AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಂತ್ರಿಕ ದೋಷ ಪರಿಹಾರ: ನಮ್ಮ ಮೆಟ್ರೋ ಸೇವೆ ಪುನರಾರಂಭ

ಒಂದು ರೈಲ್ವೆ ಹಳಿಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರೂ ಮತ್ತೊಂದು ಟ್ರಾಕ್​ನಲ್ಲಿ ಸಂಚಾರ ಯಥಾಸ್ಥಿತಿಯಲ್ಲಿತ್ತು.

ತಾಂತ್ರಿಕ ದೋಷ ಪರಿಹಾರ: ನಮ್ಮ ಮೆಟ್ರೋ ಸೇವೆ ಪುನರಾರಂಭ
ಮೆಟ್ರೋ ರೈಲು (ಸಂಗ್ರಹ ಚಿತ್ರ)
TV9 Web
| Edited By: |

Updated on:Sep 15, 2022 | 1:07 PM

Share

ಬೆಂಗಳೂರು: ಮೈಸೂರು ರಸ್ತೆ-ಕೆಂಗೇರಿ ಮಾರ್ಗದಲ್ಲಿ (Bengaluru Metro) ಉಂಟಾಗಿದ್ದ ತಾಂತ್ರಿಕ ಅಡಚಣೆ ನಿವಾರಣೆಯಾಗಿದ್ದು ನಮ್ಮ ಮೆಟ್ರೋ ರೈಲುಗಳ ಸಂಚಾರ ಯಥಾಸ್ಥಿತಿಗೆ ಮರಳಿದೆ. ಬೆಳಿಗ್ಗೆ 8.30ರಿಂದ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿತ್ತು. ಮಧ್ಯಾಹ್ನ 12 ಗಂಟೆ ಬಳಿಕ ಮತ್ತೆ ರೈಲುಗಳ ಸಂಚಾರ ಆರಂಭವಾಯಿತು. ಬೆಳಿಗ್ಗೆ ಸಂಚಾರ ದಟ್ಟಣೆ ಹೆಚ್ಚಾಗಿರುವ ಸಂದರ್ಭದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಒಂದೇ ಟ್ರ್ಯಾಕ್​ನಲ್ಲಿ 25ರಿಂದ 30 ನಿಮಿಷಕ್ಕೆ ಒಂದು ರೈಲು ಸಂಚರಿಸುತ್ತಿತ್ತು. ರೈಲುಗಳಿಗಾಗಿ ಕಾಯುತ್ತಿದ್ದ ಪ್ರಯಾಣಿಕರು ಸಮಯಕ್ಕೆ ಸರಿಯಾಗಿ ಕಚೇರಿಗಳಿಗೆ ತೆರಳಲು ಸಾಧ್ಯವಾಗದೆ ಪರದಾಡಿದರು.

ತಾಂತ್ರಿಕ ಸಮಸ್ಯೆಯಿಂದ ಮೆಟ್ರೋ ರೈಲುಗಳ ಸಂಚಾರದಲ್ಲಿ ಸಮಸ್ಯೆಯಾಗಬಹುದು ಎಂದು ‘ನಮ್ಮ ಮೆಟ್ರೋ’ ಗುರುವಾರ ಮುಂಜಾನೆಯೇ ಟ್ವೀಟ್ ಮಾಡಿತ್ತು. ಕೆಂಗೇರಿ ನಿಲ್ದಾಣದಿಂದ ಮೈಸೂರು ಮಾರ್ಗದ ನಿಲ್ದಾಣದವರೆಗೆ ರೈಲುಗಳು ಏಕಮಾರ್ಗದಲ್ಲಿ, ಪ್ರತಿ 25ರಿಂದ 30 ನಿಮಿಷಕ್ಕೆ ಒಂದು ರೈಲಿನಂತೆ ಆಗಮಿಸುತ್ತವೆ’ ಎಂದು ಟ್ವೀಟ್ ಹೇಳಿತ್ತು.

ಒಂದು ರೈಲ್ವೆ ಹಳಿಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರೂ ಮತ್ತೊಂದು ಟ್ರಾಕ್​ನಲ್ಲಿ ಸಂಚಾರ ಯಥಾಸ್ಥಿತಿಯಲ್ಲಿತ್ತು. ಪ್ರತಿ 25 ಅಥವಾ 30 ನಿಮಿಷಗಳಿಗೊಂದರಂತೆ ಕೆಂಗೇರಿಯಿಂದ ಮೈಸೂರು ರಸ್ತೆ ನಿಲ್ದಾಣ ಹಾಗೂ ಮೈಸೂರು ರಸ್ತೆ ನಿಲ್ದಾಣದಿಂದ ಕೆಂಗೇರಿಯವರೆಗೆ ರೈಲು ಓಡಿಸಲಾಗುತ್ತಿತ್ತು.

5 ದಿನದ ಮೆಟ್ರೋ ಪಾಸ್​

ಈ ಹಿಂದೆ 1 ಹಾಗೂ 3 ದಿನದ ಮೆಟ್ರೋ ಪಾಸ್​ಗಳನ್ನು ನಿಗಮವು ಜಾರಿಗೆ ತರಲಾಗಿತ್ತು. ಇದರ ಜೊತೆ ನಿಗಮವು ದಿನಾಂಕ ಮೇ 23, 2022 ರಿಂದ ಜಾರಿಗೆ ಬರುವಂತೆ 5 ದಿನದ ಪಾಸ್​ ನೀಡುತ್ತಿದೆ. 5 ದಿನದ ಪಾಸ್ ಬೆಲೆ ₹ 550. ಮರುಪಾವತಿಸಬಹುದಾದ ಸ್ಮಾರ್ಟ್​ ಕಾರ್ಡ್​ ಭದ್ರತಾ ಠೇವಣಿ 50 ಇರುತ್ತದೆ ಎಂದು ನಿಗಮವು ಹೇಳಿದೆ.

Published On - 1:05 pm, Thu, 15 September 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್