AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶನ ವಿಸರ್ಜನೆಗೆಂದು ಕೆರೆಯ ಆಳ ತಿಳಿಯಲು ಸ್ನೇಹಿತರ ಜೊತೆ ಹೋದಾಗ ಯುವಕ ನೀರಿನಲ್ಲಿ ಮುಳುಗಿ ಸಾವು

ಗಣೇಶನ ವಿಸರ್ಜನೆಗೆಂದು ಕೆರೆಯ ಆಳ ತಿಳಿಯಲು ಸ್ನೇಹಿತರ ಜೊತೆ ಹೋಗಿದ್ದಾಗ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲ್ಲೂಕು ಕುದುರೆಗೆರೆ ಗ್ರಾಮದ ಕೆರೆಯಲ್ಲಿ ನಡೆದಿದೆ.

ಗಣೇಶನ ವಿಸರ್ಜನೆಗೆಂದು ಕೆರೆಯ ಆಳ ತಿಳಿಯಲು ಸ್ನೇಹಿತರ ಜೊತೆ ಹೋದಾಗ ಯುವಕ ನೀರಿನಲ್ಲಿ ಮುಳುಗಿ ಸಾವು
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on:Aug 22, 2022 | 3:12 PM

Share

ಬೆಂಗಳುರು: ಗಣೇಶನ ವಿಸರ್ಜನೆಗೆಂದು ಕೆರೆಯ (Lake) ಆಳ ತಿಳಿಯಲು ಸ್ನೇಹಿತರ ಜೊತೆ ಹೋಗಿದ್ದಾಗ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ (Bengaluru North) ತಾಲ್ಲೂಕು ಕುದುರೆಗೆರೆ ಗ್ರಾಮದ ಕೆರೆಯಲ್ಲಿ ನಡೆದಿದೆ. ಚಿಕ್ಕಬಾಣಾವರ ಬಸವರಾಜ ಬೌಳಿ (19) ಮೃತ ದುರ್ದೈವಿ. ಮೃತ‌ ಯುವಕ ದ್ವಿತೀಯ ಪಿಯುಸಿ ವ್ಯಾಸಂಗ ಮುಗಿಸಿ ಇತ್ತೀಚೆಗಷ್ಟೇ ಕಾಲೇಜಿಗೆ ಅಡ್ಮೀಷನ್ ಪಡೆದಿದ್ದನು.

ಯುವಕರು ಗಣೇಶ ಮೂರ್ತಿ ಕೂರಿಸಿದ ಬಳಿಕ ಇದೇ ಕೆರೆಯಲ್ಲಿ ಮೂರ್ತಿ ವಿಸರ್ಜನೆ ಮಾಡಬೇಕೆಂದು ನಿರ್ಧರಿಸಿದ್ದರು. ಈ ಸಂಬಂಧ ಕೆರೆಯ ಆಳ ತಿಳಿಯಲೆಂದು ನೀರಿಗೆ ಇಳಿದ ಯುವಕ ಮುಳುಗಿ ಸಾವನ್ನಪ್ಪಿದ್ದಾನೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ: ಅಪಘಾತದಲ್ಲಿ ಅಕ್ಕ-ತಮ್ಮ ದುರ್ಮರಣ

ಬೆಂಗಳೂರು ಗ್ರಾಮಾಂತರ: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಅಕ್ಕ-ತಮ್ಮ ದುರ್ಮರಣ ಹೊಂದಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಅಟ್ಟೂರು ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಬೆಂಗಳೂರಿನ ಶಾಜಿಯಾ ಭಾನು(26) ಇಬ್ರಾಹಿಂ ಸಾಬ್(16) ಮೃತರು. ಡಾಬಾ ಬಳಿ ಲಾರಿ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದಕ್ಕೆ ಕಾರು ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿಯಾಗ್ತಿದ್ದಂತೆ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಮುರುಗಮಲ್ಲ ದರ್ಗಾಗೆ ಹೋಗಿ, ಚಿಂತಾಮಣಿಯಿಂದ ಬೈಲನರಸಾಪುರಕ್ಕೆ ಬಂದು ಟೀ ಕುಡಿದು ನಂತರ ಕೋಲಾರ ಹೆದ್ದಾರಿ ಮೂಲಕ ಕಾರು ವಾಪಸಾಗುತ್ತಿದ್ದಾಗ ಅಪಘಾತ ನಡೆದಿದೆ. ಕಾರಿನಲ್ಲಿ ಒಂದೇ ಕುಟುಂಬದ 9 ಜನರು ಪ್ರಯಾಣಿಸುತ್ತಿದ್ದರು. ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿ ಸವಾರ ಸಾವು

ತುಮಕೂರು: ಬೈಕ್​​ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸಾವನ್ನಪ್ಪಿರುವಂತಹ ಘಟನೆ ತುಮಕೂರು ತಾಲೂಕಿನ ಅಜ್ಜಗೊಂಡನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಘಟನೆ ನಡೆದಿದೆ. ಮೃತನ ಗುರುತು ಪತ್ತೆಯಾಗಿಲ್ಲ. ಕೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಹಳಿಯಾಳ: ಅಪಘಾತ, ಇಬ್ಬರು ಸಾವು

ಧಾರವಾಡ: ಖಾಸಗಿ ಬಸ್, ಕ್ರೂಸರ್​ ಮುಖಾಮುಖಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ಕಲಘಟಗಿ ತಾಲೂಕಿನ ಧಾರವಾಡ ಕ್ರಾಸ್ ಬಳಿ ನಡೆದಿದೆ. ಮೃತರು ಉತ್ತರ ಕನ್ನಡ ಜಿಲ್ಲೆ ಹಳಿಯಾಳ ತಾಲೂಕಿನ ನಂದಿಗದ್ದಿ ಗ್ರಾಮದವರು ಎಂದು ತಿಳಿದುಬಂದಿದೆ. ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಹುಬ್ಬಳ್ಳಿ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ವಿವರಗಳು ತಿಳಿದುಬರಬೇಕಿದೆ.

ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಐವರು ಆರೋಪಿಗಳ ಬಂಧನ

ವಿಜಯನಗರ: ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಐವರು ಆರೋಪಿಗಳನ್ನು ಹೊಸಪೇಟೆ ಟೌನ್​ ಠಾಣೆ ಪೊಲೀಸರು ಬಂಧಿಸಿದ್ದಾರೆ. 500 ರೂಪಾಯಿ ಮುಖಬೆಲೆಯ 312 ಖೋಟಾ ನೋಟುಗಳ ಜಪ್ತಿ ಮಾಡಲಾಗಿದೆ. ಕುಬೇರಪ್ಪ ತಳವಾರ, ರುದ್ರೇಶ ಎಸ್.ರಾಜೇಶ್, ಪ್ರಕಾಶ, ರವಿ ಬಂಧಿತ ಆರೋಪಿಗಳು.  ಆರೋಪಿಗಳು ವೆಂಕಟೇಶ್ವರ ಲಾಡ್ಜ್​ನಲ್ಲಿ ಖೋಟಾನೋಟು ಚಲಾವಣೆಗೆ ಯತ್ನಿಸಿದ್ದರು. ಹೊಸಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 3:02 pm, Mon, 22 August 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ