AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಗವದ್ಗೀತೆ ಮೂಲ ಪುಸ್ತಕದ ಬಗ್ಗೆ ಕೇಂದ್ರ ಸರ್ಕಾರದ ಬಳಿಯೇ ಮಾಹಿತಿ ಇಲ್ಲ: ವಕೀಲ ಸುರೇಂದ್ರ ಉಗಾರೆ

ಮಕ್ಕಳಿಗೆ ಕಲಿಸಲು ಮುಂದಾಗಿರುವ ಭಗವದ್ಗೀತೆ ಯಾವುದು? ಸಂಸ್ಕೃತದಲ್ಲಿದ್ದ ಭಗವದ್ಗೀತೆ ಹಿಂದಿ, ಇಂಗ್ಲಿಷ್​, ಕನ್ನಡ ಭಾಷೆಗೆ ಅಧಿಕೃತವಾಗಿ ಭಾಷಾಂತರ ಮಾಡಿದವರು ಯಾರು? ಈ ಬಗ್ಗೆ ಕೇಂದ್ರ ಸರ್ಕಾರ ಸಂಸ್ಕೃತಿ ಇಲಾಖೆ ಬಳಿಯೇ ಮಾಹಿತಿ ಇಲ್ಲ ಎಂದು ವಕೀಲ ಸುರೇಂದ್ರ ಉಗಾರೆ ತಿಳಿಸಿದ್ದಾರೆ.

ಭಗವದ್ಗೀತೆ ಮೂಲ ಪುಸ್ತಕದ ಬಗ್ಗೆ ಕೇಂದ್ರ ಸರ್ಕಾರದ ಬಳಿಯೇ ಮಾಹಿತಿ ಇಲ್ಲ: ವಕೀಲ ಸುರೇಂದ್ರ ಉಗಾರೆ
ವಕೀಲ ಸುರೇಂದ್ರ ಉಗಾರೆ
TV9 Web
| Edited By: |

Updated on:Mar 21, 2022 | 3:20 PM

Share

ಬೆಳಗಾವಿ: ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸಾಕಷ್ಟ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಸದ್ಯ ಈ ಕುರಿತು ಬೆಳಗಾವಿಯಲ್ಲಿ ಆರ್‌ಟಿಐ(RTI) ಕಾರ್ಯಕರ್ತ, ವಕೀಲ ಸುರೇಂದ್ರ ಉಗಾರೆ ಹೇಳಿಕೆ ನೀಡಿದ್ದಾರೆ. ಭಗವದ್ಗೀತೆ(Bhagavad Gita) ಮೂಲ ಪುಸ್ತಕದ ಬಗ್ಗೆ ಕೇಂದ್ರ ಸರ್ಕಾರದ ಬಳಿಯೇ ಮಾಹಿತಿ ಇಲ್ಲ ಎಂದಿರುವ ಅವರು, ಭಗವದ್ಗೀತೆ ಮೂಲ ಪುಸ್ತಕದ ಪ್ರತಿ ಎಲ್ಲಿದೆ? ಮಾನ್ಯತೆ ಪಡೆದ ಅಧಿಕೃತ ಪುಸ್ತಕ(Book), ಪ್ರಕಾಶಕರ ಪಟ್ಟಿ ಬಗ್ಗೆ ಮಾಹಿತಿ ನೀಡುವಂತೆ ಅರ್ಜಿ ಕೇಂದ್ರ ಸಂಸ್ಕೃತಿ ಇಲಾಖೆಗೆ ಆರ್‌ಟಿಐಯಡಿ ಅರ್ಜಿ ಸಲ್ಲಿಸಿದ್ದಾರೆ.

ಈ ಬಗ್ಗೆ ತಮ್ಮ ಮಾಹಿತಿ ಇಲ್ಲ ಎಂದು ಕೇಂದ್ರ ಸಂಸ್ಕೃತಿ ಸಚಿವಾಲಯದಿಂದ ಉತ್ತರ ಬಂದಿದೆ. ಪವಿತ್ರಗ್ರಂಥ ಭಗವದ್ಗೀತೆ ಪಠ್ಯದಲ್ಲಿ ಅಳವಡಿಕೆ ಬಗ್ಗೆ ನಮಗೆ ಅಭ್ಯಂತರ ಇಲ್ಲ. ಆದರೆ ಭಗವದ್ಗೀತೆ ಮೂಲ ಪ್ರತಿ, ಪ್ರಕಾಶಕರ ಪಟ್ಟಿ ನೀಡಬೇಕು. ಮಕ್ಕಳಿಗೆ ಕಲಿಸಲು ಮುಂದಾಗಿರುವ ಭಗವದ್ಗೀತೆ ಯಾವುದು? ಸಂಸ್ಕೃತದಲ್ಲಿದ್ದ ಭಗವದ್ಗೀತೆ ಹಿಂದಿ, ಇಂಗ್ಲಿಷ್​, ಕನ್ನಡ ಭಾಷೆಗೆ ಅಧಿಕೃತವಾಗಿ ಭಾಷಾಂತರ ಮಾಡಿದವರು ಯಾರು? ಈ ಬಗ್ಗೆ ಕೇಂದ್ರ ಸರ್ಕಾರ ಸಂಸ್ಕೃತಿ ಇಲಾಖೆ ಬಳಿಯೇ ಮಾಹಿತಿ ಇಲ್ಲ ಎಂದು ವಕೀಲ ಸುರೇಂದ್ರ ಉಗಾರೆ ತಿಳಿಸಿದ್ದಾರೆ.

ಬಳಿಕ ಮಾತನಾಡಿದ ಅವರು, ಗುಜರಾತ್ ಸರ್ಕಾರ, ರಾಜ್ಯ ಸರ್ಕಾರ ಮಕ್ಕಳಿಗೆ ಕಲಿಸಲು ಹೊರಟಿರುವ ಭಗವದ್ಗೀತೆ ಯಾವುದು? ಭಗವದ್ಗೀತೆ ಮೂಲ ಭಾಷೆ ಸಂಸ್ಕೃತಿಯಲ್ಲಿತ್ತು ಅಂತಾ ಹೇಳ್ತಾರೆ. ಮೂಲ ಗ್ರಂಥ, ಅಧಿಕೃತವಾಗಿ ಭಾಷಾಂತರ ಮಾಡಿದವರು ಯಾರು? ಈ ಬಗ್ಗೆ ಹೇಳದಿದ್ರೆ ವಿದ್ಯಾರ್ಥಿಗಳಿಗೆ ತಪ್ಪು ಸಂದೇಶ ಹೋಗುತ್ತದೆ. ಮೊದಲು ಇದನ್ನು ಬಹಿರಂಗಪಡಿಸಿ ಸ್ಪಷ್ಟಪಡಿಸಿ ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸುವುದು ನಮ್ಮ ಧ್ಯೇಯವಾಗಿದೆ; ಯಾದಗಿರಿಯಲ್ಲಿ ಸಿಎಂ ಬೊಮ್ಮಾಯಿ ಮಾತು

ಶಾಲೆಯಲ್ಲಿ ಭಗವದ್ಗೀತೆ ಕಲಿಸುವುದನ್ನು ಸ್ವಾಗತಿಸ್ತೇನೆ; ನೈತಿಕ ವಿಚಾರ ಕಲಿಸುವುದಕ್ಕೆ ನಮ್ಮ ವಿರೋಧವಿಲ್ಲ: ಸಿದ್ದರಾಮಯ್ಯ

Published On - 3:09 pm, Mon, 21 March 22

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್