AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಬೆಂಗಳೂರು ಮೂಲದ ಉಗ್ರ ಮೊಹಮ್ಮದ್ ತಾಕೀರ್ ಬಂಧನ, ಉಗ್ರನ ನೆಟ್​ವರ್ಕ್​​ ತಿಳಿದ್ರೆ ಬೆಚ್ಚಿ ಬೀಳ್ತಿರಾ

ತಾಕೀರ್, ಪ್ರತಿಷ್ಠಿತ ಕಾಲೇಜಿನಲ್ಲಿ ವೈದ್ಯಕೀಯ ಕೋರ್ಸ್ ಮಾಡಿದ್ದ. 2020ರಲ್ಲಿ ನೇತ್ರ ವೈದ್ಯ ಅಬ್ದುರ್ ರೆಹಮಾನ್ನನ್ನು ಬೆಂಗಳೂರಿನ ಬಸವನಗುಡಿಯ ಅಪಾರ್ಟ್ಮೆಂಟ್ ಪ್ಲಾಟ್ನಲ್ಲಿ NIA ಬಂಧಿಸಿತ್ತು.

ದೆಹಲಿಯಲ್ಲಿ ಬೆಂಗಳೂರು ಮೂಲದ ಉಗ್ರ ಮೊಹಮ್ಮದ್ ತಾಕೀರ್ ಬಂಧನ, ಉಗ್ರನ ನೆಟ್​ವರ್ಕ್​​ ತಿಳಿದ್ರೆ ಬೆಚ್ಚಿ ಬೀಳ್ತಿರಾ
ಸಾಂಕೇತಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Oct 26, 2021 | 9:21 AM

Share

ಬೆಂಗಳೂರು: ದೆಹಲಿಯಲ್ಲಿ ಉಗ್ರ ಮೊಹಮ್ಮದ್ ತಾಕೀರ್ ಬಂಧನ ಪ್ರಕರಣಕ್ಕೆ ಸಂಬಂಧಿಸಿ ಉಗ್ರ ತಾಕೀರ್ ಬೆಂಗಳೂರಲ್ಲಿ ತನ್ನದೇ ಜಾಲ ಸೃಷ್ಟಿಸಿಕೊಂಡಿದ್ದ ಎಂಬ ಬಗ್ಗೆ ಮಾಹಿತಿ ಪತ್ತೆಯಾಗಿದೆ. ಕಳೆದ ಒಂದು ವರ್ಷದಿಂದ ಎನ್ಐಎ ಮಾಸ್ಟರ್ ಮೈಂಡ್ ತಾಕೀರ್ನ ತಲಾಶ್ ನಡೆಸುತ್ತಿತ್ತು. ಸದ್ಯ ತಾಕೀರ್ ಬಂಧನವಾಗಿದ್ದು ಮಹತ್ವದ ಮಾಹಿತಿ ಸಿಕ್ಕಿದೆ. ಐಸಿಸ್‌ಗೆ ಸೇರುವಂತೆ ಯುವಕರನ್ನು ಪ್ರಚೋದಿಸ್ತಿದ್ದ ತಾಕೀರ್ ಬೆಂಗಳೂರಿನಲ್ಲಿ ದಂತ ವೈದ್ಯನಾಗಿ ಕೆಲಸ ಮಾಡುತ್ತಿದ್ದ.

ತಾಕೀರ್, ಪ್ರತಿಷ್ಠಿತ ಕಾಲೇಜಿನಲ್ಲಿ ವೈದ್ಯಕೀಯ ಕೋರ್ಸ್ ಮಾಡಿದ್ದ. 2020ರಲ್ಲಿ ನೇತ್ರ ವೈದ್ಯ ಅಬ್ದುರ್ ರೆಹಮಾನ್ನನ್ನು ಬೆಂಗಳೂರಿನ ಬಸವನಗುಡಿಯ ಅಪಾರ್ಟ್ಮೆಂಟ್ ಪ್ಲಾಟ್ನಲ್ಲಿ NIA ಬಂಧಿಸಿತ್ತು. ಅಬ್ದುರ್ ರೆಹಮಾನ್‌ಗೂ ಮೊಹಮ್ಮದ್ ತಾಕೀರ್‌ಗೂ ನಂಟಿತ್ತು ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ. ಮೊಹಮ್ಮದ್ ತಾಕೀರ್, ಅಬ್ದುರ್ ರೆಹಮಾನ್ ಸೇರಿ ಐವರನ್ನ ಸಿರಿಯಾಗೆ ಕಳಿಸಿದ್ದ. ವಿದ್ಯಾವಂತರನ್ನೇ ಟಾರ್ಗೆಟ್ ಮಾಡಿ ಐಸಿಸ್‌ಗೆ ಸೇರಿಸುತ್ತಿದ್ದ. ವಿಡಿಯೋ ತೋರಿಸಿ ಯುವಕರ ಬ್ರೈನ್‌ವಾಶ್ ಮಾಡ್ತಿದ್ದ. ಟೆಕ್ನಿಕಲ್ ಆಗಿ ಐಸಿಸ್‌ಗೆ ನೆರವಾಗಲು ಟೀಂ ರಚನೆಗೆ ಪ್ಲ್ಯಾನ್ ಮಾಡಿದ್ದ. ಅಲ್ಲದೆ ಉಗ್ರ ತಾಕೀರ್ ತನ್ನ ಸ್ವತಃ ಟೀಂ ಕಟ್ಟುವುದಕ್ಕೆ ಕೂಡ ಪ್ಲ್ಯಾನ್ ಮಾಡಿದ್ದ. ನೇತ್ರ ವೈದ್ಯ ಡಾ.ಅಬ್ದುರ್ ರೆಹಮಾನ್, ಅಬ್ದುಲ್ ಖಾದರ್, ಇರ್ಫಾನ್ ನಾಸೀರ್ ಸೇರಿ ಏಳು ಜನರನ್ನ ಸಂಘಟಿಸಿದ್ದ. ಸಿರಿಯಾದಲ್ಲಿ ನಡೆಯುತ್ತಿದ್ದ ಅಮೆರಿಕಾ ಮತ್ತು ಐಸಿಸ್ ವಾರ್ ವಿಡಿಯೋಗಳನ್ನ ತೋರಿಸಿ ಪ್ರಚೋದನೆ ಮಾಡ್ತಿದ್ದ. ಉಗ್ರ ತಾಕೀರ್ ದೇಶಾದ್ಯಂತ ನೆಟ್‌ವರ್ಕ್ ಬಿಲ್ಡ್ ಮಾಡಿದ್ದ. ಆ್ಯಪ್ ಅಭಿವೃದ್ಧಿ ಮಾಡಲು ಜುಬೈದ್ ಹಮೀದ್ ಸಾಥ್ ನೀಡಿದ್ದ. ಸದ್ಯ ಉಗ್ರ ತಾಕೀರ್ ಅರೆಸ್ಟ್ ಆಗಿದ್ದು ನಾಪತ್ತೆಯಾದ ಜುಬೈದ್ ಹಮೀದ್‌ಗಾಗಿ ಶೋಧಕಾರ್ಯ ನಡೆಯುತ್ತಿದೆ.

ಉಗ್ರ ತಾಕೀರ್, ಸಿಲಿಕಾನ್ ಸಿಟಿ ಬೆಂಗಳೂರಿನ ಶಿವಾಜಿನಗರದಲ್ಲಿ ವಾಸವಿದ್ದ. ಬೆಂಗಳೂರು ಟೂ ದೆಹಲಿ ಟೂ ದುಬೈ ಟೂ ಸಿರಿಯಾಗೆ ತೆರಳುವ ಯುವಕರಿಗೆ ದುಬೈನಲ್ಲಿ ನೆರವು ಸಿಗುವಂತೆ ಮಾಡ್ತಿದ್ದ. 2014 ರಲ್ಲಿ ಡಾ.ಅಬ್ದುರ್ ರೆಹಮಾನ್ ಸಿರಿಯಾಗೆ ಕಳಿಸಿದ್ದ. ಡಾ.ಅಬ್ದುರ್ ದುಬೈಗೆ ತೆರಳಿ ಅಲ್ಲಿಂದ ಗಡಿದಾಟಿ ಸಿರಿಯಾದಲ್ಲಿ 10 ದಿನ ಉಳಿದಿದ್ದ. ಡಾ.ಅಬ್ದುರ್ ರೆಹಮನ್ ಮತ್ತಿತರಿಗೆ ಪ್ರಾಥಮಿಕ ತರಬೇತಿ ಕೊಡಿಸಿದ್ದ.

ಇದನ್ನೂ ಓದಿ: SA vs WI, T20 World Cup: ಟಿ20 ವಿಶ್ವಕಪ್​ನಲ್ಲಿಂದು ಸೋತವರ ಕಾಳಗ: ಚೊಚ್ಚಲ ಗೆಲುವಿಗೆ ದಕ್ಷಿಣ ಆಫ್ರಿಕಾ-ವೆಸ್ಟ್ ಇಂಡೀಸ್ ಹೋರಾಟ

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು