AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಮಳೆಯಿಂದ ಹಾನಿಯಾದ ಮನೆಗಳಿಗೆ 10 ಸಾವಿರ ಪರಿಹಾರ ಸಿಎಂ ಬೊಮ್ಮಾಯಿ ಘೋಷಣೆ

ರಾಜ್ಯದ 13 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಇದೆ. ಅದರಲ್ಲೂ 13 ತಾಲೂಕುಗಳಲ್ಲಿ ಮಳೆಯಿಂದ ಹೆಚ್ಚು ಹಾನಿ ಆಗಿದೆ. ಭೂಕುಸಿತ ಪ್ರದೇಶಗಳಲ್ಲಿ ಜನರ ಸ್ಥಳಾಂತರಕ್ಕೆ ಸೂಚಿಸಿದ್ದೇವೆ. ರಸ್ತೆ ಹಾನಿಯ ಬಗ್ಗೆಯೂ ಕೂಡಲೇ ವರದಿ ನೀಡಲು ಸೂಚಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

Karnataka Rains: ಮಳೆಯಿಂದ ಹಾನಿಯಾದ ಮನೆಗಳಿಗೆ 10 ಸಾವಿರ ಪರಿಹಾರ ಸಿಎಂ ಬೊಮ್ಮಾಯಿ ಘೋಷಣೆ
ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿಗಳು
TV9 Web
| Edited By: |

Updated on:Jul 08, 2022 | 6:37 PM

Share

ಬೆಂಗಳೂರು: ರಾಜ್ಯದಲ್ಲಿ ಹೆಚ್ಚಾಗಿರುವ ಮಳೆ(Karnataka Rain), ಪ್ರಕೃತಿ ವಿಕೋಪ ಹಿನ್ನೆಲೆ ಮಳೆ ಹಾನಿ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ನೇತೃತ್ವದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆದಿದ್ದು ಮಳೆಯಿಂದ ಹಾನಿಯಾದ ಮನೆಗಳಿಗೆ 10 ಸಾವಿರ ಪರಿಹಾರ ನೀಡಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವರು, 13 ಡಿಸಿಗಳು, ಜಿ.ಪಂ ಸಿಇಒ ಇತರೆ ಅಧಿಕಾರಿಗಳ ಜೊತೆ ಸಭೆ ನಡೆಸಿದ್ರು. 13 ಜಿಲ್ಲೆಯಲ್ಲಿನ ಪ್ರವಾಹ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದ್ರು. ವಿಡಿಯೋ ಕಾನ್ಫರೆನ್ಸ್ ಬಳಿಕ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ಮಳೆಯಿಂದ ಜೂನ್‌ 1ರಿಂದ 12 ಜನ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಮಳೆಯಿದ 62 ಜಾನುವಾರು ಮೃತಪಟ್ಟಿವೆ. ಮಳೆಯಿಂದ ಹಾನಿಯಾದ ಮನೆಗಳಿಗೆ 10 ಸಾವಿರ ಪರಿಹಾರ ನೀಡಲಾಗುವುದು. ಅಧಿಕಾರಿಗಳು ವರದಿ ನೀಡಿದ ಬಳಿಕ ಮನೆ ಹಾನಿಗೆ ತಕ್ಕಂತೆ ಮುಂದೆ ಹೆಚ್ಚುವರಿ ಪರಿಹಾರ ನೀಡುತ್ತೇವೆ. ಕಳೆದ 3-4 ದಿನಗಳಿಂದ ವಾಡಿಕೆಗಿಂತ ಅತಿ ಹೆಚ್ಚು ಮಳೆ ಆಗಿದೆ.

ರಾಜ್ಯದ 13 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಇದೆ. ಅದರಲ್ಲೂ 13 ತಾಲೂಕುಗಳಲ್ಲಿ ಮಳೆಯಿಂದ ಹೆಚ್ಚು ಹಾನಿ ಆಗಿದೆ. ಭೂಕುಸಿತ ಪ್ರದೇಶಗಳಲ್ಲಿ ಜನರ ಸ್ಥಳಾಂತರಕ್ಕೆ ಸೂಚಿಸಿದ್ದೇವೆ. ರಸ್ತೆ ಹಾನಿಯ ಬಗ್ಗೆಯೂ ಕೂಡಲೇ ವರದಿ ನೀಡಲು ಸೂಚಿಸಲಾಗಿದೆ. ಗ್ರಾಮ ಮಟ್ಟದಲ್ಲಿ ಟಾಸ್ಕ್‌ ಫೋರ್ಸ್‌ ರಚಿಸಲು ಸೂಚಿಸಿದ್ದೇವೆ. ಮತ್ತಷ್ಟು ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ತಿಳಿಸಿದೆ. ಡ್ಯಾಂಗಳಿಂದ ನೀರು ಬಿಡುಗಡೆ ಮುನ್ನ ತಿಳಿಸುವಂತೆ ನೆರೆಯ ಮಹಾರಾಷ್ಟ್ರದ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ ಎಂದರು.

ಮಳೆ ಪೀಡಿತ ಜಿಲ್ಲೆಗಳಲ್ಲಿ ಟೀಮ್ ಗಳನ್ನು ಸದುಪಯೋಗ ಪಡಿಸಿಕೊಳ್ಳಲು ಸೂಚಿಸಲಾಗಿದೆ. ಬಿದ್ದಿರೋ ಎಲೆಕ್ಟ್ರಿಕ್ ಪೊಲ್ಸ್ ಗಳನ್ನ ರಿಸ್ಟೋರ್ ಮಾಡಬೇಕು. ಮಳೆ ನಿಂತ ಮೇಲೆ ಬೆಳೆ ಹಾನಿ ಕೊಡಲು ಸೂಚಿಸಿದ್ದೇನೆ. ಕಡಲ ಕೊರತೆಯನ್ನ ಟೆಕ್ನಾಲಜಿ ಮೂಲಕ ಪರ್ಮೆನೆಂಟ್ ಸಲೂಷನ್ ಮಾಡಬೇಕು ಎಂಬ ಚಿಂತನೆ ಇದೆ ಎಂದರು.

ಮಳೆಹಾನಿ‌ ಪರಿಹಾರಕ್ಕೆ 55 ಕೋಟಿ ರೂ ಹಣ ಬಿಡುಗಡೆ ಮಾಡಿದ ಸರ್ಕಾರ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಹಿನ್ನೆಲೆ ಮಳೆಹಾನಿ‌ ಪರಿಹಾರಕ್ಕೆ ಸರ್ಕಾರ ಹಣ ಬಿಡುಗಡೆ ಮಾಡಿದೆ. ಸರ್ಕಾರದಿಂದ ಹೆಚ್ಚುವರಿಯಾಗಿ 55 ಕೋಟಿ ಹಣ ರಿಲೀಸ್‌ ಮಾಡಲಾಗಿದೆ. ಡಿಸಿಗಳ ಖಾತೆಗೆ ಕಂದಾಯ ಇಲಾಖೆಯಿಂದ ಹಣ ರಿಲೀಸ್‌ ಮಾಡಲಾಗಿದ್ದು ಈಗಾಗಲೇ ಡಿಸಿಗಳ ಖಾತೆಯಲ್ಲಿ 680.59 ಕೋಟಿ ರೂ. ಹಣ ಜಮೆಯಾಗಿದೆ.

Published On - 6:35 pm, Fri, 8 July 22

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು