಎಂದು ಮಹಿಳೆ ಲಿಂಕ್ಡ್​ಇನ್ ಪೋಸ್ಟ್​​ನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: Uttar Pradesh Crime: ನಿನ್ನ ಲಿಂಗ ಬದಲಿಸುತ್ತೇನೆ ಎಂದು ಹೇಳಿ ಮಹಿಳೆಯ ಪ್ರಾಣವನ್ನೇ ತೆಗೆದ ಮಂತ್ರವಾದಿ

ನಂತರ ಮತ್ತೊಂದು ಪೋಸ್ಟ್ ಮಾಡಿರುವ ಅವರು, ಚಾಲಕನ ವಿರುದ್ಧ ಉಬರ್ ಕಂಪನಿಯು ಕ್ರಮ ಕೈಗೊಂಡಿದೆ ಎಂದು ಉಲ್ಲೇಖಿಸಿದ್ದಾರೆ. ಉಬರ್ ಕಂಪನಿಯ ತ್ವರಿತ ಪ್ರತಿಕ್ರಿಯೆಗೆ ಮತ್ತು ಕ್ರಮಕ್ಕೆ ನಾನು ಕೃತಜ್ಞಳಾಗಿದ್ದೇನೆ ಮತ್ತು ಅವರು ಪರಿಸ್ಥಿತಿಯನ್ನು ಪರಿಹರಿಸಲು ಪ್ರಯತ್ನಗಳನ್ನು ಮಾಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?