AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

​ಬೆಂಗಳೂರಿನ ಪ್ರತಿಷ್ಠಿತ ಮಠದ ಅರ್ಚಕನ ಜತೆ ಪರಿಚಯ; 1 ಕೋಟಿ ರೂ. ಅಧಿಕ ಹಣ ಪಡೆದು ವಂಚನೆ, ಆರೋಪಿ ಅರೆಸ್ಟ್

ಅಪರಿಚಿತ ವ್ಯಕ್ತಿಗಳನ್ನು ನಂಬುವ ಮುಂಚೆ ಎಚ್ಚರವಾಗಿರುವುದು ಒಳ್ಳೆಯದು. ಮನೆ ಮಗನಂತೆ ಬಂದು, ತಮಗೆ ಗೊತ್ತಾಗದ ಹಾಗೆ ಮನೆಯಲ್ಲಿದ್ದ ಹಣ, ಆಸ್ತಿ ವಂಚನೆ ಮಾಡಿ ಹೋಗುತ್ತಾರೆ. ಅದರಂತೆ ಬೆಂಗಳೂರಿನ ಪ್ರತಿಷ್ಠಿತ ಮಠದ ಅರ್ಚಕನಿಗೆ ಕೋಟಿಗೂ ಅಧಿಕ ಹಣ ಪಡೆದು ವಂಚನೆ ಮಾಡಿದ್ದ ಆರೋಪಿಯನ್ನ ಇದೀಗ ಪೊಲೀಸರು ಬಂಧಿಸಿದ್ದಾರೆ.​

​ಬೆಂಗಳೂರಿನ ಪ್ರತಿಷ್ಠಿತ ಮಠದ ಅರ್ಚಕನ ಜತೆ ಪರಿಚಯ; 1 ಕೋಟಿ ರೂ. ಅಧಿಕ ಹಣ ಪಡೆದು ವಂಚನೆ, ಆರೋಪಿ ಅರೆಸ್ಟ್
ಆರೋಪಿ ಶೇಷಗಿರಿ
Jagadisha B
| Edited By: |

Updated on: Jul 20, 2023 | 12:10 PM

Share

ಬೆಂಗಳೂರು, ಜು.20: ಇತ್ತೀಚೆಗೆ ಬೆಂಗಳೂರಿ(Bengaluru)ನಲ್ಲಿ ಕಳ್ಳತನ, ಕೊಲೆ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದ್ದು, ಆರೋಪಿಗಳಿಗೆ ಪೊಲೀಸರ ಭಯವಿಲ್ಲದಂತೆ ಕಾಣುತ್ತಿದೆ. ದಿನವೂ ಮಹಾನಗರದಲ್ಲಿ ಒಂದಿಲ್ಲೊಂದು ಪ್ರದೇಶಗಳಲ್ಲಿ ಅಪರಾಧ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಈಗಿನ ಕಾಲದಲ್ಲಿ ಯಾರನ್ನ ನಂಬುವುದು ಗೊತ್ತಾಗದಂತ ಪರಿಸ್ಥಿತಿ ಎದುರಾಗಿದೆ. ಹೌದು ಅಪರಿಚಿತ ವ್ಯಕ್ತಿಗಳನ್ನು ನಂಬುವ ಮುಂಚೆ ಎಚ್ಚರವಾಗಿರುವುದು ಒಳ್ಳೆಯದು. ಮನೆ ಮಗನಂತೆ ಬಂದು, ತಮಗೆ ಗೊತ್ತಾಗದ ಹಾಗೆ ಮನೆಯಲ್ಲಿದ್ದ ಹಣ, ಆಸ್ತಿ ವಂಚನೆ ಮಾಡಿ ಹೋಗುತ್ತಾರೆ. ಅದರಂತೆ ಬೆಂಗಳೂರಿನ ಪ್ರತಿಷ್ಠಿತ ಮಠದ ಅರ್ಚಕನಿಗೆ ಕೋಟಿ ಹಣ ಪಡೆದು ವಂಚನೆ ಮಾಡಿದ್ದ ಆರೋಪಿಯನ್ನ ಇದೀಗ ಪೊಲೀಸರು ಬಂಧಿಸಿದ್ದಾರೆ.

ಮಠದ ಸಹಾಯಕನಂತೆ ಬಂದು 1 ಕೋಟಿ 7ಲಕ್ಷ ಹಣ ವಂಚನೆ

ಚೆನ್ನೈ ಮೂಲದವನಾದ ಆರೋಪಿ ಶೇಷಗಿರಿ (45), ತಮಿಳುನಾಡಿನಲ್ಲಿ ಬಿಕಾಂ ಮುಗಿಸಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಬಳಿಕ ಬ್ಯಾಂಕಿಂಗ್​ನಲ್ಲೂ ಕೆಲಸ ಮಾಡಿ ಶೇರು ಮಾರುಕಟ್ಟೆ ಬಗ್ಗೆ ತಿಳಿದುಕೊಂಡಿದ್ದ ಇತ. 2021ರಲ್ಲಿ ಬೆಂಗಳೂರಿಗೆ ಬಂದು, ಪ್ರತಿಷ್ಠಿತ ಮಠದಲ್ಲಿ ರಾಘವೇಂದ್ರ ಅರ್ಚಕರು ಎಂಬುವವರು ಪರಿಚಯವಾಗಿದ್ದರು. ಹೀಗೆ ದಿನದೂಡುತ್ತಾ ಆರೋಪಿ ಶೇಷಗಿರಿ ಅರ್ಚಕರ ಆತ್ಮೀಯತೆ ಗಳಿಸಿ, ಸ್ವಂತ ಮಗನಂತಾಗಿದ್ದ. ಇದನ್ನೇ ಬಂಡವಾಳ ಮಾಡಿಕೊಂಡ ಆತ, ಜಾಗ ಖರೀದಿಸಲು ಹಣ ಡಬಲ್ ಮಾಡಿ ಕೊಡೊದಾಗಿ ಹೇಳಿ ವಿವಿಧ ಹಂತಗಳಲ್ಲಿ ಅರ್ಚಕರ ಬಳಿ ಹಣ ಪಡೆದು ಬರೊಬ್ಬರಿ 1 ಕೋಟಿ 7 ಲಕ್ಷ ವಂಚನೆ ಮಾಡಿದ್ದ ಆರೋಪ ಮಾಡಿದ್ದರು.

ಇದನ್ನೂ ಓದಿ:ಕೊಲೆ ಪ್ರಕರಣದ ಅಪರಾಧಿಯೊಂದಿಗೆ ವಿವಾಹವಾಗಲು ಬಯಸಿದ ಯುವತಿ; ಪ್ರಿಯಕರನಿಗೆ ಪೆರೋಲ್ ನೀಡಿ ಆದೇಶಿಸಿದ ಕರ್ನಾಟಕ ಹೈಕೋರ್ಟ್

ಬಂಧಿತನಿಂದ 45 ಲಕ್ಷ ಹಣ ಹಾಗೂ ಜಾಗದ ದಾಖಲೆ ವಶಕ್ಕೆ

ಇನ್ನು ಅರ್ಚಕನಿಂದ ಹಣ ಪಡೆದು ಶೇರುಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಬಳಿಕ ಮುಳುಗಿಹೊಯ್ತೆಂದು ಹಣ ವಾಪಾಸ್ ಮಾಡದೇ ಪರಾರಿಯಾಗಿದ್ದ. ಈ ಬಗ್ಗೆ ಬನಶಂಕರಿ ಠಾಣೆಯಲ್ಲಿ ಅರ್ಚಕರು ದೂರು ನೀಡಿದ್ದರು. ಇದರನ್ವಯ ತನಿಖೆ ಆರಂಭಿಸಿದ ಪೊಲೀಸರಿಗೆ ಆರೋಪಿಯ ಮತ್ತೊಂದು ಕೃತ್ಯ ಬಯಲಾಗಿತ್ತು. ಶೇಷಗಿರಿ, ಅರ್ಚಕರಿಗೆ ತಿಳಿಯದಂತೆ ಸ್ವಂತ ಪ್ರಾಪರ್ಟಿ ಸಹ ಸೇಲ್ ಡೀಡ್ ಮಾಡಿಕೊಂಡಿದ್ದ. ಈ ಬಗ್ಗೆ ಪೊಲೀಸರು ಪತ್ತೆ ಹಚ್ಚಿ, ಬಳಿಕ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡರು. ನಂತರ ತಮಿಳುನಾಡಿನಲ್ಲಿದ್ದ ಆರೋಪಿಯನ್ನು ಬಂಧಿಸಿ ಕರೆತಂದ ಪೊಲೀಸರು, ಬಂಧಿತನಿಂದ 45 ಲಕ್ಷ ಹಣ ಹಾಗೂ ಜಾಗದ ದಾಖಲೆಯನ್ನ ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!