AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕರ್ತವ್ಯನಿರತ ಸಂಚಾರಿ ಪೊಲೀಸ್​ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ; ಆರೋಪಿ ಬಂಧನ

ಜು.11 ರಂದು ನಗರದ ಬಾಣಸವಾಡಿ ಠಾಣಾ ವ್ಯಾಪ್ತಿಯಲ್ಲಿ ನೋ ಪಾರ್ಕಿಂಗ್​ನಲ್ಲಿ ಕಾರು ನಿಲ್ಲಿಸಿದ್ದ ಹಿನ್ನಲೆ ಬಾಣಸವಾಡಿ ಸಂಚಾರಿ ಠಾಣೆಯ ಪೇದೆ ಉಮೇಶ್ ಎಂಬುವವರು ಕ್ಲಾಂಪ್ ಹಾಕಿದ್ದರು. ಈ ಕಾರಣ ಅವರ ಮೇಲೆ ಹಲ್ಲೆ ಮಾಡಲಾಗಿದ್ದು, ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ಕರ್ತವ್ಯನಿರತ ಸಂಚಾರಿ ಪೊಲೀಸ್​ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ; ಆರೋಪಿ ಬಂಧನ
ಹಲ್ಲೆ ಮಾಡಿದ್ದ ಆರೋಪಿ
Jagadisha B
| Edited By: |

Updated on: Jul 21, 2023 | 11:25 AM

Share

ಬೆಂಗಳೂರು: ಜು.11 ರಂದು ನಗರದ ಬಾಣಸವಾಡಿ(Banaswadi) ಠಾಣಾ ವ್ಯಾಪ್ತಿಯಲ್ಲಿ ನೋ ಪಾರ್ಕಿಂಗ್​ನಲ್ಲಿ ಕಾರು ನಿಲ್ಲಿಸಿದ್ದ ಹಿನ್ನಲೆ ಬಾಣಸವಾಡಿ ಸಂಚಾರಿ ಠಾಣೆಯ ಪೇದೆ ಉಮೇಶ್ ಎಂಬುವವರು ಕ್ಲಾಂಪ್ ಹಾಕಿದ್ದರು. ಈ ಕಾರಣಕ್ಕೆ ನಡುರಸ್ತೆಯಲ್ಲಿಯೇ ಕರ್ತವ್ಯನಿರತ ಪೊಲೀಸ್(Police) ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ್ದರು. ಇದೀಗ ಕೃತ್ಯವೆಸಗಿದ್ದ ಆರೋಪಿಗಳನ್ನ ಬಂಧಿಸಿ, ಕ್ರಿಮಿನಲ್ ಕೇಸ್ ದಾಖಲು ಮಾಡಲಾಗಿದೆ. ಸುಲೇಮಾನ್​ ಬಂಧಿತ ಆರೋಪಿ. ಇನ್ನು ಹಲ್ಲೆಗೊಳಗಾದ ಸಂಚಾರಿ ಪೊಲೀಸ್ ಸಿಬ್ಬಂದಿ ನಿನ್ನೆ ಬಾಣಸವಾಡಿ ಠಾಣೆಗೆ ದೂರು ನೀಡಿದ್ದರು. ಇದೀಗ ಆರೋಪಿಯನ್ನ ಬಂಧಿಸಲಾಗಿದ್ದು, ಘಟನೆ ಕುರಿತು ವಿಚಾರಣೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ಜಂಟಿ ಪೊಲೀಸ್​ ಆಯುಕ್ತ ಎಂ ಎನ್​ ಅನುಚೇತ್​ ಅವರು ಟ್ಟೀಟ್​ ಮಾಡಿದ್ದಾರೆ.

ಘಟನೆ ವಿವರ

ಜು.11 ರ ಸಂಜೆ 6 ಗಂಟೆ ಸುಮಾರಿಗೆ ಪಾರ್ಕಿಂಗ್ ವಿಚಾರವಾಗಿ ಪರಿಶೀಲನೆ ನಡೆಸುತಿದ್ದ ಸಂಚಾರಿ ಪೊಲೀಸ್ ಸಿಬ್ಬಂದಿ ಉಮೇಶ್​. ಈ ವೇಳೆ ಕಾರ್ ನೋ ಪಾರ್ಕಿಂಗ್​ನಲ್ಲಿ ನಿಲ್ಲಿಸಿರುವುದು ಪತ್ತೆಯಾಗಿದೆ. ಹೀಗಾಗಿ ಗಾಡಿಯ ಟೈರ್​ಗೆ ಕ್ಲಾಂಪಿಂಗ್ ಹಾಕಿದ್ದಾರೆ. ಈ ವೇಳೆ ಇದನ್ನು ವ್ಯಕ್ತಿಯೊಬ್ಬ ಪ್ರಶ್ನಿಸಿ, ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಬಳಿಕ ಪೊಲೀಸ್​ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸ್​ ಹಲ್ಲೆ ಮಾಡಿದ ಪ್ರಮುಖ ವ್ಯಕ್ತಿಯನ್ನ ವಶಕ್ಕೆ ಪಡೆದಿದ್ದಾರೆ. ನಿಜಕ್ಕೂ ಹಲ್ಲೆಗೆ ಕಾರಣ ಏನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ:Dakshina Kannada: ಜಾಗದ ವಿಚಾರವಾಗಿ ಯೋಧನ ಪತ್ನಿ ಮೇಲೆ ಹಲ್ಲೆ ಆರೋಪ; ಆಸ್ಪತ್ರೆಗೆ ದಾಖಲು

ಹಲ್ಲೆ ವೇಳೆ ಮಹಿಳೆಯೊರ್ವರನ್ನ ಆಸ್ಪತ್ರೆಗೆ ಕರೆತಂದಿದ್ದ ಆರೋಪಿ

ಇನ್ನು ಹಲ್ಲೆ ಮಾಡಿದ ಆರೋಪಿಯು ಮಹಿಳೆಯೊರ್ವರನ್ನ ಆಸ್ಪತ್ರೆಗೆ ಕರೆತಂದಿದ್ದರು. ಈ ಸಂದರ್ಭದಲ್ಲಿ ಈ ಗಲಾಟೆಯಾಗಿದೆ. ಈ ಕುರಿತು ಕರ್ತವ್ಯನಿರತ ಪೊಲೀಸ್​ ಮೇಲೆ ಹಲ್ಲೆ ಮಾಡಿದ ಆರೋಪಿಯಿಂದ ನಿಖರ ಮಾಹಿತಿ ಪಡೆಯುತ್ತಿದ್ದಾರೆ. ವಿಚಾರಣೆ ಬಳಿಕ ಹಲ್ಲೆಯ ಸತ್ಯ ಅಸತ್ಯತೆಗಳು ಹೊರಬಿಳಲಿದೆ. ಇನ್ನು ಪೊಲೀಸ್​ ಸಿಬ್ಬಂದಿ ಮೇಲೆ ನಡೆದ ಹಲ್ಲೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದ್ದು, ಮಿಶ್ರ ಪ್ರತಿಕ್ರಿಯೆಗಳು ಬರುತ್ತಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಬಿಗ್​​ಬಾಸ್ ಮನೆಯಲ್ಲಿ ಸ್ಪಂದನಾ-ರಾಶಿಕಾ ಕುಸ್ತಿ: ವಿಡಿಯೋ
ಬಿಗ್​​ಬಾಸ್ ಮನೆಯಲ್ಲಿ ಸ್ಪಂದನಾ-ರಾಶಿಕಾ ಕುಸ್ತಿ: ವಿಡಿಯೋ
New Year 2026: ಹೊಸ ವರ್ಷ ಸ್ವಾಗತಿಸಿದ ಮೊದಲ ದೇಶ ನ್ಯೂಜಿಲೆಂಡ್‌
New Year 2026: ಹೊಸ ವರ್ಷ ಸ್ವಾಗತಿಸಿದ ಮೊದಲ ದೇಶ ನ್ಯೂಜಿಲೆಂಡ್‌