AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನಗಳಿಗೆ ‘ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್’ ಅಳವಡಿಕೆ ಟೆಂಡರ್; ಸೆಪ್ಟೆಂಬರ್ 19ಕ್ಕೆ ರಿಟ್ ಅರ್ಜಿ ವಿಚಾರಣೆ

ರಾಜ್ಯದಲ್ಲಿ ಮಾರ್ಚ್ 3, 2019ರ ಬಳಿಕ ರಸ್ತೆಗೆ ಇಳಿಯುವ ಹೊಸ ವಾಹನಗಳಿಗೆ ಎಚ್​ಎಸ್​ಆರ್​ಪಿ ಸಂಖ್ಯೆಯನ್ನು ಆರಂಭದಲ್ಲಿಯೇ ಅಳವಡಿಸುವ ಜೊತೆಗೆ, ಹಾಲೊಗ್ರಾಂ ಜೊತೆಗೆ ವಿಶಿಷ್ಟ ಗುರುತು ಸಂಖ್ಯೆಯನ್ನು ಸಾರಿಗೆ ಇಲಾಖೆ ನೀಡುತ್ತಿತ್ತು. ಅದಕ್ಕಿಂತ ಪೂರ್ವದಲ್ಲಿ ನೋಂದಾಯಿಸಲಾಗಿರುವ ಎಲ್ಲ ಮಾದರಿಯ ವಾಹನಗಳಿಗೆ ‘ಅತಿ ಸುರಕ್ಷಿತ ನೋಂದಣಿ ಫಲಕ'ಗಳ (ಎಚ್‌ಎಸ್‌ಆರ್‌ಪಿ) ಅಳವಡಿಕೆ ಕಡ್ಡಾಯಗೊಳಿಸಲಾಗಿದೆ.

ವಾಹನಗಳಿಗೆ ‘ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್’ ಅಳವಡಿಕೆ ಟೆಂಡರ್; ಸೆಪ್ಟೆಂಬರ್ 19ಕ್ಕೆ ರಿಟ್ ಅರ್ಜಿ ವಿಚಾರಣೆ
ವಾಹನಗಳಿಗೆ ‘ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್’
Ramesha M
| Edited By: |

Updated on: Sep 12, 2023 | 7:07 PM

Share
ಬೆಂಗಳೂರು, ಸೆ.12: ರಾಜ್ಯ ಸರ್ಕಾರದ ಆಗಸ್ಟ್​.17ರ ಅಧಿಸೂಚನೆ ಪ್ರಶ್ನಿಸಿ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ (HSRP Number Plate) ಉತ್ಪಾದಕರ ಸಂಘದ ರಿಟ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಸೆಪ್ಟೆಂಬರ್ 19ಕ್ಕೆ ನಿಗದಿಪಡಿಸಿದೆ. ಇನ್ನು ಇದರಲ್ಲಿ ಸರ್ಕಾರದ ಅಧಿಸೂಚನೆಯಿಂದ ಪ್ರಭಾವಿ ಕಂಪನಿಗಳಿಗೆ ಮಾತ್ರ ಅನುಕೂಲವೆಂದು ಆರೋಪಿಸಿ, ರಾಜ್ಯ ಸರ್ಕಾರ ಹೊರಡಿಸಿದ‌ ಅಧಿಸೂಚನೆಗೆ ತಡೆ ನೀಡುವಂತೆ ಮನವಿ ಮಾಡಲಾಗಿತ್ತು.
ಹೌದು, ರಾಜ್ಯದಲ್ಲಿ ಮಾರ್ಚ್ 3, 2019ರ ಬಳಿಕ ರಸ್ತೆಗೆ ಇಳಿಯುವ ಹೊಸ ವಾಹನಗಳಿಗೆ ಎಚ್​ಎಸ್​ಆರ್​ಪಿ ಸಂಖ್ಯೆಯನ್ನು ಆರಂಭದಲ್ಲಿಯೇ ಅಳವಡಿಸುವ ಜೊತೆಗೆ, ಹಾಲೊಗ್ರಾಂ ಜೊತೆಗೆ ವಿಶಿಷ್ಟ ಗುರುತು ಸಂಖ್ಯೆಯನ್ನು ಸಾರಿಗೆ ಇಲಾಖೆ ನೀಡುತ್ತಿತ್ತು. ಇದರಲ್ಲಿ ಎಂಜಿನ್ ಸಂಖ್ಯೆ, ಛಾಸಿ ಸಂಖ್ಯೆ ಸೇರಿದಂತೆ ಎಲ್ಲ ಅಗತ್ಯ ಮಾಹಿತಿ ಇರುತ್ತಿತ್ತು. ಅದಕ್ಕಿಂತ ಪೂರ್ವದಲ್ಲಿ ನೋಂದಾಯಿಸಲಾಗಿರುವ ಎಲ್ಲ ಮಾದರಿಯ ವಾಹನಗಳಿಗೆ ‘ಅತಿ ಸುರಕ್ಷಿತ ನೋಂದಣಿ ಫಲಕ’ಗಳ (ಎಚ್‌ಎಸ್‌ಆರ್‌ಪಿ) ಅಳವಡಿಕೆ ಕಡ್ಡಾಯಗೊಳಿಸಲಾಗಿದೆ.
ಇನ್ನು ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ತಗಲುವ ವೆಚ್ಚವನ್ನು ವಾಹನ ಮಾಲೀಕರೇ ಭರಿಸಬೇಕಿದೆ. ಈಗಾಗಲೇ ರಾಜ್ಯದಲ್ಲಿ 2019ರ ಮಾರ್ಚ್‌ 31ರ ಅಂತ್ಯಕ್ಕೆ ನೋಂದಣಿಯಾಗಿರುವ ವಾಹನಗಳ ಸಂಖ್ಯೆ 2,10,73,227 ಇದೆ. ಇವುಗಳ ಪೈಕಿ ಹಾಳಾಗಿರುವ ಅಥವಾ ಗುಜರಿ ಸೇರಿರುವ ವಾಹನಗಳನ್ನು ಹೊರತುಪಡಿಸಿ 1.76 ಕೋಟಿ ವಾಹನಗಳಿಗೆ ಹೊಸ ಫಲಕ ಅಳವಡಿಸಲು ನಿರ್ಧರಿಸಲಾಗಿದೆ.

ಏನಿದು ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ?

ಈ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್​ನ್ನು ಅಲ್ಯುಮಿನಿಯಂ ಲೋಹದಿಂದ ತಯಾರಿಸಲಾಗುತ್ತದೆ. ಈಗಾಗಲೇ ಹೊಸ ವಾಹನಗಳಲ್ಲಿ ಈ ರೀತಿಯ ನಂಬರ್ ಪ್ಲೇಟ್ ಕಡ್ಡಾಯವಾಗಿ ಅಳವಡಿಸಲಾಗುತ್ತಿದೆ. ಈ ಪ್ಲೇಟ್‌ಗಳಲ್ಲಿ ನಂಬರ್‌ಗಳು ಉಬ್ಬಿಕೊಂಡಿರುವ ರೀತಿ ಅಚ್ಚಾಗಿರುತ್ತದೆ. ಈ ಪ್ಲೇಟ್‌ನ ಮೇಲ್ಭಾಗದ ಎಡ ಬದಿಯಲ್ಲಿ ನೀಲಿ ಬಣ್ಣದ ಅಶೋಕ ಚಕ್ರದ ಮುದ್ರೆಯನ್ನು ಕಾಣಬಹುದು. 20 ಮಿಲಿ ಮೀಟರ್ ಉದ್ದ ಅಗಲದ ಈ ಮುದ್ರೆಯನ್ನು ಕ್ರೋಮಿಯಂ ಲೋಹ ಬಳಸಿ ತಯಾರಿಸಲಾಗಿರುತ್ತೆ.
ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ
ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು