AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಂತ್ರಿಕ ದೋಷ ಪರಿಹಾರ: ನಮ್ಮ ಮೆಟ್ರೋ ಸೇವೆ ಪುನರಾರಂಭ

ಒಂದು ರೈಲ್ವೆ ಹಳಿಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರೂ ಮತ್ತೊಂದು ಟ್ರಾಕ್​ನಲ್ಲಿ ಸಂಚಾರ ಯಥಾಸ್ಥಿತಿಯಲ್ಲಿತ್ತು.

ತಾಂತ್ರಿಕ ದೋಷ ಪರಿಹಾರ: ನಮ್ಮ ಮೆಟ್ರೋ ಸೇವೆ ಪುನರಾರಂಭ
ಮೆಟ್ರೋ ರೈಲು (ಸಂಗ್ರಹ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Sep 15, 2022 | 1:07 PM

ಬೆಂಗಳೂರು: ಮೈಸೂರು ರಸ್ತೆ-ಕೆಂಗೇರಿ ಮಾರ್ಗದಲ್ಲಿ (Bengaluru Metro) ಉಂಟಾಗಿದ್ದ ತಾಂತ್ರಿಕ ಅಡಚಣೆ ನಿವಾರಣೆಯಾಗಿದ್ದು ನಮ್ಮ ಮೆಟ್ರೋ ರೈಲುಗಳ ಸಂಚಾರ ಯಥಾಸ್ಥಿತಿಗೆ ಮರಳಿದೆ. ಬೆಳಿಗ್ಗೆ 8.30ರಿಂದ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿತ್ತು. ಮಧ್ಯಾಹ್ನ 12 ಗಂಟೆ ಬಳಿಕ ಮತ್ತೆ ರೈಲುಗಳ ಸಂಚಾರ ಆರಂಭವಾಯಿತು. ಬೆಳಿಗ್ಗೆ ಸಂಚಾರ ದಟ್ಟಣೆ ಹೆಚ್ಚಾಗಿರುವ ಸಂದರ್ಭದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಒಂದೇ ಟ್ರ್ಯಾಕ್​ನಲ್ಲಿ 25ರಿಂದ 30 ನಿಮಿಷಕ್ಕೆ ಒಂದು ರೈಲು ಸಂಚರಿಸುತ್ತಿತ್ತು. ರೈಲುಗಳಿಗಾಗಿ ಕಾಯುತ್ತಿದ್ದ ಪ್ರಯಾಣಿಕರು ಸಮಯಕ್ಕೆ ಸರಿಯಾಗಿ ಕಚೇರಿಗಳಿಗೆ ತೆರಳಲು ಸಾಧ್ಯವಾಗದೆ ಪರದಾಡಿದರು.

ತಾಂತ್ರಿಕ ಸಮಸ್ಯೆಯಿಂದ ಮೆಟ್ರೋ ರೈಲುಗಳ ಸಂಚಾರದಲ್ಲಿ ಸಮಸ್ಯೆಯಾಗಬಹುದು ಎಂದು ‘ನಮ್ಮ ಮೆಟ್ರೋ’ ಗುರುವಾರ ಮುಂಜಾನೆಯೇ ಟ್ವೀಟ್ ಮಾಡಿತ್ತು. ಕೆಂಗೇರಿ ನಿಲ್ದಾಣದಿಂದ ಮೈಸೂರು ಮಾರ್ಗದ ನಿಲ್ದಾಣದವರೆಗೆ ರೈಲುಗಳು ಏಕಮಾರ್ಗದಲ್ಲಿ, ಪ್ರತಿ 25ರಿಂದ 30 ನಿಮಿಷಕ್ಕೆ ಒಂದು ರೈಲಿನಂತೆ ಆಗಮಿಸುತ್ತವೆ’ ಎಂದು ಟ್ವೀಟ್ ಹೇಳಿತ್ತು.

ಒಂದು ರೈಲ್ವೆ ಹಳಿಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರೂ ಮತ್ತೊಂದು ಟ್ರಾಕ್​ನಲ್ಲಿ ಸಂಚಾರ ಯಥಾಸ್ಥಿತಿಯಲ್ಲಿತ್ತು. ಪ್ರತಿ 25 ಅಥವಾ 30 ನಿಮಿಷಗಳಿಗೊಂದರಂತೆ ಕೆಂಗೇರಿಯಿಂದ ಮೈಸೂರು ರಸ್ತೆ ನಿಲ್ದಾಣ ಹಾಗೂ ಮೈಸೂರು ರಸ್ತೆ ನಿಲ್ದಾಣದಿಂದ ಕೆಂಗೇರಿಯವರೆಗೆ ರೈಲು ಓಡಿಸಲಾಗುತ್ತಿತ್ತು.

5 ದಿನದ ಮೆಟ್ರೋ ಪಾಸ್​

ಈ ಹಿಂದೆ 1 ಹಾಗೂ 3 ದಿನದ ಮೆಟ್ರೋ ಪಾಸ್​ಗಳನ್ನು ನಿಗಮವು ಜಾರಿಗೆ ತರಲಾಗಿತ್ತು. ಇದರ ಜೊತೆ ನಿಗಮವು ದಿನಾಂಕ ಮೇ 23, 2022 ರಿಂದ ಜಾರಿಗೆ ಬರುವಂತೆ 5 ದಿನದ ಪಾಸ್​ ನೀಡುತ್ತಿದೆ. 5 ದಿನದ ಪಾಸ್ ಬೆಲೆ ₹ 550. ಮರುಪಾವತಿಸಬಹುದಾದ ಸ್ಮಾರ್ಟ್​ ಕಾರ್ಡ್​ ಭದ್ರತಾ ಠೇವಣಿ 50 ಇರುತ್ತದೆ ಎಂದು ನಿಗಮವು ಹೇಳಿದೆ.

Published On - 1:05 pm, Thu, 15 September 22

ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ