AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಕೆಲವೇ ಸೆಕೆಂಡ್​ಗಳಲ್ಲಿ ಬರೊಬ್ಬರಿ 1.70 ಕೋಟಿ ರೂ. ಮೌಲ್ಯದ ಚಿನ್ನ ಎಗರಿಸಿದ ಖದೀಮರು

ಸಿನಿಮೀಯ ರೀತಿಯಲ್ಲಿ ಚಿನ್ನವಿರುವ ಬ್ಯಾಗ್​ನ್ನು ಕಳ್ಳರು ದೋಚಿರುವ ಘಟನೆ ಕೆ.ಆರ್​.ಮಾರ್ಕೆಟ್​ ಫ್ಲೈಓವರ್ ಮೇಲೆ ನಡೆದಿದೆ. ವ್ಯಾಪಾರಿಯೊಬ್ಬರ ಬ್ಯಾಗ್​ನಲಿದ್ದ 1.70 ಕೋಟಿ ಮೌಲ್ಯದ ಚಿನ್ನವನ್ನ ಕಳ್ಳತನ ಮಾಡಿದ್ದಾರೆ.

Bengaluru News: ಕೆಲವೇ ಸೆಕೆಂಡ್​ಗಳಲ್ಲಿ ಬರೊಬ್ಬರಿ 1.70 ಕೋಟಿ ರೂ. ಮೌಲ್ಯದ ಚಿನ್ನ ಎಗರಿಸಿದ ಖದೀಮರು
ಪ್ರಾತಿನಿಧಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Jul 15, 2023 | 10:40 AM

Share

ಬೆಂಗಳೂರು, ಜು.15: ಮಹಾನಗರದಲ್ಲಿ ಕಳ್ಳರ ಹಾವಳಿ ಮೀತಿಮೀರಿದೆ. ನಿನ್ನೆಯಷ್ಟೇ ಪೊಲೀಸರ ಸೋಗಿನಲ್ಲಿ ಯುವಕರಿದ್ದ ಬಾಡಿಗೆ ರೂಮಿಗೆ ನುಗ್ಗಿದ ಖದೀಮರು, ಚಾಕು ತೋರಿಸಿ ಹಣ, ಚಿನ್ನ ಕಳ್ಳತನ ಮಾಡಿಕೊಂಡು ಹೋಗಿದ್ದರು. ಇದೀಗ ಸಿನಿಮೀಯ ರೀತಿಯಲ್ಲಿ ಚಿನ್ನವಿರುವ ಬ್ಯಾಗ್​ನ್ನು ಕಳ್ಳರು ದೋಚಿರುವ ಘಟನೆ ಕೆ.ಆರ್​.ಮಾರ್ಕೆಟ್(KR Market)​ ಫ್ಲೈಓವರ್ ಮೇಲೆ ನಡೆದಿದೆ. ವ್ಯಾಪಾರಿಯೊಬ್ಬರು ಬೈಕ್​ನಲ್ಲಿ 1.70 ಕೋಟಿ ಮೌಲ್ಯದ ಚಿನ್ನದ ಬ್ಯಾಗ್​ ತೆಗೆದುಕೊಂಡು ಹೋಗುವಾಗ, ವ್ಯಾಪಾರಿ ಬೈಕ್​ಗೆ ಅಡ್ಡಬಂದ ಇಬ್ಬರು ದುಷ್ಕರ್ಮಿಗಳು ಬೈಕ್​ ನಿಧಾನ ಮಾಡಿಸಿದ್ದಾರೆ. ನಂತರ ನೇರವಾಗಿ ಚಿನ್ನವಿರುವ ಬ್ಯಾಗ್ ಕದ್ದು ಪರಾರಿಯಾಗಿದ್ದಾರೆ. ಈ ಕುರಿತು ಕಾಟನ್​ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನಾ ಸ್ಥಳದಲ್ಲಿಲ್ಲ ಸಿಸಿಟಿವಿ ಕ್ಯಾಮೆರಾ

ಇನ್ನು ಈ ಘಟನೆ ನಡೆಯುತ್ತಿದ್ದಂತೆ ಹತ್ತಿರದ ಕಾಟನ್​ಪೇಟೆ ಪೊಲೀಸ್ ಠಾಣೆಗೆ ವ್ಯಾಪಾರಿ ದೂರು ದಾಖಲಿಸಿದ್ದಾರೆ. ಘಟನೆ ಸಂಭಂದ ತನಿಖೆ ಶುರುಮಾಡಿರುವ ಪೊಲೀಸರು, ಸುತ್ತಮುತ್ತಲೂ ಎಲ್ಲಿಯಾದರೂ ಸಿಸಿಟಿವಿ ಕ್ಯಾಮೆರಾ ಇದೆಯೇ ಎಂದೂ ಹುಡುಕಾಡಿದ್ದು, ಘಟನೆ ಸ್ಥಳ ಸೇರಿ ಹತ್ತಿರ ಎಲ್ಲಿಯೂ ಕ್ಯಾಮೆರಾ ಅಳವಡಿಕೆಯಾಗಿಲ್ಲ. ಇದೀಗ ಹಲವಾರು ಅನುಮಾನ ಒಳಗೊಂಡು ತನಿಖೆ ಆರಂಭಿಸಿದ್ದಾರೆ. ಇನ್ನೂ ಬೆಂಗಳೂರಿನಲ್ಲಿ ಕಳ್ಳರ ಕಾಟ ಹೆಚ್ಚಾಗಿದೆ. ದಿನವೂ ನಗರದಾದ್ಯಂತ ಒಂದಾದರೂ ಇಂತಹ ಕೇಸ್​ಗಳು ಪತ್ತೆಯಾಗುತ್ತಿವೆ. ಕೂಡಲೇ ಪೊಲೀಸರು ಎಚ್ಚೆತ್ತುಕೊಂಡು ಇದಕ್ಕೆ ಬ್ರೇಕ್​ ಹಾಕಬೇಕಾಗಿದೆ.

ಇದನ್ನೂ ಓದಿ:Bengaluru News: ಶೋಕಿ ಜೀವನಕ್ಕೆ ಕಳ್ಳತನವನ್ನೇ ಕಾಯಕ ಮಾಡಿಕೊಂಡ ಖತರ್ನಾಕ್ ಗ್ಯಾಂಗ್​ ಅರೆಸ್ಟ್​

ನಗರಸಭೆಗೆ ಸೇರಿದ ವಾಣಿಜ್ಯ ಮಳಿಗೆಯಲ್ಲಿ ಬೆಂಕಿ ಅವಘಡ; ದುಷ್ಕರ್ಮಿಗಳು ಕೃತ್ಯ ಶಂಕೆ

ಕೊಪ್ಪಳ: ನಗರಸಭೆ ಪಕ್ಕದ ವಾಣಿಜ್ಯ ಮಳಿಗೆಯೊಂದರಲ್ಲಿ ಬೆಂಕಿ ಅವಘಡ ನಡೆದಿದೆ. ನಗರಸಭೆ ವಿದ್ಯುತ್ ಗುತ್ತಿಗೆದಾರ ಮೌಲಾಸಾಬ ಬನ್ನಿಕೊಪ್ಪ ಎಂಬುವವರು ಬಾಡಿಗೆ ಹೊಂದಿರುವ ಮಳಿಗೆಗೆ ಬೆಂಕಿ ಹಚ್ಚಿರುವ ಹಂಚಲಾಗಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಇದು ದಾಖಲೆಗಳ ನಾಶಕ್ಕಾಗಿ ಬೆಂಕಿ ಹಚ್ಚಿರುವ ಸಾಧ್ಯತೆಯಿರುವು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಕುರಿತು ಕೊಪ್ಪಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!