AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಬೆಂಗಳೂರು ಮೂಲದ ಉಗ್ರ ಮೊಹಮ್ಮದ್ ತಾಕೀರ್ ಬಂಧನ, ಉಗ್ರನ ನೆಟ್​ವರ್ಕ್​​ ತಿಳಿದ್ರೆ ಬೆಚ್ಚಿ ಬೀಳ್ತಿರಾ

ತಾಕೀರ್, ಪ್ರತಿಷ್ಠಿತ ಕಾಲೇಜಿನಲ್ಲಿ ವೈದ್ಯಕೀಯ ಕೋರ್ಸ್ ಮಾಡಿದ್ದ. 2020ರಲ್ಲಿ ನೇತ್ರ ವೈದ್ಯ ಅಬ್ದುರ್ ರೆಹಮಾನ್ನನ್ನು ಬೆಂಗಳೂರಿನ ಬಸವನಗುಡಿಯ ಅಪಾರ್ಟ್ಮೆಂಟ್ ಪ್ಲಾಟ್ನಲ್ಲಿ NIA ಬಂಧಿಸಿತ್ತು.

ದೆಹಲಿಯಲ್ಲಿ ಬೆಂಗಳೂರು ಮೂಲದ ಉಗ್ರ ಮೊಹಮ್ಮದ್ ತಾಕೀರ್ ಬಂಧನ, ಉಗ್ರನ ನೆಟ್​ವರ್ಕ್​​ ತಿಳಿದ್ರೆ ಬೆಚ್ಚಿ ಬೀಳ್ತಿರಾ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 26, 2021 | 9:21 AM

Share

ಬೆಂಗಳೂರು: ದೆಹಲಿಯಲ್ಲಿ ಉಗ್ರ ಮೊಹಮ್ಮದ್ ತಾಕೀರ್ ಬಂಧನ ಪ್ರಕರಣಕ್ಕೆ ಸಂಬಂಧಿಸಿ ಉಗ್ರ ತಾಕೀರ್ ಬೆಂಗಳೂರಲ್ಲಿ ತನ್ನದೇ ಜಾಲ ಸೃಷ್ಟಿಸಿಕೊಂಡಿದ್ದ ಎಂಬ ಬಗ್ಗೆ ಮಾಹಿತಿ ಪತ್ತೆಯಾಗಿದೆ. ಕಳೆದ ಒಂದು ವರ್ಷದಿಂದ ಎನ್ಐಎ ಮಾಸ್ಟರ್ ಮೈಂಡ್ ತಾಕೀರ್ನ ತಲಾಶ್ ನಡೆಸುತ್ತಿತ್ತು. ಸದ್ಯ ತಾಕೀರ್ ಬಂಧನವಾಗಿದ್ದು ಮಹತ್ವದ ಮಾಹಿತಿ ಸಿಕ್ಕಿದೆ. ಐಸಿಸ್‌ಗೆ ಸೇರುವಂತೆ ಯುವಕರನ್ನು ಪ್ರಚೋದಿಸ್ತಿದ್ದ ತಾಕೀರ್ ಬೆಂಗಳೂರಿನಲ್ಲಿ ದಂತ ವೈದ್ಯನಾಗಿ ಕೆಲಸ ಮಾಡುತ್ತಿದ್ದ.

ತಾಕೀರ್, ಪ್ರತಿಷ್ಠಿತ ಕಾಲೇಜಿನಲ್ಲಿ ವೈದ್ಯಕೀಯ ಕೋರ್ಸ್ ಮಾಡಿದ್ದ. 2020ರಲ್ಲಿ ನೇತ್ರ ವೈದ್ಯ ಅಬ್ದುರ್ ರೆಹಮಾನ್ನನ್ನು ಬೆಂಗಳೂರಿನ ಬಸವನಗುಡಿಯ ಅಪಾರ್ಟ್ಮೆಂಟ್ ಪ್ಲಾಟ್ನಲ್ಲಿ NIA ಬಂಧಿಸಿತ್ತು. ಅಬ್ದುರ್ ರೆಹಮಾನ್‌ಗೂ ಮೊಹಮ್ಮದ್ ತಾಕೀರ್‌ಗೂ ನಂಟಿತ್ತು ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ. ಮೊಹಮ್ಮದ್ ತಾಕೀರ್, ಅಬ್ದುರ್ ರೆಹಮಾನ್ ಸೇರಿ ಐವರನ್ನ ಸಿರಿಯಾಗೆ ಕಳಿಸಿದ್ದ. ವಿದ್ಯಾವಂತರನ್ನೇ ಟಾರ್ಗೆಟ್ ಮಾಡಿ ಐಸಿಸ್‌ಗೆ ಸೇರಿಸುತ್ತಿದ್ದ. ವಿಡಿಯೋ ತೋರಿಸಿ ಯುವಕರ ಬ್ರೈನ್‌ವಾಶ್ ಮಾಡ್ತಿದ್ದ. ಟೆಕ್ನಿಕಲ್ ಆಗಿ ಐಸಿಸ್‌ಗೆ ನೆರವಾಗಲು ಟೀಂ ರಚನೆಗೆ ಪ್ಲ್ಯಾನ್ ಮಾಡಿದ್ದ. ಅಲ್ಲದೆ ಉಗ್ರ ತಾಕೀರ್ ತನ್ನ ಸ್ವತಃ ಟೀಂ ಕಟ್ಟುವುದಕ್ಕೆ ಕೂಡ ಪ್ಲ್ಯಾನ್ ಮಾಡಿದ್ದ. ನೇತ್ರ ವೈದ್ಯ ಡಾ.ಅಬ್ದುರ್ ರೆಹಮಾನ್, ಅಬ್ದುಲ್ ಖಾದರ್, ಇರ್ಫಾನ್ ನಾಸೀರ್ ಸೇರಿ ಏಳು ಜನರನ್ನ ಸಂಘಟಿಸಿದ್ದ. ಸಿರಿಯಾದಲ್ಲಿ ನಡೆಯುತ್ತಿದ್ದ ಅಮೆರಿಕಾ ಮತ್ತು ಐಸಿಸ್ ವಾರ್ ವಿಡಿಯೋಗಳನ್ನ ತೋರಿಸಿ ಪ್ರಚೋದನೆ ಮಾಡ್ತಿದ್ದ. ಉಗ್ರ ತಾಕೀರ್ ದೇಶಾದ್ಯಂತ ನೆಟ್‌ವರ್ಕ್ ಬಿಲ್ಡ್ ಮಾಡಿದ್ದ. ಆ್ಯಪ್ ಅಭಿವೃದ್ಧಿ ಮಾಡಲು ಜುಬೈದ್ ಹಮೀದ್ ಸಾಥ್ ನೀಡಿದ್ದ. ಸದ್ಯ ಉಗ್ರ ತಾಕೀರ್ ಅರೆಸ್ಟ್ ಆಗಿದ್ದು ನಾಪತ್ತೆಯಾದ ಜುಬೈದ್ ಹಮೀದ್‌ಗಾಗಿ ಶೋಧಕಾರ್ಯ ನಡೆಯುತ್ತಿದೆ.

ಉಗ್ರ ತಾಕೀರ್, ಸಿಲಿಕಾನ್ ಸಿಟಿ ಬೆಂಗಳೂರಿನ ಶಿವಾಜಿನಗರದಲ್ಲಿ ವಾಸವಿದ್ದ. ಬೆಂಗಳೂರು ಟೂ ದೆಹಲಿ ಟೂ ದುಬೈ ಟೂ ಸಿರಿಯಾಗೆ ತೆರಳುವ ಯುವಕರಿಗೆ ದುಬೈನಲ್ಲಿ ನೆರವು ಸಿಗುವಂತೆ ಮಾಡ್ತಿದ್ದ. 2014 ರಲ್ಲಿ ಡಾ.ಅಬ್ದುರ್ ರೆಹಮಾನ್ ಸಿರಿಯಾಗೆ ಕಳಿಸಿದ್ದ. ಡಾ.ಅಬ್ದುರ್ ದುಬೈಗೆ ತೆರಳಿ ಅಲ್ಲಿಂದ ಗಡಿದಾಟಿ ಸಿರಿಯಾದಲ್ಲಿ 10 ದಿನ ಉಳಿದಿದ್ದ. ಡಾ.ಅಬ್ದುರ್ ರೆಹಮನ್ ಮತ್ತಿತರಿಗೆ ಪ್ರಾಥಮಿಕ ತರಬೇತಿ ಕೊಡಿಸಿದ್ದ.

ಇದನ್ನೂ ಓದಿ: SA vs WI, T20 World Cup: ಟಿ20 ವಿಶ್ವಕಪ್​ನಲ್ಲಿಂದು ಸೋತವರ ಕಾಳಗ: ಚೊಚ್ಚಲ ಗೆಲುವಿಗೆ ದಕ್ಷಿಣ ಆಫ್ರಿಕಾ-ವೆಸ್ಟ್ ಇಂಡೀಸ್ ಹೋರಾಟ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?