AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC Employees: 65 ವರ್ಷಗಳ ಪದ್ಧತಿಗೆ ಗುಡ್​ ಬೈ! ತಿಂಗಳ ಮೊದಲ ದಿನವೇ ಸಂಬಳ ಪಡೆದ ಕೆಎಸ್​ಆರ್​ಟಿಸಿ ನೌಕರರು

IAS ಅನ್ಬುಕುಮಾರ್ ವ್ಯವಸ್ಥಾಪಕ ನಿರ್ದೇಶಕರಾಗಿ (ಎಂಡಿ) ಆಗಿ ಬಂದ ಮೇಲೆ ನಿಗಮದಲ್ಲಿ 65 ವರ್ಷದಿಂದ ಇದ್ದ ನಿಯಮವೊಂದನ್ನ ಕೈಬಿಟ್ಟು ವೇತನ ನೀಡುವ ವಿಚಾರದಲ್ಲಿ ಇದ್ದ ತಾರತಮ್ಯಕ್ಕೆ ಮಂಗಳ ಹಾಡಿದ್ದಾರೆ.

KSRTC Employees: 65 ವರ್ಷಗಳ ಪದ್ಧತಿಗೆ ಗುಡ್​ ಬೈ! ತಿಂಗಳ ಮೊದಲ ದಿನವೇ ಸಂಬಳ ಪಡೆದ ಕೆಎಸ್​ಆರ್​ಟಿಸಿ ನೌಕರರು
65 ವರ್ಷಗಳ ಪದ್ಧತಿಗೆ ಗುಡ್​ ಬೈ! ತಿಂಗಳ ಮೊದಲ ದಿನವೇ ಸಂಬಳ ಪಡೆದ ಕೆಎಸ್​ಆರ್​ಟಿಸಿ ನೌಕರರು! Image Credit source: DH
TV9 Web
| Edited By: |

Updated on:Oct 01, 2022 | 7:43 PM

Share

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 65 ವರ್ಷಗಳ ಇತಿಹಾಸದಲ್ಲೇ ಈ ದಿನ ಬಹಳ ವಿಶೇಷವಾದದ್ದು ಅದರಲ್ಲೂ ಕೆಎಸ್​ಆರ್​ಟಿಸಿ ಸಿಬ್ಬಂದಿ ಬಹಳ ನೆನಪಿನಲ್ಲಿ ಇಟ್ಟುಕೊಳ್ಳುವ ದಿನ ಅಂದರೂ ಕೂಡ ತಪ್ಪಾಗೋದಿಲ್ಲ. ಯಾಕಂದ್ರೆ 65 ವರ್ಷದ ಇತಿಹಾಸದಲ್ಲೇ ತಿಂಗಳ ಮೊದಲ ದಿನವೇ ನೌಕರರಿಗೆ (KSRTC Employees) ಸಂಬಳವನ್ನ ನೀಡಿರಲಿಲ್ಲ, ಏನಿದ್ರೂ 7ನೇ ತಾರೀಕಿನಂದು ನೌಕರರ ಬ್ಯಾಂಕ್ ಖಾತೆಗೆ ಸಂಬಳ ಸೇರುತಿತ್ತು! ಆದ್ರೆ ಇದೆ ಮೊದಲ ಬಾರಿಗೆ 1ನೇ ತಾರೀಕಿ ನಂದೇ ನೌಕರರಿಗೆ ಸಂಬಳ ಕೈ ಸೇರಿದೆ. ಇದಕ್ಕೆ ಕಾರಣ KSRTC ವ್ಯವಸ್ಥಾಪಕ ನಿರ್ದೇಶಕರಾದ ವಿ. ಅನ್ಬುಕುಮಾರ್ (KSRTC MD V Anbukumar).

ಇವರು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿ (ಎಂಡಿ) ಆಗಿ ಬಂದ ಮೇಲೆ ನಿಗಮದಲ್ಲಿ 65 ವರ್ಷದಿಂದ ಇದ್ದ ನಿಯಮವೊಂದನ್ನ ಕೈಬಿಟ್ಟು ವೇತನ ನೀಡುವ ವಿಚಾರದಲ್ಲಿ ಇದ್ದ ತಾರತಮ್ಯಕ್ಕೆ ಮಂಗಳ ಹಾಡಿದ್ದಾರೆ. ನಿಗಮ ಆರಂಭದಿಂದ ಇಲ್ಲಿಯವರೆಗೆ ತಿಂಗಳ 1 ರಂದು ಅಧಿಕಾರಿ ವರ್ಗಕ್ಕೆ, 4 ರಂದು ಮೆಕಾನಿಕ್ ಗಳಿಗೆ, 7 ರಂದು ಚಾಲಕ ನಿರ್ವಾಹಕರಿಗೆ ಸಂಬಳವಾಗುತ್ತಿತ್ತು. ಈ ತಾರತಮ್ಯವನ್ನು ಹೋಗಲಾಡಿಸಿ ಸೆಪ್ಟೆಂಬರ್ ತಿಂಗಳ ಸಂಬಳವನ್ನು (Salary) ಇಂದು ಅಂದ್ರೆ ಅಕ್ಟೋಬರ್ 1 ರಂದೆ ನೌಕರರ ಖಾತೆಗೆ ಸೇರುವಂತೆ ಮಾಡಿದ್ದಾರೆ. ಎಂಡಿ ಅನ್ಬುಕುಮಾರ್ ಅವರ ನಿರ್ಧಾರದಿಂದ ಚಾಲಕ ಹಾಗೂ ನಿರ್ವಾಹಕರು ಸಂತೋಷಗೊಂಡಿದ್ದಾರೆ. ಇದರಿಂದ 36 ಸಾವಿರ ನೌಕರರಿಗೆ ದಸರಾ ಹಬ್ಬದ ವೇಳೆಗೆ ಸಂಬಳವಾದಂತಾಗಿದೆ.

ಇಬ್ಬರು IAS ಅಧಿಕಾರಿಗಳ ವರ್ಗಾವಣೆ, 8 IAS ಅಧಿಕಾರಿಗಳಿಗೆ ಸ್ಥಳ ನಿಯೋಜನೆ

ಇಬ್ಬರು IAS ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಸ್ಥಳ ನಿಯೋಜನೆಗಾಗಿ ಕಾಯುತ್ತಿದ್ದ 8 IAS ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಸ್ಥಳ ನಿಯೋಜನೆ ಮಾಡಿದೆ.

ವರ್ಗಾವಣೆ ಹೆಪ್ಸಿಬಾ ರಾಣಿ ಕೊರ್ಲಪಾಟಿ- ಜಂಟಿ ಕಾರ್ಯದರ್ಶಿ, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಮತ್ತು ಶಿಲ್ಪಾ ಶರ್ಮ-ನಿರ್ದೇಶಕಿ, ಕವಿಕಾ ಸಂಸ್ಥೆಗೆ ವರ್ಗವಾಗಿದ್ದಾರೆ.

ಸ್ಥಳ ನಿಯೋಜನೆ ಪ್ರಿಯಾಂಕಾ ಮೇರಿ ಫ್ರಾನ್ಸಿಸ್- ಆಯುಕ್ತೆ, ಪಂಚಾಯತ್ ರಾಜ್ ಇಲಾಖೆ, ಶ್ರೀವಿದ್ಯಾ ಪಿ.ಐ.-ಹೆಚ್ಚುವರಿ‌ ಕಾರ್ಯದರ್ಶಿ, ಕೌಶಲ್ಯಾಭಿವೃದ್ಧಿ ಇಲಾಖೆ, ಡಾ. ಶಿವಶಂಕರ ಎನ್.- ಇಡಿ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ರಾಜೇಶ್ ಗೌಡ ಎಂ.ಬಿ.- ಆಯುಕ್ತ ರೇಷ್ಮೆ ಇಲಾಖೆ, ಜಾನಕಿ ಕೆ.ಎಂ.- ನಿರ್ದೇಶಕಿ, ಕನ್ನಡ ಮತ್ತು ಸಂಸ್ಕೃತಿ‌ ಇಲಾಖೆ, ಝಹೀರಾ ನಸೀಮ್- ಜಂಟಿ‌ ನಿರ್ದೇಶಕಿ, ಅರ್ಬನ್ ಲ್ಯಾಂಡ್ ಟ್ರಾನ್ಸ್ ಪೋರ್ಟ್ ನಿರ್ದೇಶನಾಲಯ, ಸುಭ ಕಲ್ಯಾಣ್- ನಿರ್ದೇಶಕಿ, ಆರ್‌ಡಿ ಪಿಆರ್, ಇ-ಆಡಳಿತ, ಚಂದ್ರಶೇಖರ್ ಎನ್.- ಎಂಡಿ, ರೇಷ್ಮೆ ಮಾರುಕಟ್ಟೆ ಮಂಡಳಿ.

Published On - 7:34 pm, Sat, 1 October 22

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ