AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಂತ್ರಿಕ ದೋಷ ಪರಿಹಾರ: ನಮ್ಮ ಮೆಟ್ರೋ ಸೇವೆ ಪುನರಾರಂಭ

ಒಂದು ರೈಲ್ವೆ ಹಳಿಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರೂ ಮತ್ತೊಂದು ಟ್ರಾಕ್​ನಲ್ಲಿ ಸಂಚಾರ ಯಥಾಸ್ಥಿತಿಯಲ್ಲಿತ್ತು.

ತಾಂತ್ರಿಕ ದೋಷ ಪರಿಹಾರ: ನಮ್ಮ ಮೆಟ್ರೋ ಸೇವೆ ಪುನರಾರಂಭ
ಮೆಟ್ರೋ ರೈಲು (ಸಂಗ್ರಹ ಚಿತ್ರ)
TV9 Web
| Edited By: |

Updated on:Sep 15, 2022 | 1:07 PM

Share

ಬೆಂಗಳೂರು: ಮೈಸೂರು ರಸ್ತೆ-ಕೆಂಗೇರಿ ಮಾರ್ಗದಲ್ಲಿ (Bengaluru Metro) ಉಂಟಾಗಿದ್ದ ತಾಂತ್ರಿಕ ಅಡಚಣೆ ನಿವಾರಣೆಯಾಗಿದ್ದು ನಮ್ಮ ಮೆಟ್ರೋ ರೈಲುಗಳ ಸಂಚಾರ ಯಥಾಸ್ಥಿತಿಗೆ ಮರಳಿದೆ. ಬೆಳಿಗ್ಗೆ 8.30ರಿಂದ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿತ್ತು. ಮಧ್ಯಾಹ್ನ 12 ಗಂಟೆ ಬಳಿಕ ಮತ್ತೆ ರೈಲುಗಳ ಸಂಚಾರ ಆರಂಭವಾಯಿತು. ಬೆಳಿಗ್ಗೆ ಸಂಚಾರ ದಟ್ಟಣೆ ಹೆಚ್ಚಾಗಿರುವ ಸಂದರ್ಭದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಒಂದೇ ಟ್ರ್ಯಾಕ್​ನಲ್ಲಿ 25ರಿಂದ 30 ನಿಮಿಷಕ್ಕೆ ಒಂದು ರೈಲು ಸಂಚರಿಸುತ್ತಿತ್ತು. ರೈಲುಗಳಿಗಾಗಿ ಕಾಯುತ್ತಿದ್ದ ಪ್ರಯಾಣಿಕರು ಸಮಯಕ್ಕೆ ಸರಿಯಾಗಿ ಕಚೇರಿಗಳಿಗೆ ತೆರಳಲು ಸಾಧ್ಯವಾಗದೆ ಪರದಾಡಿದರು.

ತಾಂತ್ರಿಕ ಸಮಸ್ಯೆಯಿಂದ ಮೆಟ್ರೋ ರೈಲುಗಳ ಸಂಚಾರದಲ್ಲಿ ಸಮಸ್ಯೆಯಾಗಬಹುದು ಎಂದು ‘ನಮ್ಮ ಮೆಟ್ರೋ’ ಗುರುವಾರ ಮುಂಜಾನೆಯೇ ಟ್ವೀಟ್ ಮಾಡಿತ್ತು. ಕೆಂಗೇರಿ ನಿಲ್ದಾಣದಿಂದ ಮೈಸೂರು ಮಾರ್ಗದ ನಿಲ್ದಾಣದವರೆಗೆ ರೈಲುಗಳು ಏಕಮಾರ್ಗದಲ್ಲಿ, ಪ್ರತಿ 25ರಿಂದ 30 ನಿಮಿಷಕ್ಕೆ ಒಂದು ರೈಲಿನಂತೆ ಆಗಮಿಸುತ್ತವೆ’ ಎಂದು ಟ್ವೀಟ್ ಹೇಳಿತ್ತು.

ಒಂದು ರೈಲ್ವೆ ಹಳಿಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರೂ ಮತ್ತೊಂದು ಟ್ರಾಕ್​ನಲ್ಲಿ ಸಂಚಾರ ಯಥಾಸ್ಥಿತಿಯಲ್ಲಿತ್ತು. ಪ್ರತಿ 25 ಅಥವಾ 30 ನಿಮಿಷಗಳಿಗೊಂದರಂತೆ ಕೆಂಗೇರಿಯಿಂದ ಮೈಸೂರು ರಸ್ತೆ ನಿಲ್ದಾಣ ಹಾಗೂ ಮೈಸೂರು ರಸ್ತೆ ನಿಲ್ದಾಣದಿಂದ ಕೆಂಗೇರಿಯವರೆಗೆ ರೈಲು ಓಡಿಸಲಾಗುತ್ತಿತ್ತು.

5 ದಿನದ ಮೆಟ್ರೋ ಪಾಸ್​

ಈ ಹಿಂದೆ 1 ಹಾಗೂ 3 ದಿನದ ಮೆಟ್ರೋ ಪಾಸ್​ಗಳನ್ನು ನಿಗಮವು ಜಾರಿಗೆ ತರಲಾಗಿತ್ತು. ಇದರ ಜೊತೆ ನಿಗಮವು ದಿನಾಂಕ ಮೇ 23, 2022 ರಿಂದ ಜಾರಿಗೆ ಬರುವಂತೆ 5 ದಿನದ ಪಾಸ್​ ನೀಡುತ್ತಿದೆ. 5 ದಿನದ ಪಾಸ್ ಬೆಲೆ ₹ 550. ಮರುಪಾವತಿಸಬಹುದಾದ ಸ್ಮಾರ್ಟ್​ ಕಾರ್ಡ್​ ಭದ್ರತಾ ಠೇವಣಿ 50 ಇರುತ್ತದೆ ಎಂದು ನಿಗಮವು ಹೇಳಿದೆ.

Published On - 1:05 pm, Thu, 15 September 22

Follow Us
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ