AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಕರ ವರ್ಗಾವಣೆ ಬಿಲ್​ ವಿಧೇಯಕ ಅಂಗೀಕಾರ: ಪತಿ-ಪತ್ನಿ ಹಾಗೂ ಪರಸ್ಪರ ಶಿಕ್ಷಕರ ವರ್ಗಾವಣೆಗೆ ಅವಕಾಶ

ಪ್ರೌಢ ಶಿಕ್ಷಣ ಮಂಡಳಿ ತಿದ್ದುಪಡಿ ವಿಧೇಯಕ ಸಹ ಅಂಗೀಕಾರ ಮಾಡಿದ್ದು, SSLC, ಪಿಯುಸಿ ಪರೀಕ್ಷಾ ಮಂಡಳಿ ವಿಲೀನಕ್ಕೆ ಅವಕಾಶ ನೀಡಲಾಗಿದೆ.

ಶಿಕ್ಷಕರ ವರ್ಗಾವಣೆ ಬಿಲ್​ ವಿಧೇಯಕ ಅಂಗೀಕಾರ: ಪತಿ-ಪತ್ನಿ ಹಾಗೂ ಪರಸ್ಪರ ಶಿಕ್ಷಕರ ವರ್ಗಾವಣೆಗೆ ಅವಕಾಶ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 22, 2022 | 5:45 PM

Share

ಬೆಂಗಳೂರು: ಶಿಕ್ಷಕರ ವರ್ಗಾವಣೆ ಬಿಲ್ (Teacher Transfer Bill Passed)​ ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದು, ಪರಸ್ಪರ ವರ್ಗಾವಣೆ ಹಾಗೂ ಪತಿ-ಪತ್ನಿ ವರ್ಗಾವಣೆಗೆ ಅವಕಾಶವಿದ್ದು, ಇತರೆ ಶಿಕ್ಷಕರು ಕೌನ್ಸೆಲಿಂಗ್ ಮೂಲಕ ವರ್ಗಾವಣೆಗೆ ಅವಕಾಶ ನೀಡಲಾಗಿದೆ. ಪ್ರೌಢ ಶಿಕ್ಷಣ ಮಂಡಳಿ ತಿದ್ದುಪಡಿ ವಿಧೇಯಕ ಸಹ ಅಂಗೀಕಾರ ಮಾಡಿದ್ದು, SSLC, ಪಿಯುಸಿ ಪರೀಕ್ಷಾ ಮಂಡಳಿ ವಿಲೀನಕ್ಕೆ ಅವಕಾಶ ನೀಡಲಾಗಿದೆ. ಇನ್ಮುಂದೆ ಒಂದೇ ಮಂಡಳಿಯಿಂದ SSLC, ಪಿಯುಸಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಭೂ ಕಬಳಿಕೆ ನಿಷೇಧ ಕಾಯ್ದೆ ತಿದ್ದುಪಡಿಯೊಂದಿಗೆ ವಿಧಾನಸಭೆಯಲ್ಲಿ ವಿಧೇಯಕ ಅಂಗೀಕಾರವಾಗಿದ್ದು, ಭೂ ಕಬಳಿಕೆ ಕೇಸ್ ವಾಪಸ್ ಪಡೆಯುವ ಉದ್ದೇಶವಿರುವ ಬಿಲ್‌ ಆಗಿದೆ. ಸರ್ಕಾರಿ ಭೂಮಿಯಲ್ಲಿ ಕೃಷಿಗಾಗಿ ಬಳಕೆ ಮಾಡಿದ ರೈತರಿಗೆ ಸಮಸ್ಯೆಯಾಗುತ್ತಿದ್ದು,ಈ ಹಿನ್ನೆಲೆ ಭೂ ಕಬಳಿಕೆ ನಿಷೇಧ ಬಿಲ್‌ ಅಂಗೀಕಾರ ಮಾಡಲಾಗಿದೆ.

ಭೂ ಕಬಳಿಕೆ ನಿಷೇಧ ವಿಧೇಯಕ್ಕೆ ನಿನ್ನೆ ವಿಧಾನಸಭೆಯಲ್ಲಿ ವಿರೋಧ ವ್ಯಕ್ತವಾಗಿತ್ತು. ಎ.ಟಿ.ರಾಮಸ್ವಾಮಿ, ಗೂಳಿಹಟ್ಟಿ ಶೇಖರ್ ವಿರೋಧ ವ್ಯಕ್ತಪಡಿಸಿದ್ರು. ಕಾಯ್ದೆ ಭೂಗಳ್ಳರಿಗೆ ಅನುಕೂಲ ಆಗುವ ಸಾಧ್ಯತೆ ಎಂದು ವಿರೋಧ ಮಾಡಿದ್ದು, ಹೀಗಾಗಿ ಕೆಲವೊಂದು ತಿದ್ದುಪಡಿಯೊಂದಿಗೆ ಇಂದು ವಿಧೇಯಕ ಅಂಗೀಕಾರ ಮಾಡಲಾಗಿದೆ.

& ಬದಲು OR ಅಂತ ಬಳಸಲು ನಿರ್ಧಾರ

ಕರ್ನಾಟಕ ಸ್ಟಾಂಪ್ ವಿಧೇಯಕ ತಿದ್ದುಪಡಿ-2022 ಅಂಗೀಕಾರ ಮಾಡಿದ್ದು, & ಬದಲು OR ಅಂತ ಬಳಸಲು ನಿರ್ಧಾರ ಮಾಡಲಾಗಿದೆ. ಚಾರಿಟೆಬಲ್ ಟ್ರಸ್ಟ್ ಮಾಡುವವರಿಗೆ ಅನ್ವಯವಾಗುವಂತೆ ಹೊಸ ತಿದ್ದುಪಡಿಯೊಂದಿಗೆ ಸ್ಟಾಂಪ್ ತಿದ್ದುಪಡಿ ಬಿಲ್​ನ್ನು ಇಂದು ವಿಧಾನಸಭೆಯಲ್ಲಿ ಅಂಗೀಕಾರ ಮಾಡಲಾಗಿದೆ.

ಬೆಳಗ್ಗೆ ಚರ್ಚೆ ಇಲ್ಲದೆಯೇ ಬಿಲ್ ಪಾಸ್

ಬೆಳಗ್ಗೆ ಚರ್ಚೆ ಇಲ್ಲದೆಯೇ ಬಿಲ್ ಪಾಸ್ ಮಾಡಿದಿರಿ. ಅದರಲ್ಲಿ ಇರುವಷ್ಟು ಹಗರಣ ಎಲ್ಲಿಯೂ ಇಲ್ಲ ಎಂದು ಹರಿಪ್ರಸಾದ್ ಪ್ರಶ್ನೀಸಿದರು. ಮಾಧುಸ್ವಾಮಿ ಉತ್ತರ ನೀಡಿದ್ದು, ತನಿಖೆ ಮಾಡುವುದಕ್ಕೆ ಯಾವ ಪಾರ್ಟಿಯವರು ಕೊಟ್ಟರು ಅಂತ ನೋಡಿ ತನಿಖೆ ಮಾಡುವುದಕ್ಕೆ ಆಗುವುದಿಲ್ಲ. ಎಲ್ಲ ಕೇಸ್​ನಲ್ಲೂ ಮನುಷ್ಯರನ್ನು ಅರೆಸ್ಟ್ ಮಾಡಲೇಬೇಕು ಅಂತಿಲ್ಲ. ಈಶ್ವರಪ್ಪರನ್ನು ಅರೆಸ್ಟ್ ಮಾಡುವುದಕ್ಜೆ ಯಾವುದೇ ಕಾರಣಗಳೂ ಇಲ್ಲ. ಈಶ್ವರಪ್ಪ ತನಿಖೆಗೆ ಸಹಕಾರ ಕೊಟ್ಟಿದ್ದಾರೆ, ಈಶ್ವರಪ್ಪ ಪ್ರಭಾವ ಬೀರಬಾರದು ಅಂತ ಮಂತ್ರಿ ಸ್ಥಾನಕ್ಕೆ ರಾಜೀನಾಮೆಯೂ ಕೊಟ್ಟಿದ್ದಾರೆ.

ಪೊಲೀಸರಿಗೆ ಸಹಕಾರ ಕೊಟ್ಟರೆ ಅರೆಸ್ಟ್ ಮಾಡುವ ಅಗತ್ಯ ಇಲ್ಲ. ಸೋಷಿಯಲ್ ಮೀಡಿಯಾ ಏನು ಬೇಕಾದರೂ ಮಾಡಲಿ ಅಂತ ಬಿಡೋಕಾಗಲ್ಲ. ನಿಮ್ಮತ್ರ ಅದನ್ನು ಸಹಿಸುವ ಶಕ್ತಿ ಇದೆ, ನಮಗೆ ಅಷ್ಟು ಶಕ್ತಿ ಇಲ್ಲ. ನೀವೂ ದೂರು ಕೊಡಿ, ಶಕ್ತಿ ಮೀರಿ ನಾವೂ ತನಿಖೆ ಮಾಡಿಸ್ತೀವಿ. ಎಲ್ಲರೂ ಹಿಡಿತಕ್ಕೆ ತೆಗೆದುಕೊಂಡು ರಾಜಕಾರಣ ಮಾಡಬೇಕಾಗುತ್ತದೆ. ಕಾನೂನು ಪ್ರಕಾರ ಬೇಲ್ ಕೊಟ್ಟು ಕಳಿಸಿದ್ದಾರೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ