AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸ ಹುಡುಕಿಕೊಂಡು ಬೆಂಗಳೂರಿಗೆ ಬಂದ ಯುವತಿಯನ್ನು ದಂಧೆಗೆ ನೂಕಿದ ಗ್ಯಾಂಗ್: ಪ್ರಿಯಕರ ಸೇರಿದಂತೆ ಮೂವರ ಬಂಧನ

ಐಷಾರಾಮಿ ಜೀವನಕ್ಕಾಗಿ ಹಾಗೂ ವಕೀಲರಿಗೆ ಹಣ ನೀಡಲು ಹಣವಿಲ್ಲದೆ ಸುಲಿಗೆಗಿಳಿದ ರೌಡಿ ಆಸಾಮಿಗಳನ್ನು ಸಿಸಿಬಿ ಪೊಲೀಸರು ಬಂಧನ ಮಾಡಿದ್ದಾರೆ.

ಕೆಲಸ ಹುಡುಕಿಕೊಂಡು ಬೆಂಗಳೂರಿಗೆ ಬಂದ ಯುವತಿಯನ್ನು ದಂಧೆಗೆ ನೂಕಿದ ಗ್ಯಾಂಗ್: ಪ್ರಿಯಕರ ಸೇರಿದಂತೆ ಮೂವರ ಬಂಧನ
ಬಂಧಿತ ಆರೋಪಿಳು
TV9 Web
| Edited By: |

Updated on: Aug 20, 2022 | 2:02 PM

Share

ಬೆಂಗಳೂರು: ಕೆಲಸ ಕೊಡಿಸುವುದಾಗಿ ಬೆಂಗಳೂರಿಗೆ ತಂದು ವೇಶ್ಯವಾಟಿಗೆ (prostitution) ದಂಧೆಗೆ ನೂಕಿದ್ದ ಗ್ಯಾಂಗ್​ನ್ನು ಪೊಲೀಸರು ಬಂಧಿಸಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಮಂಜುಳ, ಬ್ರಹ್ಮೇಂದ್ರ, ಶಿವಾನಂದ ಸರ್ಕಲ್ ಬಳಿ ಇರುವ ಸಾಯಿ ಲಾಡ್ಜ್ ಮಾಲೀಕ ಸಂತೋಷ್ ಕೂಡ ಬಂಧನ ಮಾಡಲಾಗಿದೆ. ವೇಶ್ಯಾವಾಟಿಕೆ ಅಡ್ಡ ಮೇಲೆ ದಾಳಿ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ವೇಳೆ ಗ್ಯಾಂಗ್ ರೇಪ್ ಮಾಡಲಾಗಿದೆ ಎಂದು ಯುವತಿ ಹೇಳಿಕೆ ನೀಡಿದ್ದಾಳೆ. ಕಳೆದ ಮೂರು ವರ್ಷಗಳ ಹಿಂದೆ ಮಂಡ್ಯ ಮೂದ ಯುವತಿಯನ್ನು ಪ್ರಿಯಕರನೇ ಬೆಂಗಳೂರಿಗೆ ಕರೆತಂದು ಮಂಜುಳ ಸಂಪರ್ಕಕ್ಕೆ ಬಿಟ್ಟಿದ್ದು, ಮಂಜುಳ ಯುವತಿಯನ್ನು ವೇಶ್ಯಾವಾಟಿಕೆ ಜಾಲಕ್ಕೆ ತಳ್ಳಿದ್ದಾಳೆ. ದಂಧೆಗಾಗಿ ಹೊಟೇಲ್​ಗೆ ಕಳುಹಿಸುತ್ತಿದ್ದ ಪಿಂಪ್​ಗಳು, ಈ ವೇಳೆ ಹಲವರು ಏಕಕಾಲಕ್ಕೆ ದೌರ್ಜನ್ಯ ಎಸಗಿರುವುದಾಗಿ ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: ಸ್ಮಾರ್ಟ್ ಕಾರ್ಡ್ ಹೆಸರಲ್ಲಿ ಜನರಿಗೆ ವಂಚನೆ: ಪ್ರತಿಷ್ಠಿತ ಕಂಪನಿ ವಿರುದ್ಧ ಗಂಭೀರ ಆರೋಪ

ವೇಶ್ಯಾವಾಟಿಕೆಗೆ ಬೆಂಬಲ ನೀಡಿದ ಲಾಡ್ಜ್ ಮಾಲೀಕನನ್ನೂ  ಪೊಲೀಸರು ಬಂಧಿಸಿದ್ದು, ಯುವತಿ ಹೇಳಿಕೆಯನ್ನು ಹೈಗ್ರೌಂಡ್ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ದಂಧೆಯಲ್ಲಿ ಹಲವು ರೌಡಿಗಳು ಭಾಗಿಯಾಗಿರುವ ಬಗ್ಗೆಯೂ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು, ಗ್ಯಾಂಗ್ ರೇಪ್ ಮಾಡಿದ ಆರೋಪಿಗಳು ಹಾಗೂ ರೌಡಿಶೀಟರ್​ಗಳ ಹುಡುಕಾಟಕ್ಕೆ ಪೊಲೀಸರು ಮುಂದಾಗಿದ್ದಾರೆ. ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ನಿರ್ಜನ ಪ್ರದೇಶದಲ್ಲಿ ಒಂಟಿಯಾಗಿ ಬರುತಿದ್ದವರೆ ಇವರ ಟಾರ್ಗೆಟ್:

ಬೆಂಗಳೂರು: ಐಷಾರಾಮಿ ಜೀವನಕ್ಕಾಗಿ ಹಾಗೂ ವಕೀಲರಿಗೆ ಹಣ ನೀಡಲು ಹಣವಿಲ್ಲದೆ ಸುಲಿಗೆಗಿಳಿದ ರೌಡಿ ಆಸಾಮಿಗಳನ್ನು ಸಿಸಿಬಿ ಪೊಲೀಸರು ಬಂಧನ ಮಾಡಿದ್ದಾರೆ. ಮಾರತ್ ಹಳ್ಳಿ ಹಾಗೂ ಪರಪ್ಪನ ಅಗ್ರಹಾರ ರೌಡಿ ಆಸಾಮಿಗಳು ತಮ್ಮ ಮತ್ತಿಬ್ಬರು ಸಹಚರರೊಂದಿಗೆ ಸೇರಿ ಕೃತ್ಯ ಎಸಗಿದ್ದರು. ನಿರ್ಜನ ಪ್ರದೇಶದಲ್ಲಿ ಒಂಟಿಯಾಗಿ ಬರುತಿದ್ದವರ ಟಾರ್ಗೆಟ್ ಮಾಡಿ, ಮಾರಕಾಸ್ತ್ರ ತೊರಿಸಿ ಬೆದರಿಕೆ, ಹಲ್ಲೆ ಮಾಡಿ ಸುಲಿಗೆ ಮಾಡುತ್ತಿದ್ದರು. ಖಚಿತ ಮಾಹಿತಿ ಆಧರಿಸಿ ಆರೋಪಿಗಳ ಬಂಧನ ಮಾಡಿದ್ದು, ಬಂಧಿತರಿಂದ ಮಾರಕಾಸ್ತ್ರಗಳು ವಶಕ್ಕೆ ಪಡೆಯಲಾಗಿದೆ. ಪ್ರಕರಣದ ಮತ್ತೊಬ್ಬ ಹೆಚ್ ಎ ಎಲ್ ರೌಡಿ ಆಸಾಮಿ  ಪರಾರಿಯಾಗಿದ್ದಾನೆ.

ಇದನ್ನೂ ಓದಿ: ಮೂರು ವರ್ಷದ ಬಾಲಕಿ ಕಿಡ್ನ್ಯಾಪ್​ಗೆ ಯತ್ನ: ಸ್ಥಳೀಯರಿಗೆ ಹೆದರಿ ಮಗು ಬಿಟ್ಟು ಪರಾರಿ

ಸಾಲ ಬಾಧೆ ತಾಳಲಾರದೇ ರೈತ ಆತ್ಮಹತ್ಯೆ

ಬಳ್ಳಾರಿ: ಕುರುಗೋಡು ತಾಲೂಕಿನ ಬಾದನಹಟ್ಟಿಯಲ್ಲಿ ಸಾಲಬಾಧೆ ತಾಳಲಾರದೆ ರೈತ ರಾಮಪ್ಪ(30) ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಬ್ಯಾಂಕ್ ಸೇರಿದಂತೆ ವಿವಿಧೆಡೆ 18 ಲಕ್ಷ ರೈತ ಸಾಲ ಮಾಡಿಕೊಂಡಿದ್ದು, ಬೆಳೆ ಹಾನಿಯಾದ ಹಿನ್ನೆಲೆ ಮನನೊಂದು ವಿಷಸೇವಿಸಿ ರಾಮಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುರುಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು