AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

​ಬೆಂಗಳೂರಿನ ಪ್ರತಿಷ್ಠಿತ ಮಠದ ಅರ್ಚಕನ ಜತೆ ಪರಿಚಯ; 1 ಕೋಟಿ ರೂ. ಅಧಿಕ ಹಣ ಪಡೆದು ವಂಚನೆ, ಆರೋಪಿ ಅರೆಸ್ಟ್

ಅಪರಿಚಿತ ವ್ಯಕ್ತಿಗಳನ್ನು ನಂಬುವ ಮುಂಚೆ ಎಚ್ಚರವಾಗಿರುವುದು ಒಳ್ಳೆಯದು. ಮನೆ ಮಗನಂತೆ ಬಂದು, ತಮಗೆ ಗೊತ್ತಾಗದ ಹಾಗೆ ಮನೆಯಲ್ಲಿದ್ದ ಹಣ, ಆಸ್ತಿ ವಂಚನೆ ಮಾಡಿ ಹೋಗುತ್ತಾರೆ. ಅದರಂತೆ ಬೆಂಗಳೂರಿನ ಪ್ರತಿಷ್ಠಿತ ಮಠದ ಅರ್ಚಕನಿಗೆ ಕೋಟಿಗೂ ಅಧಿಕ ಹಣ ಪಡೆದು ವಂಚನೆ ಮಾಡಿದ್ದ ಆರೋಪಿಯನ್ನ ಇದೀಗ ಪೊಲೀಸರು ಬಂಧಿಸಿದ್ದಾರೆ.​

​ಬೆಂಗಳೂರಿನ ಪ್ರತಿಷ್ಠಿತ ಮಠದ ಅರ್ಚಕನ ಜತೆ ಪರಿಚಯ; 1 ಕೋಟಿ ರೂ. ಅಧಿಕ ಹಣ ಪಡೆದು ವಂಚನೆ, ಆರೋಪಿ ಅರೆಸ್ಟ್
ಆರೋಪಿ ಶೇಷಗಿರಿ
ಜಗದೀಶ ಬಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 20, 2023 | 12:10 PM

Share

ಬೆಂಗಳೂರು, ಜು.20: ಇತ್ತೀಚೆಗೆ ಬೆಂಗಳೂರಿ(Bengaluru)ನಲ್ಲಿ ಕಳ್ಳತನ, ಕೊಲೆ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದ್ದು, ಆರೋಪಿಗಳಿಗೆ ಪೊಲೀಸರ ಭಯವಿಲ್ಲದಂತೆ ಕಾಣುತ್ತಿದೆ. ದಿನವೂ ಮಹಾನಗರದಲ್ಲಿ ಒಂದಿಲ್ಲೊಂದು ಪ್ರದೇಶಗಳಲ್ಲಿ ಅಪರಾಧ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಈಗಿನ ಕಾಲದಲ್ಲಿ ಯಾರನ್ನ ನಂಬುವುದು ಗೊತ್ತಾಗದಂತ ಪರಿಸ್ಥಿತಿ ಎದುರಾಗಿದೆ. ಹೌದು ಅಪರಿಚಿತ ವ್ಯಕ್ತಿಗಳನ್ನು ನಂಬುವ ಮುಂಚೆ ಎಚ್ಚರವಾಗಿರುವುದು ಒಳ್ಳೆಯದು. ಮನೆ ಮಗನಂತೆ ಬಂದು, ತಮಗೆ ಗೊತ್ತಾಗದ ಹಾಗೆ ಮನೆಯಲ್ಲಿದ್ದ ಹಣ, ಆಸ್ತಿ ವಂಚನೆ ಮಾಡಿ ಹೋಗುತ್ತಾರೆ. ಅದರಂತೆ ಬೆಂಗಳೂರಿನ ಪ್ರತಿಷ್ಠಿತ ಮಠದ ಅರ್ಚಕನಿಗೆ ಕೋಟಿ ಹಣ ಪಡೆದು ವಂಚನೆ ಮಾಡಿದ್ದ ಆರೋಪಿಯನ್ನ ಇದೀಗ ಪೊಲೀಸರು ಬಂಧಿಸಿದ್ದಾರೆ.

ಮಠದ ಸಹಾಯಕನಂತೆ ಬಂದು 1 ಕೋಟಿ 7ಲಕ್ಷ ಹಣ ವಂಚನೆ

ಚೆನ್ನೈ ಮೂಲದವನಾದ ಆರೋಪಿ ಶೇಷಗಿರಿ (45), ತಮಿಳುನಾಡಿನಲ್ಲಿ ಬಿಕಾಂ ಮುಗಿಸಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಬಳಿಕ ಬ್ಯಾಂಕಿಂಗ್​ನಲ್ಲೂ ಕೆಲಸ ಮಾಡಿ ಶೇರು ಮಾರುಕಟ್ಟೆ ಬಗ್ಗೆ ತಿಳಿದುಕೊಂಡಿದ್ದ ಇತ. 2021ರಲ್ಲಿ ಬೆಂಗಳೂರಿಗೆ ಬಂದು, ಪ್ರತಿಷ್ಠಿತ ಮಠದಲ್ಲಿ ರಾಘವೇಂದ್ರ ಅರ್ಚಕರು ಎಂಬುವವರು ಪರಿಚಯವಾಗಿದ್ದರು. ಹೀಗೆ ದಿನದೂಡುತ್ತಾ ಆರೋಪಿ ಶೇಷಗಿರಿ ಅರ್ಚಕರ ಆತ್ಮೀಯತೆ ಗಳಿಸಿ, ಸ್ವಂತ ಮಗನಂತಾಗಿದ್ದ. ಇದನ್ನೇ ಬಂಡವಾಳ ಮಾಡಿಕೊಂಡ ಆತ, ಜಾಗ ಖರೀದಿಸಲು ಹಣ ಡಬಲ್ ಮಾಡಿ ಕೊಡೊದಾಗಿ ಹೇಳಿ ವಿವಿಧ ಹಂತಗಳಲ್ಲಿ ಅರ್ಚಕರ ಬಳಿ ಹಣ ಪಡೆದು ಬರೊಬ್ಬರಿ 1 ಕೋಟಿ 7 ಲಕ್ಷ ವಂಚನೆ ಮಾಡಿದ್ದ ಆರೋಪ ಮಾಡಿದ್ದರು.

ಇದನ್ನೂ ಓದಿ:ಕೊಲೆ ಪ್ರಕರಣದ ಅಪರಾಧಿಯೊಂದಿಗೆ ವಿವಾಹವಾಗಲು ಬಯಸಿದ ಯುವತಿ; ಪ್ರಿಯಕರನಿಗೆ ಪೆರೋಲ್ ನೀಡಿ ಆದೇಶಿಸಿದ ಕರ್ನಾಟಕ ಹೈಕೋರ್ಟ್

ಬಂಧಿತನಿಂದ 45 ಲಕ್ಷ ಹಣ ಹಾಗೂ ಜಾಗದ ದಾಖಲೆ ವಶಕ್ಕೆ

ಇನ್ನು ಅರ್ಚಕನಿಂದ ಹಣ ಪಡೆದು ಶೇರುಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಬಳಿಕ ಮುಳುಗಿಹೊಯ್ತೆಂದು ಹಣ ವಾಪಾಸ್ ಮಾಡದೇ ಪರಾರಿಯಾಗಿದ್ದ. ಈ ಬಗ್ಗೆ ಬನಶಂಕರಿ ಠಾಣೆಯಲ್ಲಿ ಅರ್ಚಕರು ದೂರು ನೀಡಿದ್ದರು. ಇದರನ್ವಯ ತನಿಖೆ ಆರಂಭಿಸಿದ ಪೊಲೀಸರಿಗೆ ಆರೋಪಿಯ ಮತ್ತೊಂದು ಕೃತ್ಯ ಬಯಲಾಗಿತ್ತು. ಶೇಷಗಿರಿ, ಅರ್ಚಕರಿಗೆ ತಿಳಿಯದಂತೆ ಸ್ವಂತ ಪ್ರಾಪರ್ಟಿ ಸಹ ಸೇಲ್ ಡೀಡ್ ಮಾಡಿಕೊಂಡಿದ್ದ. ಈ ಬಗ್ಗೆ ಪೊಲೀಸರು ಪತ್ತೆ ಹಚ್ಚಿ, ಬಳಿಕ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡರು. ನಂತರ ತಮಿಳುನಾಡಿನಲ್ಲಿದ್ದ ಆರೋಪಿಯನ್ನು ಬಂಧಿಸಿ ಕರೆತಂದ ಪೊಲೀಸರು, ಬಂಧಿತನಿಂದ 45 ಲಕ್ಷ ಹಣ ಹಾಗೂ ಜಾಗದ ದಾಖಲೆಯನ್ನ ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!