AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕರ್ತವ್ಯನಿರತ ಸಂಚಾರಿ ಪೊಲೀಸ್​ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ; ಆರೋಪಿ ಬಂಧನ

ಜು.11 ರಂದು ನಗರದ ಬಾಣಸವಾಡಿ ಠಾಣಾ ವ್ಯಾಪ್ತಿಯಲ್ಲಿ ನೋ ಪಾರ್ಕಿಂಗ್​ನಲ್ಲಿ ಕಾರು ನಿಲ್ಲಿಸಿದ್ದ ಹಿನ್ನಲೆ ಬಾಣಸವಾಡಿ ಸಂಚಾರಿ ಠಾಣೆಯ ಪೇದೆ ಉಮೇಶ್ ಎಂಬುವವರು ಕ್ಲಾಂಪ್ ಹಾಕಿದ್ದರು. ಈ ಕಾರಣ ಅವರ ಮೇಲೆ ಹಲ್ಲೆ ಮಾಡಲಾಗಿದ್ದು, ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ಕರ್ತವ್ಯನಿರತ ಸಂಚಾರಿ ಪೊಲೀಸ್​ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ; ಆರೋಪಿ ಬಂಧನ
ಹಲ್ಲೆ ಮಾಡಿದ್ದ ಆರೋಪಿ
Jagadisha B
| Edited By: |

Updated on: Jul 21, 2023 | 11:25 AM

Share

ಬೆಂಗಳೂರು: ಜು.11 ರಂದು ನಗರದ ಬಾಣಸವಾಡಿ(Banaswadi) ಠಾಣಾ ವ್ಯಾಪ್ತಿಯಲ್ಲಿ ನೋ ಪಾರ್ಕಿಂಗ್​ನಲ್ಲಿ ಕಾರು ನಿಲ್ಲಿಸಿದ್ದ ಹಿನ್ನಲೆ ಬಾಣಸವಾಡಿ ಸಂಚಾರಿ ಠಾಣೆಯ ಪೇದೆ ಉಮೇಶ್ ಎಂಬುವವರು ಕ್ಲಾಂಪ್ ಹಾಕಿದ್ದರು. ಈ ಕಾರಣಕ್ಕೆ ನಡುರಸ್ತೆಯಲ್ಲಿಯೇ ಕರ್ತವ್ಯನಿರತ ಪೊಲೀಸ್(Police) ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ್ದರು. ಇದೀಗ ಕೃತ್ಯವೆಸಗಿದ್ದ ಆರೋಪಿಗಳನ್ನ ಬಂಧಿಸಿ, ಕ್ರಿಮಿನಲ್ ಕೇಸ್ ದಾಖಲು ಮಾಡಲಾಗಿದೆ. ಸುಲೇಮಾನ್​ ಬಂಧಿತ ಆರೋಪಿ. ಇನ್ನು ಹಲ್ಲೆಗೊಳಗಾದ ಸಂಚಾರಿ ಪೊಲೀಸ್ ಸಿಬ್ಬಂದಿ ನಿನ್ನೆ ಬಾಣಸವಾಡಿ ಠಾಣೆಗೆ ದೂರು ನೀಡಿದ್ದರು. ಇದೀಗ ಆರೋಪಿಯನ್ನ ಬಂಧಿಸಲಾಗಿದ್ದು, ಘಟನೆ ಕುರಿತು ವಿಚಾರಣೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ಜಂಟಿ ಪೊಲೀಸ್​ ಆಯುಕ್ತ ಎಂ ಎನ್​ ಅನುಚೇತ್​ ಅವರು ಟ್ಟೀಟ್​ ಮಾಡಿದ್ದಾರೆ.

ಘಟನೆ ವಿವರ

ಜು.11 ರ ಸಂಜೆ 6 ಗಂಟೆ ಸುಮಾರಿಗೆ ಪಾರ್ಕಿಂಗ್ ವಿಚಾರವಾಗಿ ಪರಿಶೀಲನೆ ನಡೆಸುತಿದ್ದ ಸಂಚಾರಿ ಪೊಲೀಸ್ ಸಿಬ್ಬಂದಿ ಉಮೇಶ್​. ಈ ವೇಳೆ ಕಾರ್ ನೋ ಪಾರ್ಕಿಂಗ್​ನಲ್ಲಿ ನಿಲ್ಲಿಸಿರುವುದು ಪತ್ತೆಯಾಗಿದೆ. ಹೀಗಾಗಿ ಗಾಡಿಯ ಟೈರ್​ಗೆ ಕ್ಲಾಂಪಿಂಗ್ ಹಾಕಿದ್ದಾರೆ. ಈ ವೇಳೆ ಇದನ್ನು ವ್ಯಕ್ತಿಯೊಬ್ಬ ಪ್ರಶ್ನಿಸಿ, ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಬಳಿಕ ಪೊಲೀಸ್​ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸ್​ ಹಲ್ಲೆ ಮಾಡಿದ ಪ್ರಮುಖ ವ್ಯಕ್ತಿಯನ್ನ ವಶಕ್ಕೆ ಪಡೆದಿದ್ದಾರೆ. ನಿಜಕ್ಕೂ ಹಲ್ಲೆಗೆ ಕಾರಣ ಏನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ:Dakshina Kannada: ಜಾಗದ ವಿಚಾರವಾಗಿ ಯೋಧನ ಪತ್ನಿ ಮೇಲೆ ಹಲ್ಲೆ ಆರೋಪ; ಆಸ್ಪತ್ರೆಗೆ ದಾಖಲು

ಹಲ್ಲೆ ವೇಳೆ ಮಹಿಳೆಯೊರ್ವರನ್ನ ಆಸ್ಪತ್ರೆಗೆ ಕರೆತಂದಿದ್ದ ಆರೋಪಿ

ಇನ್ನು ಹಲ್ಲೆ ಮಾಡಿದ ಆರೋಪಿಯು ಮಹಿಳೆಯೊರ್ವರನ್ನ ಆಸ್ಪತ್ರೆಗೆ ಕರೆತಂದಿದ್ದರು. ಈ ಸಂದರ್ಭದಲ್ಲಿ ಈ ಗಲಾಟೆಯಾಗಿದೆ. ಈ ಕುರಿತು ಕರ್ತವ್ಯನಿರತ ಪೊಲೀಸ್​ ಮೇಲೆ ಹಲ್ಲೆ ಮಾಡಿದ ಆರೋಪಿಯಿಂದ ನಿಖರ ಮಾಹಿತಿ ಪಡೆಯುತ್ತಿದ್ದಾರೆ. ವಿಚಾರಣೆ ಬಳಿಕ ಹಲ್ಲೆಯ ಸತ್ಯ ಅಸತ್ಯತೆಗಳು ಹೊರಬಿಳಲಿದೆ. ಇನ್ನು ಪೊಲೀಸ್​ ಸಿಬ್ಬಂದಿ ಮೇಲೆ ನಡೆದ ಹಲ್ಲೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದ್ದು, ಮಿಶ್ರ ಪ್ರತಿಕ್ರಿಯೆಗಳು ಬರುತ್ತಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ