AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಕೆಲವೇ ಸೆಕೆಂಡ್​ಗಳಲ್ಲಿ ಬರೊಬ್ಬರಿ 1.70 ಕೋಟಿ ರೂ. ಮೌಲ್ಯದ ಚಿನ್ನ ಎಗರಿಸಿದ ಖದೀಮರು

ಸಿನಿಮೀಯ ರೀತಿಯಲ್ಲಿ ಚಿನ್ನವಿರುವ ಬ್ಯಾಗ್​ನ್ನು ಕಳ್ಳರು ದೋಚಿರುವ ಘಟನೆ ಕೆ.ಆರ್​.ಮಾರ್ಕೆಟ್​ ಫ್ಲೈಓವರ್ ಮೇಲೆ ನಡೆದಿದೆ. ವ್ಯಾಪಾರಿಯೊಬ್ಬರ ಬ್ಯಾಗ್​ನಲಿದ್ದ 1.70 ಕೋಟಿ ಮೌಲ್ಯದ ಚಿನ್ನವನ್ನ ಕಳ್ಳತನ ಮಾಡಿದ್ದಾರೆ.

Bengaluru News: ಕೆಲವೇ ಸೆಕೆಂಡ್​ಗಳಲ್ಲಿ ಬರೊಬ್ಬರಿ 1.70 ಕೋಟಿ ರೂ. ಮೌಲ್ಯದ ಚಿನ್ನ ಎಗರಿಸಿದ ಖದೀಮರು
ಪ್ರಾತಿನಿಧಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Jul 15, 2023 | 10:40 AM

Share

ಬೆಂಗಳೂರು, ಜು.15: ಮಹಾನಗರದಲ್ಲಿ ಕಳ್ಳರ ಹಾವಳಿ ಮೀತಿಮೀರಿದೆ. ನಿನ್ನೆಯಷ್ಟೇ ಪೊಲೀಸರ ಸೋಗಿನಲ್ಲಿ ಯುವಕರಿದ್ದ ಬಾಡಿಗೆ ರೂಮಿಗೆ ನುಗ್ಗಿದ ಖದೀಮರು, ಚಾಕು ತೋರಿಸಿ ಹಣ, ಚಿನ್ನ ಕಳ್ಳತನ ಮಾಡಿಕೊಂಡು ಹೋಗಿದ್ದರು. ಇದೀಗ ಸಿನಿಮೀಯ ರೀತಿಯಲ್ಲಿ ಚಿನ್ನವಿರುವ ಬ್ಯಾಗ್​ನ್ನು ಕಳ್ಳರು ದೋಚಿರುವ ಘಟನೆ ಕೆ.ಆರ್​.ಮಾರ್ಕೆಟ್(KR Market)​ ಫ್ಲೈಓವರ್ ಮೇಲೆ ನಡೆದಿದೆ. ವ್ಯಾಪಾರಿಯೊಬ್ಬರು ಬೈಕ್​ನಲ್ಲಿ 1.70 ಕೋಟಿ ಮೌಲ್ಯದ ಚಿನ್ನದ ಬ್ಯಾಗ್​ ತೆಗೆದುಕೊಂಡು ಹೋಗುವಾಗ, ವ್ಯಾಪಾರಿ ಬೈಕ್​ಗೆ ಅಡ್ಡಬಂದ ಇಬ್ಬರು ದುಷ್ಕರ್ಮಿಗಳು ಬೈಕ್​ ನಿಧಾನ ಮಾಡಿಸಿದ್ದಾರೆ. ನಂತರ ನೇರವಾಗಿ ಚಿನ್ನವಿರುವ ಬ್ಯಾಗ್ ಕದ್ದು ಪರಾರಿಯಾಗಿದ್ದಾರೆ. ಈ ಕುರಿತು ಕಾಟನ್​ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನಾ ಸ್ಥಳದಲ್ಲಿಲ್ಲ ಸಿಸಿಟಿವಿ ಕ್ಯಾಮೆರಾ

ಇನ್ನು ಈ ಘಟನೆ ನಡೆಯುತ್ತಿದ್ದಂತೆ ಹತ್ತಿರದ ಕಾಟನ್​ಪೇಟೆ ಪೊಲೀಸ್ ಠಾಣೆಗೆ ವ್ಯಾಪಾರಿ ದೂರು ದಾಖಲಿಸಿದ್ದಾರೆ. ಘಟನೆ ಸಂಭಂದ ತನಿಖೆ ಶುರುಮಾಡಿರುವ ಪೊಲೀಸರು, ಸುತ್ತಮುತ್ತಲೂ ಎಲ್ಲಿಯಾದರೂ ಸಿಸಿಟಿವಿ ಕ್ಯಾಮೆರಾ ಇದೆಯೇ ಎಂದೂ ಹುಡುಕಾಡಿದ್ದು, ಘಟನೆ ಸ್ಥಳ ಸೇರಿ ಹತ್ತಿರ ಎಲ್ಲಿಯೂ ಕ್ಯಾಮೆರಾ ಅಳವಡಿಕೆಯಾಗಿಲ್ಲ. ಇದೀಗ ಹಲವಾರು ಅನುಮಾನ ಒಳಗೊಂಡು ತನಿಖೆ ಆರಂಭಿಸಿದ್ದಾರೆ. ಇನ್ನೂ ಬೆಂಗಳೂರಿನಲ್ಲಿ ಕಳ್ಳರ ಕಾಟ ಹೆಚ್ಚಾಗಿದೆ. ದಿನವೂ ನಗರದಾದ್ಯಂತ ಒಂದಾದರೂ ಇಂತಹ ಕೇಸ್​ಗಳು ಪತ್ತೆಯಾಗುತ್ತಿವೆ. ಕೂಡಲೇ ಪೊಲೀಸರು ಎಚ್ಚೆತ್ತುಕೊಂಡು ಇದಕ್ಕೆ ಬ್ರೇಕ್​ ಹಾಕಬೇಕಾಗಿದೆ.

ಇದನ್ನೂ ಓದಿ:Bengaluru News: ಶೋಕಿ ಜೀವನಕ್ಕೆ ಕಳ್ಳತನವನ್ನೇ ಕಾಯಕ ಮಾಡಿಕೊಂಡ ಖತರ್ನಾಕ್ ಗ್ಯಾಂಗ್​ ಅರೆಸ್ಟ್​

ನಗರಸಭೆಗೆ ಸೇರಿದ ವಾಣಿಜ್ಯ ಮಳಿಗೆಯಲ್ಲಿ ಬೆಂಕಿ ಅವಘಡ; ದುಷ್ಕರ್ಮಿಗಳು ಕೃತ್ಯ ಶಂಕೆ

ಕೊಪ್ಪಳ: ನಗರಸಭೆ ಪಕ್ಕದ ವಾಣಿಜ್ಯ ಮಳಿಗೆಯೊಂದರಲ್ಲಿ ಬೆಂಕಿ ಅವಘಡ ನಡೆದಿದೆ. ನಗರಸಭೆ ವಿದ್ಯುತ್ ಗುತ್ತಿಗೆದಾರ ಮೌಲಾಸಾಬ ಬನ್ನಿಕೊಪ್ಪ ಎಂಬುವವರು ಬಾಡಿಗೆ ಹೊಂದಿರುವ ಮಳಿಗೆಗೆ ಬೆಂಕಿ ಹಚ್ಚಿರುವ ಹಂಚಲಾಗಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಇದು ದಾಖಲೆಗಳ ನಾಶಕ್ಕಾಗಿ ಬೆಂಕಿ ಹಚ್ಚಿರುವ ಸಾಧ್ಯತೆಯಿರುವು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಕುರಿತು ಕೊಪ್ಪಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್