AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಸಂದ್ರ-ಮಾದಾವರ ಮೆಟ್ರೋ ಸಂಬಂಧ ಡಿಕೆಶಿ, ಕೇಂದ್ರ ಸಚಿವರಿಗೆ ತೇಜಸ್ವಿ ಸೂರ್ಯ ಪತ್ರ

ತುಮಕೂರು ಹೆದ್ದಾರಿಯಲ್ಲಿನ ಜನದಟ್ಟಣೆಯನ್ನು ನಿವಾರಿಸುವ ಹಿನ್ನಲೆ ಮಾದಾವರ ಮೆಟ್ರೋ ಮಾರ್ಗವನ್ನು ಶೀಘ್ರವಾಗಿ ತೆರೆಯಲು ನಿಮ್ಮ ಅನುಮೋದನೆಯನ್ನು ನೀಡುವಂತೆ ಕೋರಿ ಸಂಸದ ತೇಜಸ್ವಿ ಸೂರ್ಯ ಅವರು ಕೇಂದ್ರ ಮತ್ತು ರಾಜ್ಯ ‌ಸರ್ಕಾರದ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ನಾಗಸಂದ್ರ-ಮಾದಾವರ ಮೆಟ್ರೋ ಸಂಬಂಧ ಡಿಕೆಶಿ, ಕೇಂದ್ರ ಸಚಿವರಿಗೆ ತೇಜಸ್ವಿ ಸೂರ್ಯ ಪತ್ರ
ನಾಗಸಂದ್ರ-ಮಾದಾವರ ಮೆಟ್ರೋ ಸಂಬಂಧ ಡಿಕೆಶಿ, ಕೇಂದ್ರ ಸಚಿವರಿಗೆ ತೇಜಸ್ವಿ ಸೂರ್ಯ ಪತ್ರ
Kiran Surya
| Edited By: |

Updated on: Oct 15, 2024 | 5:11 PM

Share

ಬೆಂಗಳೂರು, ಅ.15: ಬಹು ನಿರೀಕ್ಷಿತ ನಾಗಸಂದ್ರದಿಂದ ಮಾದಾವರವರೆಗಿನ (Nagasandra- Madavara Metro) ನಮ್ಮ ಮೆಟ್ರೋ ರೈಲು ಸಂಚಾರ ಸಂಪೂರ್ಣ ಸಿದ್ಧವಾಗಿದೆ. ಈ ಹಿನ್ನಲೆ ಮಾದಾವರ ಮೆಟ್ರೋ ತೆರೆಯಲು ಅನುಮತಿ ನೀಡುವಂತೆ ಸಂಸದ ತೇಜಸ್ವಿ ಸೂರ್ಯ ಅವರು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಖಟ್ಟರ್ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲೇನಿದೆ?

ಬೆಂಗಳೂರು ಮೆಟ್ರೋದ ಹಸಿರು ಮಾರ್ಗದ ನಾಗಸಂದ್ರ-ಮಾದಾವರ ವಿಸ್ತರಣೆಗಾಗಿ, ಇತ್ತೀಚೆಗೆ ಮೆಟ್ರೋ ರೈಲ್ವೆ ಸುರಕ್ಷತೆ (ದಕ್ಷಿಣ ವೃತ್ತ) ಆಯುಕ್ತರಿಂದ, BMRCL ಶಾಸನಬದ್ಧ ಸುರಕ್ಷತಾ ಅನುಮತಿಯನ್ನು ಪಡೆದಿದೆ. ಮಂಜುನಾಥ್ ನಗರ, ಚಿಕ್ಕಬಿದರಕಲ್ಲು ಮತ್ತು ಮಾದಾವರ ಮೂರು ನಿಲ್ದಾಣಗಳನ್ನು ಒಳಗೊಂಡಿರುವ 3.14 ಕಿಮೀ ಮಾರ್ಗವು, ಬೆಂಗಳೂರು ಮೆಟ್ರೋ ಜಾಲವನ್ನು 77 ಕಿಮೀಗೆ ಹೆಚ್ಚಿಸಲಿದೆ. ಇದರಿಂದ ತುಮಕೂರು ಹೆದ್ದಾರಿಯಲ್ಲಿನ ಜನದಟ್ಟಣೆಯನ್ನು ನಿವಾರಿಸುತ್ತದೆ. ಈ ಮಾರ್ಗವನ್ನು ಶೀಘ್ರವಾಗಿ ತೆರೆಯಲು ನಿಮ್ಮ ಅನುಮೋದನೆಯನ್ನು ನೀಡುವಂತೆ ಕೋರಿ ಕೇಂದ್ರ ಮತ್ತು ರಾಜ್ಯ ‌ಸರ್ಕಾರದ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಇದನ್ನೂ ಓದಿ:ನಾಗಸಂದ್ರ-ಮಾದಾವರ ಮೆಟ್ರೋ ಮಾರ್ಗ ಉದ್ಘಾಟನಾ ದಿನಾಂಕ ನಿಗದಿಗೆ ಸರ್ಕಾರಕ್ಕೆ ಪತ್ರ ಬರೆದ BMRCL

ಇನ್ನು ನಮ್ಮ ಮೆಟ್ರೋದ ಗ್ರೀನ್ ಲೈನ್ ವಿಸ್ತರಣೆಯು ಮುಂದಿನ ಕೆಲವು ದಿನಗಳಲ್ಲಿ ತೆರೆಯುವ ಸಾಧ್ಯತೆಯಿದ್ದು,  ಬಿಎಂಆರ್‌ಸಿಎಲ್ 3.14 ಕಿ.ಮೀ ಉದ್ದದ ಮಾರ್ಗವನ್ನು ಉದ್ಘಾಟಿಸಲು ಸರ್ಕಾರದ ಹಿರಿಯ ಸಚಿವರಿಂದ ದಿನಾಂಕವನ್ನು ಕೇಳಿದೆ. ತುಮಕೂರು ರಸ್ತೆಯ ಹಸಿರು ಮಾರ್ಗದಲ್ಲಿ ಇದೇ ತಿಂಗಳಿನಲ್ಲಿ ನಮ್ಮ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ. ಮೆಟ್ರೋ ರೈಲು ಸುರಕ್ಷತಾ ಆಯುಕ್ತರು ಮೆಟ್ರೋ ರೈಲು ವಾಣಿಜ್ಯ ಸಂಚಾರಕ್ಕೆ ಒಪ್ಪಿಗೆ ಕೊಟ್ಟಿದ್ದಾರೆ. ಉದ್ಘಾಟನಾ ದಿನಾಂಕವನ್ನು ಕರ್ನಾಟಕ ಸರ್ಕಾರ ನಿಗದಿ ಮಾಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್