AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ಪರಿಸರ ದಿನವೇ ಅರ್ಧದಶಕದ ಮರವನ್ನು ಕಡಿದು ಧರೆಗುರುಳಿಸಿದರು!

ವಿಶ್ವ ಪರಿಸರ ದಿನವೇ ಅರ್ಧದಶಕಕ್ಕೂ ಹೆಚ್ಚು ಕಾಲ ಬದುಕಿದ್ದ ಮರವೊಂದನ್ನು ಕಡಿದು ಹಾಕಿದ ಘಟನೆ ಆನೆಕಲ್​ನಲ್ಲಿ ನಡೆದಿದೆ. ಸ್ಥಳದಲ್ಲಿ ಗ್ರಾಮಸ್ಥರು ಸೇರುತ್ತಿದ್ದಂತೆ ಕೆಇಬಿ ಮತ್ತು ಕ್ರೇನ್ ಸಿಬ್ಬಂದಿ ಕಾಲ್ಕಿತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ವಿಶ್ವ ಪರಿಸರ ದಿನವೇ ಅರ್ಧದಶಕದ ಮರವನ್ನು ಕಡಿದು ಧರೆಗುರುಳಿಸಿದರು!
ಕಟ್ ಮಾಡಿದ ಮರ
TV9 Web
| Edited By: |

Updated on: Jun 05, 2022 | 3:36 PM

Share

ಆನೇಕಲ್: ವಿಶ್ವ ಪರಿಸರ ದಿನ (World Environment Day)ವೇ ಅರ್ಧದಶಕಕ್ಕೂ ಹೆಚ್ಚು ಕಾಲ ಬದುಕಿದ್ದ ಬೃಹತ್ ಮರ (Tree)ವೊಂದನ್ನು ಧರೆಗುರುಳಿಸಿದ ಆರೋಪ ಕೇಳಿಬಂದಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್‌ ರಸ್ತೆಯಲ್ಲಿ ಇರುವ ಅದಿತಿ ನರ್ಸೀಂಗ್ ಹೋಮ್ ಕಾಲೇಜು ಬಳಿ ಹಸಿರು ಭರಿತ ಮರವನ್ನು ಕಡಿಯಲಾಗಿದೆ. ಅದಿತಿ ನರ್ಸಿಂಗ್ ಹೋಮ್​ಗೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಈ ಮರವನ್ನು ಕತ್ತರಿಸಲಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಅಲ್ಲದೆ ಕೂಡಲೇ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಬರುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Aniruddha Jatkar: ಬೆಂಗಳೂರು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಸಲಹೆಗಳನ್ನು ಮುಂದಿಟ್ಟ ನಟ ಅನಿರುದ್ಧ; ವಿವರ ಇಲ್ಲಿದೆ

50-60 ವರ್ಷದ ಮರ ಮಾತ್ರವಲ್ಲದೆ ಒಟ್ಟಿಗೆ ಮತ್ತೊಂದು ಮರವನ್ನೂ ಕಡಿಯಲಾಗಿದೆ. ಈ ಮರಗಳನ್ನು ಅನುಮತಿ ಇಲ್ಲದೇ ಕಟ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮರಗಳನ್ನು ಕಡಿಯುತ್ತಿರುವ ವಿಚಾರ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಈ ವೇಳೆ ಕೆಇಬಿ ಹಾಗೂ ಕ್ರೇನ್ ಸಿಬ್ಬಂದಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ಆಧುನಿಕ ಕಾಲದಲ್ಲಿ ಮರಗಳನ್ನು ಸ್ಥಳಾಂತರ ಮಾಡುವ ಸಾಧನಗಳು ಇವೆ. ಅವುಗಳನ್ನು ಬಳಸಿ ಮರಗಳನ್ನು ಸ್ಥಳಾಂತರಿಸಿ ರಸ್ತೆ ಅಗಲಿಕರಣ ಇತ್ಯಾದಿ ಅಭಿವೃದ್ಧಿ ಕಾರ್ಯಗಳನ್ನು ನಡೆಸುವಂತೆ ಒತ್ತಾಯಿಸಿದ ಗ್ರಾಮಸ್ಥರೊಬ್ಬರು, ಈ ರೀತಿಯಾಗಿ ಮರಗಳನ್ನು ಕಡಿದು ಹಾಕಿರುವುದನ್ನು ಖಂಡಿಸಿದ್ದಾರೆ.

ಇದನ್ನೂ ಓದಿ: Karnataka Rain: ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ; ಬೆಂಗಳೂರು, ಕರಾವಳಿಯಲ್ಲಿ ಹೈ ಅಲರ್ಟ್

ಇಂದು ಮರಗಳನ್ನು ರಕ್ಷಿಸಿ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ನೀಡುವ ಬದಲು ಈ ರೀತಿ ಮರಗಳನ್ನು ಕಡಿದು ಹಾಕುವುದು ಸರಿಯಲ್ಲ. ಈ ಹಿಂದೆ ಬೇರೆ ಗಿಡಗಳನ್ನು ತಂದು ನಡುತ್ತೇವೆ ಎಂದು ಹೇಳಿದರೂ ಇದುವರೆಗೆ ತಂದು ನಟ್ಟಿಲ್ಲ. ಸರ್ಕಾರ ಗಂಭೀರವಾಗಿ ಪರಿಗಣಿಸಿ ಮರಗಳ ಉಳಿಸುವಿಕೆಗೆ ಸರಿಯಾದ ಕಾನೂನು ಜಾರಿ ಮಾಡಬೇಕು ಎಂದು ಮತ್ತೊಬ್ಬ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ