AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಡರಾತ್ರಿ ರಾಜ್ಯಪಾಲರಿಗೆ ಹೃದಯ ಸಂಬಂಧಿ ಸಮಸ್ಯೆ, ಚಿಕಿತ್ಸೆ ಪಡೆದು ರಾಜ ಭವನಕ್ಕೆ ಮರಳಿದ ಗೆಹ್ಲೋಟ್​

Thawar Chand Gehlot: ಹೃದಯ ಸಂಬಂಧಿ ಸಮಸ್ಯೆ ಹಿನ್ನೆಲೆ ರಾತ್ರಿ 10 ಗಂಟೆ ಸುಮಾರಿಗೆ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಾದ ರಾಜ್ಯಪಾಲ ಗೆಹ್ಲೋಟ್ ಅವರು ಡಿಲಕ್ಸ್ ವಾರ್ಡ್​ನಲ್ಲಿ ಚಿಕಿತ್ಸೆ ಪಡೆದು ರಾತ್ರಿ 12.50ಕ್ಕೆ ರಾಜ ಭವನಕ್ಕೆ ಮರಳಿದ್ದಾರೆ.

ತಡರಾತ್ರಿ ರಾಜ್ಯಪಾಲರಿಗೆ ಹೃದಯ ಸಂಬಂಧಿ ಸಮಸ್ಯೆ, ಚಿಕಿತ್ಸೆ ಪಡೆದು ರಾಜ ಭವನಕ್ಕೆ ಮರಳಿದ ಗೆಹ್ಲೋಟ್​
ರಾಜ್ಯಪಾಲ ಥಾವರ್ ​ಚಂದ್​ ಗೆಹ್ಲೋಟ್​
Shivaprasad B
| Edited By: |

Updated on:Aug 14, 2023 | 6:57 AM

Share

ಬೆಂಗಳೂರು, ಆ.14: ಅನಾರೋಗ್ಯ ಹಿನ್ನೆಲೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್(Thawar Chand Gehlot) ಅವರು ತಡರಾತ್ರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ರಾಜ ಭವನಕ್ಕೆ(Raj Bhavan) ಮರಳಿದ್ದಾರೆ. ಹೃದಯ ಸಂಬಂಧಿ ಸಮಸ್ಯೆ ಹಿನ್ನೆಲೆ ರಾತ್ರಿ 10 ಗಂಟೆ ಸುಮಾರಿಗೆ ಜಯದೇವ ಹೃದ್ರೋಗ ಆಸ್ಪತ್ರೆಗೆ(Jayadeva Hospital) ದಾಖಲಾದ ರಾಜ್ಯಪಾಲ ಗೆಹ್ಲೋಟ್ ಅವರು ಡಿಲಕ್ಸ್ ವಾರ್ಡ್​ನಲ್ಲಿ ಚಿಕಿತ್ಸೆ ಪಡೆದು ರಾತ್ರಿ 12.50ಕ್ಕೆ ರಾಜ ಭವನಕ್ಕೆ ಮರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ವಜೂಭಾಯಿ ವಾಲಾ ಅವರ ಬಳಿಕ ಕರ್ನಾಟಕದ 19ನೇ ರಾಜ್ಯಪಾಲರಾಗಿ ನೇಮಕಗೊಂಡ ಥಾವರ್ ಚಂದ್ ಗೆಹ್ಲೋಟ್ ಅವರು ರಾಜ್ಯಸಭೆ ಸದಸ್ಯರಾಗಿದ್ದರು. ಮಧ್ಯಪ್ರದೇಶದಿಂದ ಕರ್ನಾಟಕದ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿರುವ ಮೊದಲ ವ್ಯಕ್ತಿ. ಜುಲೈ 6, 2021 ರಂದು ಕರ್ನಾಟಕದ ರಾಜ್ಯಪಾಲರಾಗಿ ನೇಮಕಗೊಂಡು 2021 ರ ಜುಲೈ 11 ರಂದು ಅಧಿಕಾರ ವಹಿಸಿಕೊಂಡರು. ಎನ್‌ಡಿಎ ಸರಕಾರದಲ್ಲಿ 2014 ರಿಂದ 2021 ರವರೆಗೆ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣದ ಸಂಪುಟ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ನಗ್ಡಾದಲ್ಲಿ 1948ರ ಮೇ 18ರಂದು ದಲಿತ ಕುಟುಂಬದಲ್ಲಿ ಜನಿಸಿದ ಗೆಹ್ಲೋಟ್, ಉಜ್ಜಯಿನಿಯ ವಿಕ್ರಮ್ ವಿಶ್ವವಿದ್ಯಾಲಯದಿಂದ ಬಿಎ ಪದವಿ ಪಡೆದರು. ಡಾ. ಬಿಆರ್ ಅಂಬೇಡ್ಕರ್ ಸಾಮಾಜಿಕ ವಿಜ್ಞಾನಗಳ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ನೀಡಿ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಗೌರವಿಸಿದೆ.

1977-1980ರವರೆಗೆ ಬಿಜೆಪಿ ಪಕ್ಷದ ಪ್ರಧಾನ ಕಾರ್ಯದರ್ಶಿ ಮತ್ತು ಉಪಾಧ್ಯಕ್ಷರಾಗಿದ್ದರು. 1985ರಲ್ಲಿ ಬಿಜೆಪಿ ಯುವ ಮೋರ್ಚಾದ ಉಪಾಧ್ಯಕ್ಷರಾಗಿದ್ದರು. ಮಧ್ಯಪ್ರದೇಶ ವಿಧಾನಸಭೆಗೆ 1980, 1990, 1993ರಲ್ಲಿ ಚುನಾಯಿತರಾಗಿದ್ದರು. 1986 ರಿಂದ 1987ರವರೆಗೆ ಮಧ್ಯಪ್ರದೇಶದ ಪಕ್ಷದ ಅಧ್ಯಕ್ಷರಾಗಿದ್ದರು. 1996 ರಿಂದ 2009ರವರೆಗೂ ಮಧ್ಯಪ್ರದೇಶದ ಶಾಜಾಪುರ ಕ್ಷೇತ್ರವನ್ನು ಲೋಕಸಭೆಯಲ್ಲಿ ಪ್ರತಿನಿಧಿಸಿದ್ದರು.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:46 am, Mon, 14 August 23

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ