AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶ್ಮೀರ ವಿಮುಕ್ತಿ, ವಿಶ್ವದಲ್ಲಿ ಮುಸ್ಲಿಂ ಕಾನೂನು: ಪೊಲೀಸ್ ತನಿಖೆ ವೇಳೆ ಪತ್ತೆಯಾದ ಶಂಕಿತ ಉಗ್ರರ ಅಜೆಂಡಾ

2047ಕ್ಕೆ ವಿಶ್ವದಾದ್ಯಂತ ಮುಸ್ಲಿಂ ರಾಷ್ಟ್ರಗಳೇ ಇರಬೇಕು, ಮುಸ್ಲಿಂ ಕಾನೂನು ಎಲ್ಲೆಡೆ ಮಾನ್ಯವಾಗಬೇಕು ಎನ್ನುವ ಅಭಿಪ್ರಾಯಕ್ಕೂ ಇವರು ಬಂದಿದ್ದರು.

ಕಾಶ್ಮೀರ ವಿಮುಕ್ತಿ, ವಿಶ್ವದಲ್ಲಿ ಮುಸ್ಲಿಂ ಕಾನೂನು: ಪೊಲೀಸ್ ತನಿಖೆ ವೇಳೆ ಪತ್ತೆಯಾದ ಶಂಕಿತ ಉಗ್ರರ ಅಜೆಂಡಾ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 27, 2022 | 1:15 PM

Share

ಬೆಂಗಳೂರು: ನಗರ ಅಪರಾಧ ವಿಭಾಗ (City Crime Branch) ಪೊಲೀಸರು ಬಂಧಿಸಿರುವ ಇಬ್ಬರು ಶಂಕಿತ ಉಗ್ರರ ವಿಚಾರಣೆ ವೇಳೆ ಹಲವು ಆಘಾತಕಾರಿ ಮಾಹಿತಿ ಪತ್ತೆಯಾಗಿದೆ. ಅಲ್​ಖೈದಾ (Al Aaeda) ಉಗ್ರಗಾಮಿ ಸಂಘಟನೆಗೆ ಸೇರಲು ಇವರಿಬ್ಬರು ಏಕೆ ಮುಂದಾಗಿದ್ದರು ಎನ್ನುವ ಬಗ್ಗೆ ಪೊಲೀಸರು ಇದೀಗ ಮಾಹಿತಿ ಕಲೆಹಾಕುತ್ತಿದ್ದಾರೆ. ತನಿಖೆ ವೇಳೆ ಬೆಳಕಿಗೆ ಬಂದ ಮೂರು ಮುಖ್ಯ ಅಂಶಗಳು ಹುಬ್ಬೇರುವಂತೆ ಮಾಡಿವೆ. ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ಭಾರತ ಸರ್ಕಾರ ತೆಗೆದುಹಾಕಿದೆ. ಈ ಮೂಲಕ ಕಾಶ್ಮೀರಕ್ಕೆ ಇದ್ದ ಸವಲತ್ತು ಕಿತ್ತುಕೊಳ್ಳಲಾಗಿದೆ. ನಮ್ಮಿಂದ ಕಾಶ್ಮೀರವನ್ನು ಕಿತ್ತುಕೊಂಡವರ ವಿರುದ್ಧ ನಾವು ಹೋರಾಡಲೇಬೇಕು ಎನ್ನುವ ನಿಲುವಿಗೆ ಇವರು ಬಂದಿದ್ದರು.

ವಿಚಾರಣೆ ವೇಳೆ ಬೆಳಕಿಗೆ ಬಂದ ಮತ್ತೊಂದು ಆಘಾತಕಾರಿ ಸಂಗತಿಯೆಂದರೆ 2047ಕ್ಕೆ ವಿಶ್ವದಾದ್ಯಂತ ಮುಸ್ಲಿಂ ರಾಷ್ಟ್ರಗಳೇ ಇರಬೇಕು, ಮುಸ್ಲಿಂ ಕಾನೂನು ಎಲ್ಲೆಡೆ ಮಾನ್ಯವಾಗಬೇಕು ಎನ್ನುವ ಅಭಿಪ್ರಾಯಕ್ಕೂ ಇವರು ಬಂದಿದ್ದರು. ಈ ಆಶಯ ಈಡೇರಿಸಿಕೊಳ್ಳಲು ಹೋರಾಟ ಮಾಡಬೇಕು ಎಂದುಕೊಂಡಿದ್ದ ಅವರು ಶಸ್ತ್ರ ಕೈಗೆತ್ತಿಕೊಳ್ಳಲು ಮುಂದಾಗಿದ್ದರು.

ಇದನ್ನೂ ಓದಿ: ಶಂಕಿತ ಉಗ್ರರ ಬಳಿ ತಪ್ಪಾಗಿ ವ್ಯಾಖ್ಯಾನಿಸಿದ ಕುರಾನ್ ಪ್ರತಿ ಪತ್ತೆ: ಮೊಬೈಲ್​ ಡೇಟಾ ಡಿಕೋಡ್ ಮಾಡಲು ಪೊಲೀಸರ ಯತ್ನ

ಭಾರತದಲ್ಲಿ ಇಸ್ಲಾಂ ಧರ್ಮವು ಸಂಕಷ್ಟದಲ್ಲಿದೆ. ಇಸ್ಲಾಂ ಧರ್ಮವನ್ನು ಉಳಿಸಿಕೊಳ್ಳಲು ಹೋರಾಡಲೇಬೇಕಿದೆ. ಪವಿತ್ರ ಕುರಾನ್​ ತೋರಿಸಿರುವ ಮಾರ್ಗದ ಪ್ರಕಾರವೇ ಜಿಹಾದ್​ಗಾಗಿ ತಯಾರಾಗಬೇಕಿದೆ ಎಂದು ಶಂಕಿತರು ಅಭಿಪ್ರಾಯ ಹೊಂದಿದ್ದರು ಎಂದು ಹೇಳಲಾಗಿದೆ. ಹಲವು ಟೆಲಿಗ್ರಾಮ್ ಗ್ರೂಪ್​ಗಳನ್ನು ಶಂಕಿತ ಉಗ್ರ ಆಖ್ತರ್ ಹುಸೇನ್ ನಿರ್ವಹಿಸುತ್ತಿದ್ದ. ಆದರೆ ಈ ಪೈಕಿ ಬಹಳಷ್ಟು ಗ್ರೂಪ್​ಗಳು ಡಿಲೀಟ್ ಆಗಿದ್ದು, ಅವುಗಳಲ್ಲಿ ಹರಿದಾಡಿರಬಹುದಾದ ಸಂದೇಶಗಳನ್ನು ಪತ್ತೆ ಮಾಡಲು ಪೊಲೀಸರು ಶ್ರಮಿಸುತ್ತಿದ್ದಾರೆ.

Published On - 1:14 pm, Wed, 27 July 22

ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು
ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​