Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಡಿಪಿಯಲ್ಲಿ ಪಾಕಿಸ್ತಾನದ ಧ್ವಜ, ಕ್ಲಬ್​ಹೌಸ್​ನಲ್ಲಿ ಪಾಕ್ ರಾಷ್ಟ್ರಗೀತೆ; ವ್ಯಾಪಕ ಆಕ್ರೋಶ

ಗ್ರೂಪಿನ 10ಕ್ಕೂ ಹೆಚ್ಚು ಸದಸ್ಯರು ಪಾಕಿಸ್ತಾನದ ಬಾವುಟವನ್ನು ಡಿಪಿ ಮಾಡಿಕೊಂಡು, ‘ನಮ್ಮ ದೇಶ ಪಾಕಿಸ್ತಾನ’ ಎಂದು ಹೇಳಿಕೊಂಡಿದ್ದಾರೆ.

Bengaluru News: ಡಿಪಿಯಲ್ಲಿ ಪಾಕಿಸ್ತಾನದ ಧ್ವಜ, ಕ್ಲಬ್​ಹೌಸ್​ನಲ್ಲಿ ಪಾಕ್ ರಾಷ್ಟ್ರಗೀತೆ; ವ್ಯಾಪಕ ಆಕ್ರೋಶ
ವೈರಲ್ ಆಗಿರುವ ಸ್ಕ್ರೀನ್ ಶಾಟ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Aug 16, 2022 | 1:03 PM

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಮುನ್ನಾ ದಿನ ಯುವಕರ ಗುಂಪೊಂದು ಕ್ಲಬ್​ಹೌಸ್​ನಲ್ಲಿ ಪಾಕಿಸ್ತಾನದ ರಾಷ್ಟ್ರಧ್ವಜವನ್ನು ಡಿಪಿ (Display Image – DP) ಮಾಡಿಕೊಂಡು, ಪಾಕಿಸ್ತಾನದ ರಾಷ್ಟ್ರಗೀತೆಯನ್ನು ಹಾಕಿ ಸಂಭ್ರಮಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ‘ಪಾಕಿಸ್ತಾನ್ ಜಿಂದಾಬಾದ್ ಇಂಡಿಯಾ ಮುರ್ದಾಬಾದ್’ ಹೆಸರಿನಲ್ಲಿ ಗ್ರೂಪ್​ ರಚಿಸಿಕೊಂಡಿದ್ದ ಒಂದಿಷ್ಟು ಯುವಕರು, ಅಶ್ಲೀಲವಾಗಿ ಮಾತನಾಡುತ್ತಾ ಪಾಕ್ ಪರ ಘೋಷಣೆಗಳನ್ನು ಕೂಗಿದ್ದಾರೆ. ಕ್ಲಬ್​ಹೌಸ್ ಸಂವಾದದಲ್ಲಿ ಪಾಲ್ಗೊಂಡಿದ್ದವರ ಪೈಕಿಯೇ ಒಬ್ಬರು ಸ್ಕ್ರೀನ್ ರೆಕಾರ್ಡ್ ಮಾಡಿಕೊಂಡು ಸಾಮಾಜಿಕ ಮಾಧ್ಯಮಗಳಿಗೆ ಹರಿಬಿಟ್ಟ ನಂತರ ಘಟನೆ ಬಯಲಾಗಿದೆ.

ಈ ಗುಂಪಿನಲ್ಲಿ ಇರುವವರೆಲ್ಲರೂ ಕನ್ನಡದಲ್ಲೇ ಮಾತನಾಡಿದ್ದಾರೆ. ಗ್ರೂಪಿನ 10ಕ್ಕೂ ಹೆಚ್ಚು ಸದಸ್ಯರು ಪಾಕಿಸ್ತಾನದ ಬಾವುಟವನ್ನು ಡಿಪಿ ಮಾಡಿಕೊಂಡು, ‘ನಮ್ಮ ದೇಶ ಪಾಕಿಸ್ತಾನ’ ಎಂದು ಹೇಳಿಕೊಂಡಿದ್ದಾರೆ. ನಂತರ ಭಾರತದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಈ ಯುವಕರು ತಮಾಷೆಗೆ ಹೀಗೆ ಮಾಡಿದ್ದೋ ಅಥವಾ ನಿಜವಾಗಿಯೂ ಇವರು ಪಾಕಿಸ್ತಾನದ ಪರ ಒಲವಿರುವವರೋ ಎನ್ನುವ ಬಗ್ಗೆ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ. ಈ ಖಾತೆಗಳು ಸಹ ಅಸಲಿಯೋ ನಕಲಿಯೋ ಎಂಬುದು ಬಹಿರಂಗಗೊಳ್ಳಬೇಕಿದೆ. ಭಾರತವನ್ನು ಅವಮಾನಿಸಿದ ಯುವಕರನ್ನು ಬಂಧಿಸಬೇಕೆಂದು ಹಿಂದೂಪರ ಸಂಘಟನೆಯ ಕಾರ್ಯಕರ್ತೆಯೊಬ್ಬರು ವಿಡಿಯೊ ಸಂದೇಶದಲ್ಲಿ ವಿನಂತಿಸಿದ್ದಾರೆ.

Published On - 1:03 pm, Tue, 16 August 22

ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ